Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೇಪಾಳದಲ್ಲಿ ಇಂದು ನೂತನ ಸಚಿವ ಸಂಪುಟ ರಚನೆ

ಕಠ್ಮಂಡು : ನೇಪಾಳದ ನೂತನ ಹಂಗಾಮಿ ಪ್ರಧಾನಿ ಆಗಿರುವ ಸುಶೀಲಾ ಕಾರ್ಕಿ ಅವರು ಗೃಹ ಸಚಿವರು, ವಿದೇಶಾಂಗ ಹಾಗೂ ರಕ್ಷಣಾ ಸಚಿವರು ಸೇರಿದಂತೆ ಕೆಲವೇ ಸಚಿವರನ್ನು ಒಳಗೊಂಡ ಸಂಪುಟವನ್ನು ಭಾನುವಾರ ರಚಿಸಲಿದ್ದಾರೆ ಎಂದು ಅಧ್ಯಕ್ಷರ ಕಚೇರಿಯ ಮೂಲಗಳು ತಿಳಿಸಿವೆ.

'ಜೆನ್‌-ಝೀ' ಪ್ರತಿಭಟನೆ ವೇಳೆ ಪ್ರಧಾನಿ ಕಚೇರಿಯ ಕಟ್ಟಡವೂ ಬೆಂಕಿಗೆ ಆಹುತಿಯಾಗಿರುವ ಕಾರಣ ಸಿಂಗದರ್ಬಾರ್ ಸಂಕೀರ್ಣದಲ್ಲಿ ಗೃಹ ಸಚಿವಾಲಯಕ್ಕಾಗಿ ನೂತನವಾಗಿ ನಿರ್ಮಿಸಿರುವ ಕಚೇರಿಯನ್ನೇ ಪ್ರಧಾನಿ ಕಚೇರಿಯನ್ನಾಗಿ ಮಾರ್ಪಾಡು ಮಾಡಲಾಗುತ್ತಿದೆ ಎಂದೂ ತಿಳಿದುಬಂದಿದೆ.

ಮಾರ್ಚ್‌ 5ಕ್ಕೆ ಚುನಾವಣೆ:
ನೇಪಾಳದ ಮುಂದಿನ ಸಾರ್ವತ್ರಿಕ ಚುನಾವಣೆಯು 2026ರ ಮಾರ್ಚ್ 5ರಂದು ನಡೆಯಲಿದೆ ಎಂದು ಅಧ್ಯಕ್ಷ ರಾಮಚಂದ್ರ ಪೌದಲ್ ಅವರ ಕಚೇರಿಯು ಘೋಷಿಸಿದೆ.

ಹಂಗಾಮಿ ಪ್ರಧಾನಿ ಸುಶೀಲಾ ಕಾರ್ಕಿ ಅವರ ಶಿಫಾರಸಿನ ಮೇರೆಗೆ ಶುಕ್ರವಾರ ತಡರಾತ್ರಿಯೇ ಸಂಸತ್ತನ್ನು ಅಧ್ಯಕ್ಷ ಪೌದೆಲ್ ವಿಸರ್ಜಿಸಿದ್ದರು.

ಇದಕ್ಕೆ ಸಂಬಂಧಿಸಿದಂತೆ ಅಧ್ಯಕ್ಷರ ಕಚೇರಿಯು ಪ್ರಕಟಣೆ ಹೊರಡಿಸಿದೆ. ' 2025ರ ಸೆಪ್ಟೆಂಬರ್ 12ರ ರಾತ್ರಿ 11 ರಿಂದ ಅನ್ವಯವಾಗುವಂತೆ ಸಂಸತ್ ಅನ್ನು ವಿಸರ್ಜಿಸಲಾಗುತ್ತಿದ್ದು, 2026ರ ಮಾರ್ಚ್ 5ಕ್ಕೆ ಸಾರ್ವತ್ರಿಕ ಚುನಾವಣೆಯನ್ನು ನಿಗದಿ ಪಡಿಸಲಾಗಿದೆ' ಎಂದು ಪ್ರಕಟಣೆ ತಿಳಿಸಿದೆ.

ಸಂಸತ್‌ ವಿಸರ್ಜನೆ ಅಸಂವಿಧಾನಿಕ: ರಾತ್ರೋರಾತ್ರಿ ಸಂಸತ್ತನ್ನು ವಿಸರ್ಜಿಸಿರುವ ನೇಪಾಳದ ಅಧ್ಯಕ್ಷರ ತೀರ್ಮಾನವನ್ನು ಇಲ್ಲಿನ ಪ್ರಮುಖ ರಾಜಕೀಯ ಪಕ್ಷಗಳು ಹಾಗೂ ವಕೀಲರ ಸಂಘಟನೆಗಳು ಖಂಡಿಸಿದ್ದು, ಇದು ಅಸಂವಿಧಾನಿಕ ನಡೆ ಹಾಗೂ ನಿರಂಕುಶಾಧಿಕಾರದ ಪ್ರತೀಕ ಎಂದು ಆರೋಪಿಸಿವೆ.

ಕಠ್ಮಂಡುವಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿಗೀಡಾದವರ ಸ್ಮರಣಾರ್ಥ ಜನರು ಶನಿವಾರ ಮೇಣದ ಬತ್ತಿ ಬೆಳಗಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ