Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾರತದ ನೂತನ ಸಿಡಿಎಸ್ ಆಗಿ ಜನರಲ್ ರಾಜಾ ಸುಬ್ರಮಣಿ ಅಧಿಕಾರ ಸ್ವೀಕಾರ

ನವದೆಹಲಿ: ಭಾರತದ ನೂತನ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಆಗಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರು ಭಾನುವಾರ (ಮೇ 31) ಅಧಿಕಾರ ವಹಿಸಿಕೊಂಡಿದ್ದಾರೆ. ಮೂರೂ ಸೇನಾ ಪಡೆಗಳ ನಡುವೆ ಸಮನ್ವಯತೆಯನ್ನು ಬಲಪಡಿಸುವುದು ಮತ್ತು ಮಿಲಿಟರಿ ಥಿಯೇಟರ್ ಕಮಾಂಡ್ ಯೋಜನೆ ಜಾರಿಗೆ ತರುವುದು ಅವರ ಪ್ರಮುಖ ಆದ್ಯತೆಗಳಾಗಿವೆ.
ಜನರಲ್ ಸುಬ್ರಮಣಿ ಅವರ ಬಗ್ಗೆ…
ಪಾಕಿಸ್ತಾನ ಮತ್ತು ಚೀನಾ ವಿಷಯಗಳಲ್ಲಿ ರಕ್ಷಣಾ ತಜ್ಞರೆಂದು ಹೆಸರಾಗಿರುವ ಜನರಲ್ ಸುಬ್ರಮಣಿ ಅವರು, ಸಿಡಿಎಸ್ ಆಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದಲ್ಲಿ (NSCS) ಮಿಲಿಟರಿ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ವರ್ಷ ಜುಲೈ 31 ರಂದು ಅವರು ಸೇನಾ ಉಪ ಮುಖ್ಯಸ್ಥರಾಗಿ (ವೈಸ್ ಚೀಫ್ ಆಫ್ ಆರ್ಮಿ ಸ್ಟಾಫ್) ನಿವೃತ್ತರಾಗಿದ್ದರು.

ಸಿಡಿಎಸ್ ಆಗಿ ಜನರಲ್ ಸುಬ್ರಮಣಿ ಅವರ ಪ್ರಾಥಮಿಕ ಜವಾಬ್ದಾರಿಯು, ಮೂರೂ ಸೇವೆಗಳ ನಡುವೆ ಜಂಟಿ ಕಾರ್ಯಾಚರಣೆಯನ್ನು ‘ಸಮಗ್ರ ಥಿಯೇಟರ್ ಕಮಾಂಡ್’ಗಳ ರಚನೆ ಮತ್ತು ಅನುಷ್ಠಾನದ ಮೂಲಕ ಮಿಲಿಟರಿ ಥಿಯೇಟರೈಸೇಶನ್ ಯೋಜನೆಯನ್ನು ಮುನ್ನಡೆಸುವುದಾಗಿದೆ.
ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ತಮ್ಮ ಸುದೀರ್ಘ ಮತ್ತು ಮಿಲಿಟರಿ ವೃತ್ತಿಜೀವನದಲ್ಲಿ, ಅವರು ವ್ಯಾಪಕ ಶ್ರೇಣಿಯಯಲ್ಲಿ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಹಲವು ಪ್ರಮುಖ ಕಮಾಂಡ್, ಸ್ಟಾಫ್ ಮತ್ತು ತರಬೇತಿ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅವರು ಜುಲೈ 1, 2024 ರಿಂದ ಜುಲೈ 31, 2025 ರವರೆಗೆ ಸೇನಾ ಉಪ ಮುಖ್ಯಸ್ಥರಾಗಿ ಮತ್ತು ಅದಕ್ಕೂ ಮುನ್ನ ಮಾರ್ಚ್ 2023 ರಿಂದ ಜೂನ್ 2024 ರವರೆಗೆ ಸೆಂಟ್ರಲ್ ಕಮಾಂಡ್‌ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸಿದ್ದರು.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉತ್ತರ ಕನ್ನಡ ಜಿಲ್ಲೆಯಲ್ಲಿ ಜಲಸಾಹಸ ಕ್ರೀಡೆಗಳಿಗೆ ನಿಷೇಧಭಾರತದ ನೂತನ ಸಿಡಿಎಸ್ ಆಗಿ ಜನರಲ್ ರಾಜಾ ಸುಬ್ರಮಣಿ ಅಧಿಕಾರ ಸ್ವೀಕಾರಹಿಮಾಚಲಪ್ರದೇಶ ಮಹಾನಗರ ಪಾಲಿಕೆ ಚುನಾವಣೆ: ಆಡಳಿತಾರೂಢ ಕಾಂಗ್ರೆಸ್ಸಿಗೆ ಮುಖಭಂಗ, ಬಿಜೆಪಿಗೆ ಭರ್ಜರಿ ಜಯತೆರೆಯ ಮರೆಯಲ್ಲಿ ಸಂಪುಟ ರಚನೆ ಜೋರು : ಯಾರು ಸಚಿವರಾಗಬಹುದು ?ಧೋನಿ, ರೋಹಿತ್ ಸಾಲಿಗೆ ಸೇರಿದ ಪಾಟಿದಾರ್IPL ಟ್ರೋಫಿ ಗೆದ್ದ RCBಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?ಆರೆಂಜ್ ಕ್ಯಾಪ್, ಸರಣಿಶ್ರೇಷ್ಠ ಹಲವು ಪ್ರಶಸ್ತಿ ಗೆದ್ದ ವೈಭವಐಪಿಎಲ್ 2026 ಫೈನಲ್ : ಬೌಲರ್‌ಗಳ ಕರಾಮತ್ತು, ಕೊಹ್ಲಿ ಅಬ್ಬರ; ಸತತ 2ನೇ ಬಾರಿ ಐಪಿಎಲ್ ಚಾಂಪಿಯನ್‌ ಆದ ಆರ್‌ಸಿಬಿಸತತ ಎರಡನೇ ಬಾರಿಗೆ ಐಪಿಎಲ್  ಚಾಂಪಿಯನ್ ಆದ ಆರ್‌ಸಿಬಿಅಭಿನವ ಸಿದ್ಧಲಿಂಗ ಶ್ರೀ ಜನ್ಮದಿನ ನಾಳೆ ರಕ್ತದಾನ ಶಿಬಿರ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ