Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೋವಿಡ್ JN.1 ರೂಪಾಂತರಿ ಪ್ರಕರಣಗಳ ವರದಿ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

 

ಬೆಂಗಳೂರು :
ಕೋವಿಡ್ ಸೋಂಕಿನ ಉಪತಳಿಯಾದ JN.1 ಸಂಬಂಧಿಸಿದಂತೆ ರಾಜ್ಯದಲ್ಲಿ ಈವರೆಗೆ 34 ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಮಾರ್ಗಸೂಚಿ ಹೊರಡಿಸಲಾಗಿದೆ.
ಲಭ್ಯವಿರುವ ಮಾಹಿತಿ ಪ್ರಕಾರ JN.1 ಸೋಂಕಿನ ಹರಡುವಿಕೆ ಸಾಮರ್ಥ್ಯ ಹೆಚ್ಚಿರುವುದು ಕಂಡುಬಂದಿದೆ. ಹೊಸವರ್ಷಾಚರಣೆಯ ಸಂದರ್ಭದಲ್ಲಿ ಜನಸಂದಣಿಯಾಗುವ ಹಾಗೂ ಒಳಾಂಗಣ ಜನಸಂದಣಿ ಪ್ರದೇಶಗಳಲ್ಲಿ ಮುಂಜಾಗ್ರತ ಕ್ರಮವಾಗಿ ಸೂಕ್ತ ಕೋವಿಡ್ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ.
ಅಲ್ಲದೇ, 60 ವರ್ಷ ಮೇಲ್ಪಟ್ಟವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಮತ್ತು ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಸಲಹೆ ನೀಡಲಾಗಿದೆ.

ರಾಜ್ಯದಲ್ಲಿ ಡಿಸೆಂಬರ್ 26ರವರೆಗೆ 464 ಸಕ್ರಿಯ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 376 ಪ್ರಕರಣಗಳು ವರದಿಯಾಗಿವೆ. ಒಟ್ಟು 74 ಖಚಿತ ಪ್ರಕರಣಗಳಲ್ಲಿ 57 ಪ್ರಕರಣಗಳು ಮತ್ತು 9 ಮರಣ ಪ್ರಕರಣಗಳಲ್ಲಿ 4 ಬೆಂಗಳೂರು ನಗರದಲ್ಲಾಗಿದೆ.

ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಮುಂಬರುವ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನಸಂದಣಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಜನಸಂದಣಿಯಾಗುವುದನ್ನು ಗಮನದಲ್ಲಿಟ್ಟುಕೊಂಡು, ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್ ಬಳಸುವುದರ ಬಗ್ಗೆ ಅರಿವು ಮೂಡಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಸಾರ್ವಜನಿಕರಿಗೆ ಸಲಹಾ ಪತ್ರದಲ್ಲಿ ತಿಳಿಸಿರುವಂತೆ, 60 ವರ್ಷ ಮೇಲ್ಪಟ್ಟವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರವವರು ಮಾಸ್ಕ್ ಧರಿಸುವುದನ್ನು ಪುನರುಚ್ಚರಿಸಲಾಗಿದೆ. ಅಲ್ಲದೆ, ಈಗಾಗಲೇ ಹೊರಡಿಸಿರುವ ಮಾರ್ಗದರ್ಶಿ ಸುತ್ತೋಲೆಗಳು ಹಾಗೂ ಸಲಹಾ ಪತ್ರದಲ್ಲಿರುವ ಮಾಹಿತಿಯನ್ನು ಎಲ್ಲಾ ಮಾಧ್ಯಮಗಳ ಮೂಲಕ (ಎಲೆಕ್ಟ್ರಾನಿಕ್/ಪ್ರಿಂಟ್/ ಸೋಶಿಯಲ್ ಮೀಡಿಯಾ) ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸುವಂತೆ ಸೂಚಿಸಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರುನಾಡಿಗೆ ಜಲಕಂಟಕ, ಭುವಿಯೇ ತಲ್ಲಣ : ಭವಿಷ್ಯ ನುಡಿದ ಪ್ರಖ್ಯಾತ ಸ್ವಾಮೀಜಿ...!ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ...!ಕೊನೆಗೂ ಸಿಹಿಸುದ್ದಿ : ಶೀಘ್ರದಲ್ಲೇ ಮಾರ್ಚ್, ಏಪ್ರಿಲ್ ಗೃಹಲಕ್ಷ್ಮೀ ಹಣ ಜಮಾ:  ಲಕ್ಷ್ಮೀ ಹೆಬ್ಬಾಳಕರ್ ಕೊಟ್ರು ಈ ಗುಡ್ ನ್ಯೂಸ್..!ನೈರುತ್ಯ ರೇಲ್ವೆ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆಬೆಳಗಾವಿ : 12ಕ್ಕೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಸರಕಾರಿ ನೌಕರರಿಗೆ ಸಿಹಿಸುದ್ದಿ : ತುಟ್ಟಿಭತ್ಯೆ ಹೆಚ್ಚಳ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುವುದು ನಾಗರಿಕರ ಆದ್ಯ ಕರ್ತವ್ಯ : ಎ.ಎಸ್.ಪಾಶ್ಚಾಪುರೆಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಅನುಮಾನಾಸ್ಪದ ವಸ್ತುಗಳಿದ್ದ ಬ್ಯಾಗ್‌ ಪತ್ತೆತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ ಪ್ರಮಾಣ ವಚನ