Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರೈತರಿಗೆ ಸಿಹಿ ಸುದ್ದಿ: ಭತ್ತ, ರಾಗಿ, ಜೋಳ, ಮೆಕ್ಕೆಜೋಳ ಬೆಂಬಲ ಬೆಲೆ ಹೆಚ್ಚಳ

ನವದೆಹಲಿ :
ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ರಾಗಿ, ಭತ್ತ, ಜೋಳ, ಮೆಕ್ಕೆಜೋಳ, ಶೇಂಗಾ, ಹತ್ತಿ, ತೊಗರಿ, ಉದ್ದು, ಹೆಸರು ಸೇರಿದಂತೆ 15 ಧಾನ್ಯಗಳ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ರೈತರನ್ನು ಉತ್ತೇಜಿಸುವ ಸಲುವಾಗಿ 2023-24 ಬೆಳೆ ವರ್ಷಕ್ಕೆ ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಲ್‌ಗೆ 143 ರೂ. ಹೆಚ್ಚಳ ಮಾಡಿದ್ದು, 2,183 ರೂಪಾಯಿಗೆ ಹೆಚ್ಚಿಸಲು ಅನುಮೋದನೆ ನೀಡಿದೆ
ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಕೃಷಿಯಲ್ಲಿ ನಾವು ಸಿಎಸಿಪಿ (ಕೃಷಿ ವೆಚ್ಚಗಳು ಮತ್ತು ಬೆಲೆಗಳ ಆಯೋಗ) ಶಿಫಾರಸುಗಳನ್ನು ಆಧರಿಸಿ ಕಾಲಕಾಲಕ್ಕೆ ಎಂಎಸ್‌ಪಿಯನ್ನು ನಿಗದಿಪಡಿಸುತ್ತಿದ್ದೇವೆ. ಈ ವರ್ಷ ಮುಂಗಾರು ಬೆಳೆಗಳ ಎಂಎಸ್‌ಪಿ ಹೆಚ್ಚಳವು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಅತ್ಯಧಿಕವಾಗಿದೆ ಎಂದು ತಿಳಿಸಿದರು.
ಸಾಮಾನ್ಯ ದರ್ಜೆಯ ಭತ್ತದ ಖಾರಿಫ್ ಬೆಳೆಗಳಾದ ಭತ್ತದ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 2040 ರೂ.ನಿಂದ 2183 ರೂ.ಗೆ ಹೆಚ್ಚಿಸಲಾಗಿದೆ. ಎ ಗ್ರೇಡ್ ಭತ್ತದ ಎಂಎಸ್‌ಪಿ ದರವನ್ನು ಕ್ವಿಂಟಲ್‌ಗೆ 2060 ರೂಗಳಿಂದ 2203 ರೂ.ಗೆ ಹೆಚ್ಚಿಸಲಾಗಿದೆ. ಮೆಕ್ಕೆಜೋಳದ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 1962 ರೂ.ನಿಂದ 2090 ರೂ.ಗೆ ಹೆಚ್ಚಿಸಲಾಗಿದೆ. ಹತ್ತಿಯ ಎಂಎಸ್‌ಪಿಯನ್ನು ಶೇ 9ರಷ್ಟು ಹೆಚ್ಚಿಸಲಾಗಿದೆ. ಶೇಂಗಾದ ಎಂಎಸ್‌ಪಿ ಶೇ 9ರಷ್ಟು ಏರಿಕೆಯಾಗಿದೆ.
ರಾಗಿ ಬೆಂಬಲ ಬೆಲೆ 268 ರೂಪಾಯಿ ಹೆಚ್ಚಾಗಿದ್ದು, 3866 ರೂ. ದರ ನೀಡಲಾಗಿದೆ. ಮೆಕ್ಕೆಜೋಳ ದರ 128 ರೂ. ಹೆಚ್ಚಾಗಿದ್ದು 2090 ರೂಪಾಯಿ ದರ ಇದೆ. ಶೇಂಗಾ ದರ 527 ರೂ. ಹೆಚ್ಚಾಗಿದ್ದು 6377 ರೂ.ಗೆ ಖರೀದಿಸಲಾಗುವುದು. ಮಧ್ಯಮ ಹತ್ತಿ ದರ 540ರೂ., ಉದ್ದ ಹತ್ತಿ ದರ 640 ರೂ. ಹೆಚ್ಚಾಗಿದ್ದು ಕ್ರಮವಾಗಿ 6,620 ರೂ., 7020 ರೂ. ದರ ಇದೆ. ಹೈಬ್ರೀಡ್ ಜೋಳ 210 ರೂ. ಹೆಚ್ಚಳವಾಗಿದ್ದು, 2120 ರೂ. ದರ ನಿಗದಿಪಡಿಸಲಾಗಿದೆ.

 

ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದ ಕೇಂದ್ರ ವಾಣಿಜ್ಯ, ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್, ಕಳೆದ ಹಲವಾರು ವರ್ಷಗಳಲ್ಲಿ, ಈ ವರ್ಷ ಎಂಎಸ್‌ಪಿಯಲ್ಲಿ ಅತಿದೊಡ್ಡ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದರು. ವೆಚ್ಚಕ್ಕಿಂತ ಶೇ 50ರಷ್ಟು ಹೆಚ್ಚು ಎಂಎಸ್‌ಪಿ ಉಳಿಸಿಕೊಳ್ಳಲು ಸರ್ಕಾರ ನಿರ್ಧರಿಸಿತ್ತು. ಮತ್ತು ಅದರಂತೆ MSP ಅನ್ನು ಹೆಚ್ಚಿಸಲಾಗಿದೆ.
ಹೆಚ್ಚುತ್ತಿರುವ ಬೇಳೆಕಾಳುಗಳ ಬೆಲೆಗಳನ್ನು ಗಮನದಲ್ಲಿಟ್ಟುಕೊಂಡು ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ. ಹೆಸರು ಬೆಳೆಗೆ ಶೇಕಡಾ 10.4 ರಷ್ಟು ಹೆಚ್ಚಾಗಿದೆ. 2023-24 ಬೆಳೆ ವರ್ಷದಲ್ಲಿ ಪ್ರತಿ ಕ್ವಿಂಟಲ್‌ಗೆ 8,558 ರೂ. ಮಾಡಲಾಗಿದೆ. ಹಿಂದಿನ ವರ್ಷದಲ್ಲಿ ಕ್ವಿಂಟಲ್‌ಗೆ 7,755 ರೂ. ಇತ್ತು.

ಅರ್ಹರ ದಳದ MSP ಕ್ವಿಂಟಲ್‌ಗೆ 400 ರೂ. ಹೆಚ್ಚಿಸಿ ಕ್ವಿಂಟಲ್‌ಗೆ 7000 ರೂ.ಗಳು, ಉರಾದ್ ದಾಲ್‌ನ ಎಂಎಸ್‌ಪಿ ಸಹ ಪ್ರತಿ ಕ್ವಿಂಟಲ್‌ಗೆ 350 ರೂ.ಹೆಚ್ಚಿಸಿದ್ದರಿಂದ ಕ್ವಿಂಟಾಲ್‌ಗೆ 6950 ರೂ.ಗಳಿಗೆ ಏರಿಕೆಯಾಗಿದೆ ಮತ್ತು ಮೂಂಗ್‌ನ ಎಂಎಸ್‌ಪಿ ಕ್ವಿಂಟಲ್‌ಗೆ 7755 ರಿಂದ ರೂ.8558 ಕ್ಕೆ ಏರಿಕೆಯಾಗಿದ್ದು, ಶೇ.10.4 ಹೆಚ್ಚಳವಾಗಿದೆ.
ಮಂಗಳವಾರ, ಜೂನ್ 6ರಂದು, ದೇಶದಲ್ಲಿ ಬೇಳೆಕಾಳುಗಳ ಉತ್ಪಾದನೆಯನ್ನು ಉತ್ತೇಜಿಸಲು ಸರ್ಕಾರವು 2023-24 ನೇ ಸಾಲಿಗೆ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಅರ್ಹರ್, ಉರಾದ್ ಮತ್ತು ಮಸೂರ್ ಬೇಳೆಕಾಳುಗಳನ್ನು ಖರೀದಿಸಲು 40 ಪ್ರತಿಶತ ಮಿತಿಯನ್ನು ರದ್ದುಗೊಳಿಸಿದೆ. ಈಗ ರೈತರು ಬೆಲೆ ಬೆಂಬಲ ಯೋಜನೆ (ಪಿಎಸ್‌ಎಸ್) ಅಡಿಯಲ್ಲಿ ಸರ್ಕಾರಕ್ಕೆ ಎಷ್ಟು ಬೇಳೆಕಾಳುಗಳನ್ನು ಮಾರಾಟ ಮಾಡಬಹುದು. ಸರ್ಕಾರದ ಈ ನಿರ್ಧಾರದ ನಂತರ ಈ ಖಾರಿಫ್ ಹಂಗಾಮಿನಲ್ಲಿ ಹಾಗೂ ಮುಂಬರುವ ರಬಿ ಹಂಗಾಮಿನಲ್ಲಿ ಈ ದ್ವಿದಳ ಧಾನ್ಯಗಳ ಬಿತ್ತನೆ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ