Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚಂದರಗಿಯವರಿಗೆ ಬಿಜೆಪಿ ಟಿಕೆಟ್ ನೀಡಲು ಒತ್ತಾಯ

 

ಸವದತ್ತಿ :
ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಬಿಜೆಪಿಗಾಗಿ ದುಡಿಯುತ್ತ ಬಂದಿರುವ ಸವದತ್ತಿಯ ಪ್ರತಿಷ್ಠಿತ ಚಂದರಗಿ ಮನೆತನದ ಯುವ ನಾಯಕ ರುದ್ರಣ್ಣ ಚಂದರಗಿ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಕಾರ್ಯಕರ್ತರಿಂದ ವ್ಯಕ್ತವಾಗಿದೆ.

ಸುರೇಶ ಅಂಗಡಿ, ಬಾಬಾಗೌಡ ಪಾಟೀಲ ಅವರ ಗೆಲುವಿಗೆ ಸವದತ್ತಿ ತಾಲೂಕಿನ ಹಳ್ಳಿ ಹಳ್ಳಿಗಳಲ್ಲಿ ಸಂಚರಿಸಿ ಮತ ನೀಡಲು ಮನವಿ ಮಾಡಿದವರು ರುದ್ರಣ್ಣ ಚಂದರಗಿ ಹಾಗೂ ಅವರ ತಂದೆ ಸಿದ್ದಪ್ಪ ಚಂದರಗಿ ಅವರು. ಸವದತ್ತಿ ತಾಲೂಕಿನ ಪ್ರತಿಷ್ಠಿತ ಇಟ್ನಾಳ ಮನೆತನದಿಂದ ಬಂದಿರುವ ರುದ್ರಣ್ಣ ಚಂದರಗಿ ಅವರು ಬೆಳಗಾವಿಯಲ್ಲಿ ಪತ್ರಿಕೋದ್ಯಮ ಸೇರಿ ನಂತರ ಉದ್ಯಮಿಯಾಗಿ ಸಮಾಜದಲ್ಲಿ ಕ್ರಿಯಾಶೀಲವಾಗಿ ಗುರುತಿಸಿಕೊಂಡವರು.
ಆರ್ ಎಸ್ ಎಸ್ ಹಾಗೂ
ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಾಗಿ ಸಕ್ರಿಯವಾಗಿ ದುಡಿಯುತ್ತ ಬಂದವರು.

ಬೆಳಗಾವಿ ನಗರದಲ್ಲಿ ನೆಲೆಯೂರಿದ್ದರೂ ಇಂದಿಗೂ ರುದ್ರಣ್ಣ ಚಂದರಗಿ ಅವರು ತಮ್ಮ ಮೂಲ ಸವದತ್ತಿ ತಾಲೂಕಿನ ಜತೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ತಾಲೂಕಿನಲ್ಲಿ ನಡೆಯುವ ಯಾವುದೇ ಕಾರ್ಯಕ್ರಮಕ್ಕೆ ತೆರಳಿ ಜನ ಸಾಮಾನ್ಯರ ಜತೆ ಸಂಪರ್ಕ ಇಟ್ಟುಕೊಂಡಿದ್ದಾರೆ.
ಸಾಹಿತ್ಯಿಕ, ಸಾಂಸ್ಕೃತಿಕ, ಯುವಕ ಸಂಘಟನೆಗಳು, ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಪ್ರತಿಯೊಂದು ಸಮಾಜ ಸೇವಾ ಚಟುವಟಿಕೆಗಳಿಗೆ ಅವರು ನೆರವು ನೀಡುತ್ತ ಬಂದಿದ್ದಾರೆ.

ಬಿಜೆಪಿಯ ಅತ್ಯಂತ ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿರುವ ರುದ್ರಣ್ಣ ಚಂದರಗಿ ಅವರ ಸೇವೆ ಗಮನಿಸಿ ಬಿಜೆಪಿ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಸವದತ್ತಿ ಮತಕ್ಷೇತ್ರದ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡಬೇಕು ಎಂದು ಕಾರ್ಯಕರ್ತರು ಹಾಗೂ ನಾಯಕರು ಪಕ್ಷದ ವರಿಷ್ಠರಿಗೆ ಹಕ್ಕೊತ್ತಾಯ ಮಾಡಿದ್ದಾರೆ. ಅವರ ಪಕ್ಷ ನಿಷ್ಠೆಗೆ ಬಿಜೆಪಿ ಆದ್ಯತೆ ನೀಡುತ್ತದೋ ಕಾದು ನೋಡಬೇಕು.qa
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ