Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗುರು ವಿವೇಕಾನಂದ ಸಹಕಾರಿ ಸಂಘದ ಸಭೆ ; ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಹಕಾರ ಸಂಘದಲ್ಲಿ ಸೇವಾ ಮನೋಭಾವ ಮುಖ್ಯ : ಡಾ. ಸಂಜಯ ಹೊಸಮಠ

ಬೆಳಗಾವಿ: ಸಹಕಾರ ಸಂಸ್ಥೆ ಬೆಳೆಯಬೇಕಾದರೆ ಸೇವಾ ಮನೋಭಾವ ಹಾಗೂ ಅದನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿರಬೇಕು. ಅಚ್ಚುಕಟ್ಟಾದ ವ್ಯವಹಾರ ಇಟ್ಟುಕೊಂಡು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ರಾಜ್ಯ ಸಹಕಾರ ಪತ್ತಿನ ಸಂಘದ ನಿರ್ದೇಶಕ ಡಾ. ಸಂಜಯ ಹೊಸಮಠ ಅಭಿಪ್ರಾಯಪಟ್ಟರು.

ನಗರದ ಭಡಕಲ್ ಗಲ್ಲಿಯ ಶ್ರೀ ಬನಶಂಕರಿ ದೇವಸ್ಥಾನದ ಸಭಾಗೃಹದಲ್ಲಿ ರವಿವಾರ ನಡೆದ ಗುರು ವಿವೇಕಾನಂದ ವಿವಿಧೋದ್ದೇಶಗಳ ಸಹಕಾರಿ ಸಂಘದ 13 ನೇ ವಾರ್ಷಿಕ ಸಾಮಾನ್ಯ ಸಭೆ ಹಾಗೂ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರ ಕ್ಷೇತ್ರದಲ್ಲಿ ಬೆಳಗಾವಿ ಮೊದಲ ಸ್ಥಾನ ಪಡೆದುಕೊಂಡಿದ್ದು, ಸಹಕಾರ ಸಂಘಗಳು ಬೆಳೆಯಬೇಕಾದರೆ ಅದರ ಆಡಳಿತ ಮಂಡಳಿ, ಸಿಬ್ಬಂದಿ ಅತ್ಯಂತ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಬೇಕು. ಹಣಕಾಸಿನ ವ್ಯವಹಾರ ಚೆನ್ನಾಗಿದ್ದರೆ ಜನರು ನಮ್ಮ ಬಳಿ ಬರುತ್ತಾರೆ. ಸಹಕಾರ ಸಂಘದಲ್ಲಿ ನಂಬಿಕೆ-ವಿಶ್ವಾಸ ಮುಖ್ಯ. ಅದನ್ನು ಕಾಪಿಟ್ಟುಕೊಂಡು ಸಾಗಬೇಕು. ಸಹಕಾರ ರಂಗವು ದೇಶದ ಆರ್ಥಿಕತೆಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದರು.

ಸಮಾಜ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನಾವು ಏನನ್ನು ಕೊಡಬಲ್ಲೆವು ಎಂಬ ಅರಿವು ನಮ್ಮಲ್ಲಿರಬೇಕು. ವಿದ್ಯಾರ್ಥಿಗಳು ತಾವು ಕಲಿತ ಶಾಲೆ, ಶಿಕ್ಷಕರು, ಊರು, ಸಹಾಯ ಮಾಡಿದವರನ್ನು ಮರೆಯಬಾರದು. ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಹುದ್ದೆ ಪಡೆದು ಸತ್ಪ್ರಜೆಗಳಾಗಬೇಕು ಎಂದರು.

ಗುರು ವಿವೇಕಾನಂದ ಸಹಕಾರ ಸಂಘ ಕಡಿಮೆ ವರ್ಷದಲ್ಲಿಯೇ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದೆ. ವಿವೇಕಾನಂದರ ತತ್ವ ಸಿದ್ಧಾಂತ ಇಟ್ಟುಕೊಂಡು ಸಂಸ್ಥೆ ಉತ್ತಮವಾಗಿ ಬೆಳೆಯುತ್ತಿದೆ. ಸಂಸ್ಥೆ ಕೇವಲ ಒಬ್ಬ ಸದಸ್ಯನಿಗೆ ಆರ್ಥಿಕವಾಗಿ ಸಹಾಯ ಮಾಡದೇ ಇಡೀ ಆ ಕುಟುಂಬಕ್ಕೆ ಆಶ್ರಯ ನೀಡಿದೆ. ಇದೇ ರೀತಿಯ ದೃಢ ಸಂಕಲ್ಪದೊಂದಿಗೆ ಮುಂದೆ ಸಾಗಿದರೆ, ಮುಂದೆ ಬಹುದೊಡ್ಡ ಸಂಸ್ಥೆಯಾಗಿ ಬೆಳೆದು ಇತರ ಸಂಸ್ಥೆಗಳಿಗೆ ಮಾದರಿಯಾಗಲಿದೆ ಎಂದು ಹೇಳಿದರು.

ಸಂಘದ ಅಧ್ಯಕ್ಷ ಡಾ. ನಾರಾಯಣ ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ, ಉತ್ತಮ ಸಂಸ್ಥೆಯನ್ನು ಕಟ್ಟುವಾಗ ಅನೇಕ ಜನರ ಯೋಗದಾನವಿರುತ್ತದೆ. ಅದರಲ್ಲಿ ಸಂಸ್ಥೆಯ ಗ್ರಾಹಕರಿಂದ ಹಿಡಿದು ಸಂಸ್ಥೆಯಲ್ಲಿರುವ ಸಿಬ್ಬಂದಿ, ಆಡಳಿತ ಮಂಡಳಿಯವರ ಕಾರ್ಯತತ್ಪರತೆ, ಸದಸ್ಯರ ಸಕಾರಾತ್ಮಕ ಪಾಲ್ಗೊಳ್ಳುವಿಕೆಯು ಪ್ರಧಾನವಾಗಿದೆ. ಸಂಸ್ಥೆ ನಮ್ಮ ಆಸ್ತಿಯಲ್ಲ, ಅದು ಸಮಾಜದ ಆಸ್ತಿಯೆಂದು ತಿಳಿದಿರಬೇಕು. ವ್ಯಕ್ತಿ ಶಾಶ್ವತವಲ್ಲ, ಸಂಸ್ಥೆ ಶಾಶ್ವತ. ನಾವು ಕಟ್ಟುವ ಸಂಸ್ಥೆ ಸಾರ್ವಕಾಲಿಕವಾಗಿರುವಂತೆ ನಮ್ಮ ನಡೆನುಡಿ ಇರಬೇಕು ಎಂದರು.

ವಿವೇಕಾನಂದರ ತತ್ವಾದರ್ಶ ಪಾಲಿಸುವ ಉದ್ದೇಶದಿಂದ ಈ ಸಂಘವನ್ನು ಕಟ್ಟಿದ್ದೇವೆ. ಅದಕ್ಕೆ ತಕ್ಕಂತೆ ಸಂಸ್ಥೆ ಆರ್ಥಿಕವಾಗಿ, ಸಾಮಾಜಿಕವಾಗಿ ಸೇವೆ ಸಲ್ಲಿಸುತ್ತಿದೆ. ಸಂಘವು ಆರಂಭದಿಂದ ಇಲ್ಲಿಯವರೆಗೆ ಎ ಗ್ರೇಡ್ ಮಾನ್ಯತೆ ಪಡೆದಿದೆ. ಇದು ಸಂಸ್ಥೆಯ ಕಾರ್ಯವೈಖರಿಯನ್ನು ತೋರಿಸುತ್ತದೆ. 2024-25ರಲ್ಲಿ 21.10 ಕೋಟಿ ರೂ. ದುಡಿಯುವ ಬಂಡವಾಳ, 2.65 ಕೋಟಿ ರೂ. ನಿಧಿಗಳು, 2136 ಸದಸ್ಯರು, 73.6 ಲಕ್ಷ ಷೇರು ಬಂಡವಾಳ, 15.75 ಕೋಟಿ ರೂ. ಸಾಲ, 47.17 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 12ರಷ್ಟು ಲಾಭಾಂಶ ಕೊಡಲು ತೀರ್ಮಾನಿಸಿದ್ದೇವೆ ಎಂದರು.

ಸಮಕಾಲೀನ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ನಿಯಂತ್ರಣದಲ್ಲಿಡುವುದೇ ದೊಡ್ಡ ಸವಾಲಾಗಿದೆ. ಮನಸ್ಸು ಪರಿಶುದ್ಧವಾದಾಗ, ಭಾವನೆಗಳು ಪರಿಶುದ್ಧವಾಗಿರುತ್ತವೆ. ಭಾವನೆಗಳು ಪರಿಶುದ್ಧವಾದಾಗ ವಿಚಾರಧಾರೆಗಳು ಪರಿಶುದ್ಧವಾಗಿರುತ್ತವೆ. ವಿಚಾರಧಾರೆಗಳು ಪರಿಶುದ್ಧವಾದಾಗ ನಮ್ಮಿಂದ ಸತ್ಕಾರ್ಯ ಮಾಡಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಜ್ಞಾನದ ಹಿಂದೆ ಹೋಗಬೇಕು. ಜ್ಞಾನದ ಹಸಿವು ವಿದ್ಯಾರ್ಥಿಗಳನ್ನು ಬದುಕಿನ ಔನ್ನತ್ಯಕ್ಕೆ ಒಯ್ಯುತ್ತದೆ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದ ಸಾವಿತ್ರಿ ರೋಣಿ, 623 ಅಂಕ ಪಡೆದ ಸಮೃದ್ಧಿ ಮೂಲ್ಯ ಹಾಗೂ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಸೌಮ್ಯ ಶೆಟ್ಟಿ ಅವರನ್ನು ಸತ್ಕರಿಸಲಾಯಿತು. ಸಂಘದ ಸದಸ್ಯರ 34 ಪ್ರತಿಭಾವಂತ ಮಕ್ಕಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಂಘದ ಉಪಾಧ್ಯಕ್ಷ ಆನಂದ ರಾವ್, ನಿರ್ದೇಶಕರಾದ ಅಂಜನಕುಮಾರ ಗಂಡಗುದರಿ, ಸತೀಶ ಮನ್ನಿಕೇರಿ, ಆನಂದ ಶೆಟ್ಟಿ, ಗಣೇಶ ಮರಕಾಲ, ದುರ್ಗಪ್ಪ ತಳವಾರ, ರೂಪಾ ಮಗದುಮ್ಮ, ಗಣೇಶ ನಾಯಕ, ಚಂದ್ರಕ್ರಾಂತ ಅಥಣಿಮಠ ಸೇರಿದಂತೆ ಸಂಘದ ಸಿಬ್ಬಂದಿ, ಪಿಗ್ಮಿ ಸಂಗ್ರಹಕಾರರು, ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಿರ್ದೇಶಕರಾದ ಭಾರತಿ ಶೆಟ್ಟಿಗಾರ, ರಾಜೇಶ ಗೌಡ ಮಾತನಾಡಿದರು. ಸಂಘದ ಕಾರ್ಯದರ್ಶಿ ವಿಶಾಲ್ ಪಾಟೀಲ ವರದಿ ವಾಚಿಸಿದರು. ಭೈರೋಬಾ ಕಾಂಬಳೆ ಸ್ವಾಗತಿಸಿದರು. ಭಾವನಾ ಬುದಲಿ ಪ್ರಾರ್ಥಿಸಿದರು. ಸಮ್ಮೇದ ಗಾಡೇಕರ ವಂದಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ