Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೇಪಾಳದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಮಿಸಿದ ಜನರಲ್-ಝಡ್ ಪ್ರತಿಭಟನಾಕಾರರು

ಕಠ್ಮಂಡು: ನೇಪಾಳದಲ್ಲಿ ಮಂಗಳವಾರ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಅವರ ಸರ್ಕಾರವನ್ನು ಪದಚ್ಯುತಗೊಳಿಸಿದ ಜನರಲ್-ಝಡ್ ಪ್ರತಿಭಟನಾಕಾರರ ನೇತೃತ್ವದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ, ದೇಶದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ನೇಪಾಳದ ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ.

ಸುಶೀಲಾ ಕರ್ಕಿ ಅವರು ಬಾಲೆನ್ ಶಾ ಗಿಂತ ಹೆಚ್ಚಿನ ಮತಗಳನ್ನು ಪಡೆದರು. ಮೂಲಗಳ ಪ್ರಕಾರ, ವರ್ಚುವಲ್ ಸಭೆಯಲ್ಲಿ, ಸುಶೀಲಾ ಕರ್ಕಿ ಅವರು ಶೇಕಡಾ 31 ರಷ್ಟು ಮತಗಳನ್ನು ಪಡೆದರೆ, ಕಠ್ಮಂಡು ಮೇಯರ್ ಮತ್ತು ಕಠ್ಮಂಡು ಮೇಯರ್ ಬಾಲೆನ್ ಶಾ ಅವರು ಶೇಕಡಾ 27 ರಷ್ಟು ಮತಗಳನ್ನು ಪಡೆದರು, ಇದು ಜೆನ್-ಝಡ್ ಚಳವಳಿಯ ನಾಯಕ ಎಂದು ಪರಿಗಣಿಸಲಾಗಿದ್ದ ಬಾಲೆನ್‌ ಶಾ ಗಿಂತ ಸುಶೀಲಾ ಕರ್ಕಿ ಹೆಚ್ಚು ಸ್ವೀಕಾರಾರ್ಹ ಆಯ್ಕೆಯಾಗಲು ಕಾರಣವಾಯಿತು.

ನೇಪಾಳದಲ್ಲಿ ಸರ್ಕಾರ ರಚನೆ ಮಾಡುವ ಕುರಿತು ಸೇನೆ ಜೊತೆ ಮಾತುಕತೆ ನಡೆಸಲು ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರಿಗೆ ಜನರಲ್ ಝಡ್ ಪ್ರತಿಭಟನಾಕಾರರು ಹೊಣೆಗಾರಿಕೆ ನೀಡಿದ್ದಾರೆ. ಬುಧವಾರ ಸಂಜೆ 6 ತಾಸುಗಳ ಕಾಲ ನಡೆದ ಮ್ಯಾರಥಾನ್ ಸಭೆಯ ನಂತರ ಪ್ರತಿಭಟನಾಕಾರರು ಈ ನಿರ್ಧಾರಕ್ಕೆ ಬಂದಿದ್ದಾರೆ.
ಜನರಲ್ ಝಡ್ ಪ್ರತಿಭಟನಾಕಾರರ ಬೇಡಿಕೆಗಳಲ್ಲಿ ಹಿಂದಿನ ಪ್ರಧಾನಿ, ಗೃಹ ಸಚಿವರು ಮತ್ತು ಸಾಮೂಹಿಕ ಹತ್ಯೆಗಳಿಗೆ ಆದೇಶ ನೀಡಿದ ಎಲ್ಲರನ್ನು ತಕ್ಷಣ ಬಂಧಿಸಿ ಕ್ರಮ ಕೈಗೊಳ್ಳುವುದು, ಎರಡು ಅವಧಿಗಿಂತ ಹೆಚ್ಚು ಕಾಲ ಪ್ರಧಾನಿಯಾಗುವುದನ್ನು ತಡೆಯುವ ನಿಬಂಧನೆ ಇರುವ ಹೊಸ ಸಂವಿಧಾನವನ್ನು ರಚಿಸುವುದು, ಸಿಐಎಎ ಮತ್ತು ನ್ಯಾಯಾಂಗದಂತಹ ಸಾಂವಿಧಾನಿಕ ಸಂಸ್ಥೆಗಳಲ್ಲಿ ರಾಜಕೀಯ ಪ್ರಭಾವಿತ ನೇಮಕಾತಿಗಳನ್ನು ತಕ್ಷಣವೇ ರದ್ದುಗೊಳಿಸುವುದು ಮತ್ತು ಅರ್ಹತೆ ಆಧಾರಿತ ನೇಮಕಾತಿಗಳನ್ನು ಮಾಡಬೇಕು ಎಂಬುದು ಸೇರಿವೆ.

ಸುಶೀಲಾ ಕರ್ಕಿ ಯಾರು..?
ಸುಶೀಲಾ ಕರ್ಕಿ ನೇಪಾಳದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಎಂಬ ಹೆಗ್ಗಳಿಕೆ ಪಡೆದವರು. ಅವರು ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣು ಮನೋಭಾವಕ್ಕೆ ಹೆಸರುವಾಸಿಯಾಗಿದ್ದಾರೆ.
ಸುಶೀಲಾ ಕರ್ಕಿ ಅವರು ನೇಪಾಳದ ಮಹೇಂದ್ರ ಮೊರಾಂಗ್ ಕ್ಯಾಂಪಸ್‌ನಿಂದ ಬಿಎ ಮತ್ತು ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ರಾಜಕೀಯ ವಿಜ್ಞಾನದಲ್ಲಿ ಎಂಎ ಪದವಿ ಪಡೆದಿದ್ದಾರೆ. ನಂತರ ಅವರು ನೇಪಾಳದ ತ್ರಿಭುವನ್ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದರು ಮತ್ತು ಬೋಧನಾ ವೃತ್ತಿಯನ್ನು ಪ್ರಾರಂಭಿಸಿದರು.
ನಂತರ ವಕೀಲಿಕೆ ವೃತ್ತಿ ಆರಂಭಿಸಿದರು. ನಂತರ ವೃತ್ತಿಯಲ್ಲಿ ಉನ್ನತ ಸ್ಥಾನಕ್ಕೆ ಏರಿ ನೇಪಾಳದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಜುಲೈ 11, 2016 ರಂದು ನೇಮಕಗೊಂಡ ಅವರು, ಹಲವಾರು ಉನ್ನತ ಮಟ್ಟದ ಭ್ರಷ್ಟಾಚಾರ ವಿರೋಧಿ ಪ್ರಕರಣಗಳ ವಿಚಾರಣೆಯ ನೇತೃತ್ವ ವಹಿಸಿದ್ದರು.

ಅವರ ಅಧಿಕಾರಾವಧಿಯಲ್ಲಿ, ಆಗಿನ ಮಾಹಿತಿ ಮತ್ತು ಸಂವಹನ ಸಚಿವ ಜೈಪ್ರಕಾಶಪ್ರಸಾದ ಗುಪ್ತಾ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಪಡಿಸಲಾಯಿತು. ನೇಪಾಳದ ಅಧಿಕಾರ ದುರುಪಯೋಗದ ತನಿಖಾ ಆಯೋಗದ ಮಾಜಿ ಮುಖ್ಯ ಆಯುಕ್ತ ಲೋಕಮಾನ ಸಿಂಗ್ ವಿರುದ್ಧವೂ ಅವರು ದಿಟ್ಟ ತೀರ್ಪು ನೀಡಿದ್ದರು.
2017 ರಲ್ಲಿ, ಸುಶೀಲಾ ಕರ್ಕಿ ವಿರುದ್ಧ ಆಗಿನ ಮಾವೋವಾದಿ ನೇತೃತ್ವದ ಸರ್ಕಾರದಿಂದ ದೋಷಾರೋಪಣೆ ಮಾಡುವ ಪ್ರಯತ್ನ ನಡೆಸಿತ್ತು. ಆದರೆ ಸಾರ್ವಜನಿಕರು ಮತ್ತು ನ್ಯಾಯಾಂಗದಿಂದ ಬಂದ ಪ್ರತಿಕ್ರಿಯೆಯ ನಂತರ ಆ ಅರ್ಜಿಯನ್ನು ಹಿಂತೆಗೆದುಕೊಳ್ಳಲಾಯಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!