Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಡು ನುಡಿಗಾಗಿ ಸೇವೆ ಸಲ್ಲಿಸಿದವರಿಗೆ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ

ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರಕಟ

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರತಿ ವರ್ಷ ನೀಡುವ ‘ಗಡಿನಾಡ ಚೇತನ ರಾಜ್ಯ ಪ್ರಶಸ್ತಿ’ಗೆ ಕೇರಳದ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ ಸೇರಿ ಮೂವರು ಆಯ್ಕೆಯಾಗಿದ್ದಾರೆ. ನಾಡು, ನುಡಿ, ಸಾಹಿತ್ಯ ಹಾಗೂ ಕನ್ನಡ ಭಾಷೆಗಾಗಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಹಾಗೂ ಹೊರ ರಾಜ್ಯದ ಗಡಿ ಕನ್ನಡ ಪ್ರದೇಶಗಳ ಸಂಘ- ಸಂಸ್ಥೆಗಳು, ಮಹನೀಯರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.
ಮಾರ್ಚ್‌ 1ರಂದು ನಡೆದ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ನೇತೃತ್ವದ ಆಯ್ಕೆ ಸಮಿತಿ ಸಭೆಯಲ್ಲಿ 2023-24ನೇ ಸಾಲಿನ “ಗಡಿನಾಡ ಚೇತನ” ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಭಾಲ್ಕಿ ಹಿರೇಮಠದ ಪೂಜ್ಯ ಶ್ರೀ ಡಾ.ಚನ್ನಬಸವ ಪಟ್ಟದೇವರು ಹೆಸರಲ್ಲಿ ಸ್ಥಾಪಿಸಿರುವ ಪ್ರಶಸ್ತಿಗೆ ಕೇರಳದ ಕಾಸರಗೋಡಿನ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡದ ಏಕೀಕರಣ ಹೋರಾಟದ ವೀರಾಗ್ರಣಿ ಡಾ.ಜಯದೇವಿತಾಯಿ ಲಿಗಾಡೆ ಅವರ ಹೆಸರಲ್ಲಿ ಸ್ಥಾಪಿಸಿರುವ ಪ್ರಶಸ್ತಿಗೆ ಬೀದರಿನ ಪಂಚಾಕ್ಷರಿ ಪುಣ್ಯಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಹಾಗೂ ಹಾಗೂ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಪ್ರಶಸ್ತಿಗೆ ಬೆಳಗಾವಿಯ ಸಾಹಿತಿ ಪ್ರೊ.ಬಿ.ಎಸ್.ಗವಿಮಠ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಹಾಗೂ ಸನ್ಮಾನ ಒಳಗೊಂಡಿದೆ.

ಈ ಪ್ರಶಸ್ತಿಗಳಿಗೆ ಆಯ್ಕೆ ಮಾಡಲು 2023- 24ನೇ ಸಾಲಿನಲ್ಲಿ ಸರ್ಕಾರ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯಲ್ಲಿ‌ ಆಯ್ಕೆ ಸಮಿತಿ ರಚಿಸಿತ್ತು. ಸಮಿತಿಯಲ್ಲಿ ಸಾಹಿತಿ ಡಾ.ಸರಜೂ ಕಾಟ್ಕರ್, ಆಂಧ್ರಪ್ರದೇಶದ ಕನ್ನಡ ಪ್ರಾಧ್ಯಾಪಕರಾದ ಡಾ.ಎಂ.ಎಸ್.ದುರ್ಗಾ ಪ್ರವೀಣ, ದಕ್ಷಿಣ ಕನ್ನಡ ಜಿಲ್ಲೆಯ ಕನ್ನಡ ಪ್ರಾಧ್ಯಾಪಕ ಡಾ.ಆರ್.ನಾಗಪ್ಪಗೌಡ ಮತ್ತು ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ