Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಿಕ್ಷಕರಿಗೆ ಸಿಹಿ ಸುದ್ದಿ

 

ಬೆಂಗಳೂರು :
ಸರ್ಕಾರಿ ನೌಕರರಿಗೆ ಜಾರಿಯಲ್ಲಿರುವ ಜ್ಯೋತಿ ಸಂಜೀವಿನಿ ಆರೋಗ್ಯ ವಿಮಾ ಯೋಜನೆಯನ್ನು ಅನುದಾನಿತ ಶಾಲಾ ಶಿಕ್ಷಕರಿಗೂ ವಿಸ್ತರಿಸುವ ಬಗ್ಗೆ ಸಾಧಕ, ಬಾಧಕಗಳನ್ನು ಚರ್ಚಿಸಲು ಮುಂದಿನ ವಾರ ಅನುದಾನಿತ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಸಭೆ ಕರೆಯುವುದಾಗಿ ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಭರವಸೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಶನಿವಾರ ನಗರದ ಶಿಕ್ಷಕರ ಸದನದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಸಮಾವೇಶದಲ್ಲಿ ಮಾತನಾಡಿದ ಅವರು ಈ ಭರವಸೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಅನುದಾನಿತ ಶಿಕ್ಷಕರ ಸಂಘದ ಅಧ್ಯಕ್ಷ ರಾಜಗೋಪಾಲ್‌ ಅವರು, ಜ್ಯೋತಿ ಸಂಜೀವಿನಿ, ಹಳೆ ಪಿಂಚಣಿ ಯೋಜನೆ, ಕಾಲ್ಪನಿಕ ವೇತನ ಜಾರಿ, ಶಾಲಾ ನೋಂದಣಿ ನವೀಕರಣಕ್ಕೆ ಇರುವ ಮಾನದಂಡಗಳನ್ನು ಸರಳೀಕರಿಸುವುದು ಸೇರಿದಂತೆ ಅನುದಾನಿತ ಶಿಕ್ಷಕರ 13 ಬೇಡಿಕೆಗಳನ್ನು ಈಡೇರಿಸಬೇಕೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ದಿನೇಶ್‌ ಗುಂಡೂರಾವ್‌ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

 

ಈ ಬೇಡಿಕೆಗಳ ಕುರಿತು ತಮ್ಮ ಭಾಷಣದಲ್ಲಿ ಪ್ರತಿಕ್ರಿಯೆ ನೀಡಿದ ದಿನೇಶ್‌ ಗುಂಡೂರಾವ್‌, ಜ್ಯೋತಿ ಸಂಜೀವಿನಿ ಇಲಾಖೆಯ ಮಟ್ಟದ ಯೋಜನೆಯಲ್ಲ. ಸರ್ಕಾರ ಇಡೀ ಸರ್ಕಾರಿ ನೌಕರರಿಗೆ ನರರೋಗ, ಕ್ಯಾನ್ಸರ್‌ ಸೇರಿದಂತೆ ವಿವಿಧ ಗಂಭೀರ ಕಾಯಿಲೆಗಳಿಗೆ ಆರೋಗ್ಯ ಸುರಕ್ಷಾ ಟ್ರಸ್ಟ್‌ಅಡಿ ನೋಂದಾಯಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಕಲ್ಪಿಸುವ ಯೋಜನೆ. ಇದನ್ನು ಅನುದಾನಿತ ಶಿಕ್ಷಕರಿಗೂ ವಿಸ್ತರಿಸುವ ನಿರ್ಧಾರ ಸರ್ಕಾರದ ಮಟ್ಟದಲ್ಲೇ ಆಗಬೇಕು. ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಬೇಕಾಗುತ್ತದೆ ಎಂದರು.

ಅದಕ್ಕೂ ಮುನ್ನ ರಾಜ್ಯದಲ್ಲಿ ಎಷ್ಟುಜನ ಅನುದಾನಿತ ಶಿಕ್ಷಕರಿದ್ದಾರೆ? ಅವರೆಲ್ಲಾ ಸೇರಿ ಎಷ್ಟುಪ್ರೀಮಿಯಂ ಕಟ್ಟಬಹುದು? ಸರ್ಕಾರದಿಂದ ಎಷ್ಟುಹಣ ಒದಗಿಸಬೇಕಾಗಬಹುದು ಎಂಬ ಸಾಧಕ, ಬಾಧಕಗಳ ಬಗ್ಗೆ ಅಂದಾಜು ಮಾಹಿತಿ ಸಿದ್ಧಪಡಿಸಿಕೊಂಡು ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾಗುತ್ತದೆ. ಮುಂದಿನ ವಾರ ಸಂಘದ ಪದಾಧಿಕಾರಿಗಳ ಸಭೆ ಕರೆದು ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಸಂಘದಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಹಲವು ಶಿಕ್ಷಕರನ್ನು ಸನ್ಮಾನಿಸಲಾಯಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ