Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಾರದೊಳಗಾಗಿ ಆಸ್ತಿ ಸಮೀಕ್ಷೆ ಪೂರ್ಣಗೊಳಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ

 

ಬೆಳಗಾವಿ: ಬರಗಾಲ ಹಾಗೂ ಚುನಾವಣೆ ಎರಡನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ ಜಿಲ್ಲೆಯಾದ್ಯಂತ ನೀರಿನ ಸಮಸ್ಯೆಯಾಗದಂತೆ ನೋಡಿಕೊಂಡಿರುವುದು ಹಾಗೂ ಸ್ವೀಪ್ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಾಗಿರುವುದಕ್ಕೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಅಭಿನಂದನೆಗಳನ್ನು ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ತಾಲ್ಲೂಕು ಪಂಚಾಯತ್ ಅಧಿಕಾರಿಗಳೊಂದಿಗೆ ನಡೆದ ವಿವಿಧ ಯೋಜನೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯತ್ ಆಸ್ತಿ ಸಮೀಕ್ಷೆ ಪ್ರಕ್ರಿಯೆಯನ್ನು ಅಭಿಯಾನದ ರೀತಿ ಕೈಗೊಂಡು ಮುಂದಿನ ಒಂದು ವಾರದಲ್ಲಿ ಪೂರ್ಣಗೊಳಿಸುವುದು ವಿಳಂಬ ಮಾಡಿದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಸೂಚಿಸಿದರು. ಆಸ್ತಿ ಸಮೀಕ್ಷೆ ಮಾಹಿತಿಗಳನ್ನು ಪಿ2 ವರದಿಯಲ್ಲಿ ಒಂದು ವಾರದಲ್ಲಿ ಅಪಡೇಟ್ ಮಾಡಲು ಸೂಚಿಸಿದರು. ಸಕಾಲ ಯೋಜನೆ ಯಡಿ ಕಾಲಮಿತಿ ಮೀರಿ ಬಾಕಿ ಉಳಿದ ಆರ್ಜಿಗಳನ್ನು ಮುಂದಿನ 2 ದಿನದಲ್ಲಿ ವಿಲೇವಾರಿ ಮಾಡಲು ಕ್ರಮಕೈಗೊಳ್ಳುವುದು ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ನಿರ್ವಹಿಸುವುದು ಪಿ.ಡಿ.ಐ ಪ್ರಕ್ರಿಯೆಯನ್ನು ಮುಂದಿನ ನಾಲ್ಕು ದಿನದಲ್ಲಿ ಪೂರ್ಣಗೊಳಿಸವುದು, ಕೂಸಿನಮನೆ, ನೆಲ ಜಲ ಮಿತ್ರ ಸರ್ವೇಗಳನ್ನು ಕೂಡಲೇ ಅಪಡೇಟ್ ಮಾಡಲು ಸೂಚಿಸಿದರು

ಮನರೇಗಾ ಯೋಜನೆಯಡಿ ಕಡ್ಡಾಯವಾಗಿ ಜನರಿಗೆ ಕೆಲಸ ನೀಡಿ ತಾಲ್ಲೂಕಾವಾರು ನೀಡಿರುವ ಗುರಿಗನುಗುಣವಾಗಿ ಪ್ರಗತಿ ಸಾಧಿಸುವುದು, ಸನ್ 2023-24 ನೇ ಸಾಲಿನಡಿ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿಗಳು ಪೂರ್ಣಗೊಳಿಸದೇ ಹಾಗೇ ಉಳಿದುಕೊಂಡಿವೆ. ಅಂತಹ ಕಾಮಗಾರಿಗಳನ್ನು ಸಂಬಂಧಿಸಿದ ಅಧಿಕಾರಿಗಳು ಪೂರ್ಣಗೊಳಿಸಬೇಕು ಹಾಗೂ ಬಿಸಿಲು ಹೆಚ್ಚಿರುವ ಗ್ರಾಮ ಪಂಚಾಯತಿಗಳಲ್ಲಿ ಕೂಲಿಕಾರರಿಗೆ ಅನುಕೂಲವಾಗುವಂತೆ ಬೆಳಿಗ್ಗೆನ ಸಮಯದಲ್ಲಿ ಕೆಲಸ ನೀಡುವಂತೆ ಸಭೆಯಲ್ಲಿ ಸೂಚನೆ ನೀಡಿದರು. ಜಿಯೋ ಟ್ಯಾಗ್ ಮಾಡುವುದು ಸೇರಿದಂತೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಸಾಮಾಜಿಕ ಪರಿಶೋಧನೆಯಲ್ಲಿ ಎ.ಟಿ.ಆರ್. ಇತ್ಯರ್ಥಗೊಳಿಸುವುದು ಬಾಕಿ ಇದ್ದು, ವಾರಕ್ಕೆ ಎರಡು ಬಾರಿ ಅಡಾಕ್ ಸಮಿತಿ ಸಭೆಗಳನ್ನು ಮಾಡುವುದರ ಮೂಲಕ ಪ್ರಕರಣಗಳನ್ನು ಮುಕ್ತಾಯಗೊಳಿಸಲು ಕ್ರಮವಹಿಸುವಂತೆ ಎಂದು ನಿರ್ದೇಶನ ನೀಡಿದರು

ಸ್ವಚ್ಛ ಭಾರತ ಮಿಷನ್ ಯೋಜನೆಗೆ ಸಂಬಂಧಿಸಿದಂತೆ ಪ್ರಗತಿಯಲ್ಲಿರುವ ಸಮುದಾಯ ಶೌಚಾಲಯಗಳನ್ನು ಒಂದು ವಾರದೊಳಗೆ ಮುಕ್ತಾಯ ಮಾಡಲು ತಿಳಿಸಿದರು. SWM ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಪ್ರತಿ ದಿನ ಕಸ ನಿರ್ವಹಣೆ ಕಾರ್ಯ ಪ್ರಗತಿಯಲ್ಲಿರುಬೇಕು. ವೈಯಕ್ತಿಕ ಶೌಚಾಲಯದ ಪ್ರಗತಿ ಸಾಧಿಸಲು ಸೂಚಿಸಿದರು.

ಜಿ. ಪಂ ಉಪಕಾರ್ಯದರ್ಶಿ (ಆಡಳಿತ) ರೇಖಾ ಡೊಳ್ಳಿಣವರ, ಉಪಕಾರ್ಯದರ್ಶಿ (ಅಭಿವೃದ್ಧಿ) ಬಸವರಾಜ ಅಡವಿಮಠ, ಯೋಜನಾ ನಿರ್ದೇಶಕ (ಡಿ.ಆರ್.ಡಿ.ಎ) ಡಾ: ಎಮ್. ಕೃಷ್ಣರಾಜು, ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ ಜಿಲ್ಲೆಯ ಎಲ್ಲ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಗ್ರಾಮೀಣ ಉದ್ಯೋಗ ಹಾಗೂ ಪಂಚಾಯತ್ ರಾಜ್ ಹಾಗೂ ಜಿ.ಪಂ. ಸಿಬ್ಬಂದಿ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ