Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರೀತಿಸಿ ಮದುವೆಯಾಗಿ ವಿಚ್ಛೇದನದ ನಂತರವೂ ಕಿರುಕುಳ: ವಿಚ್ಛೇದಿತ ಪತಿಯಿಂದಲೇ ಮಹಿಳೆಯ ಭೀಕರ ಕೊಲೆ ಗಂಡ ಪೊಲೀಸ್ ಹೆಂಡ್ತಿ ಕಂಡಕ್ಟರ್ ಪ್ರೀತಿ ಕಹಾನಿ ಕೊಲೆಯಲ್ಲಿ ಅಂತ್ಯ



ಬೆಳಗಾವಿ: ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಇದೊಂದು ಕರಾಳ ಘಟನೆಯಾಗಿದೆ ಹಬ್ಬಕ್ಕೂ ಮುನ್ನವೇ ಬೆಳಗಾವಿ ಜಿಲ್ಲೆಯಲ್ಲಿ ರಕ್ತದ ಕೋಡಿ ಹರಿದಿದೆ.

13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ನಂತರ ವಿಚ್ಛೇದನ ಪಡೆದು ಕಿರುಕುಳ ನೀಡುತ್ತಿದ್ದ ಮಾಜಿ ಪತಿಯಿಂದ ಮಹಿಳೆ ಹತ್ಯೆಯಾದ ಘಟನೆ ನಡೆದಿದೆ.

ಸವದತ್ತಿಯ ರಾಮ ಪುರ ಸೈಟಿನಲ್ಲಿ ಘಟನೆ ಬೆಳಕಿಗೆ ಬಂದಿದೆ. ಮೂರು ದಿನಗಳ ಹಿಂದೆ ಕೊಲೆಯಾಗಿದ್ದ ಬಸ್ ನಿರ್ವಾಹಕಿ ಕಾಶವ್ವ  ತನ್ನ ಮಾಜಿ ಪತಿಯಿಂದಲೇ ಕೊಲೆಯಾಗಿದ್ದಾಳೆ. ಪೊಲೀಸ್ ಆಗಿರುವ ಆಕೆಯ ವಿಚ್ಛೇದಿತ ಪತಿ ಆಕೆಯನ್ನು ಭೀಕರವಾಗಿ ಕೊಲೆಗೈದಿದ್ದಾನೆ.

ಪ್ರೀತಿಸಿ ಮದುವೆಯಾಗಿದ್ದ ಈತ ಪದೇ ಪದೇ ಆಕೆಯ ಮೇಲೆ ಸಂಶಯ ಪಟ್ಟು ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಆಕೆ ತವರು ಸವದತ್ತಿಗೆ ವರ್ಗಾವಣೆ ಮಾಡಿಕೊಂಡಿದ್ದಳು. ವಿವಾಹ ವಿಚ್ಛೇದನಕ್ಕೆ ಬೈಲಹೊಂಗಲ ನ್ಯಾಯಾಲಯದಿಂದ 2025 ರ ಏಪ್ರಿಲ್ 5 ರಂದು ವಿವಾಹ ವಿಚ್ಛೇದನವನ್ನು ಆಕೆ ಪಡೆದುಕೊಂಡಿದ್ದಳು.

ಸಂತೋಷ ಅಕ್ಟೋಬರ್ 13 ರಂದು ರಾತ್ರಿ 8 ಗಂಟೆಗೆ ಕಾಶಮ್ಮನ ಬಳಿ ಹೋಗಿ ಗಲಾಟೆ ಮಾಡಿ ಆಕೆಯ ಕತ್ತು ಕೊಯ್ದು ಕೊಲೆಗೈದಿದ್ದಾನೆ. ನಂತರ ಅಲ್ಲಿಂದ ಪರದಿಯಾಗಿದ್ದಾನೆ. ಆಕೆ ಕೊಲೆಯಾದ ಸ್ಥಳದಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸಂತೋಷನ ಪತ್ತೆಗೆ ಶೋಧ ನಡೆಸಿದ್ದಾರೆ.

 

ಘಟನೆ ವಿವರ:

ಸವದತ್ತಿಯ ರಾಮಪುರ ಸೈಟ್ ಹೂಲಿ ಅಜ್ಜನ ಮಠದ ಹತ್ತಿರ ನಡೆದಿರುವ ಘಟನೆ ಇದು.

ಕೆಎಸ್‌ಆರ್‌ಟಿಸಿಯಲ್ಲಿ ನಿರ್ವಾಹಕಿಯಾಗಿ ಕರ್ತವ್ಯದಲ್ಲಿದ್ದ ಕಾಶವ್ವ ಕರೀಕಟ್ಟಿ (34) ಕೊಲೆಯಾದವಳು. ನಿಪ್ಪಾಣಿ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಸಂತೋಷ ಕಾಂಬಳೆ (35) ಕೊಲೆ ಮಾಡಿದವ ಎಂದು ಪೊಲೀಸರು ತಿಳಿಸಿದ್ದಾರೆ. ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಕಾಶವ್ವ ಹಾಗೂ ನಿಪ್ಪಾಣಿಯ ಕಾನ್‌ಸ್ಟೆಬಲ್‌ ಸಂತೋಷ ಕಾಂಬಳೆ ಇಬ್ಬರು ಪ್ರೀತಿಸಿ 2013ರಲ್ಲಿ ವಿವಾಹವಾಗಿದ್ದರು.11 ವರ್ಷದ ಪುತ್ರ ಇದ್ದಾನೆ.

ನಿಪ್ಪಾಣಿಯಲ್ಲಿ ಪತಿ, ಪತ್ನಿಯರ ಮಧ್ಯೆ ಕಲಹ ನಡೆದಿತ್ತು. ಇದರಿಂದ ಬೇಸತ್ತ ಪತ್ನಿ ಕಾಶವ್ವ ಸವದತ್ತಿ ಡಿಪೊಗೆ ವರ್ಗಾವಣೆ ಮಾಡಿಸಿಕೊಂಡಿದ್ದರು. ಸವದತ್ತಿಗೂ ಬಂದ ಸಂತೋಷ ಪತ್ನಿಯನ್ನು ಸತಾಯಿಸುತ್ತಿದ್ದ. ಈ ಕುರಿತು ಪತ್ನಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು. ಬಳಿಕ ಸಂತೋಷನನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿತ್ತು.

ಜೊತೆಗೆ ಪತ್ನಿ ಇತ್ತೀಚಿಗೆ ಪತಿಯಿಂದ ವಿವಾಹ ವಿಚ್ಛೇದನ ಪಡೆದಿದ್ದಳು. ಆದರೂ ಇಬ್ಬರೂ ಸಂಪರ್ಕದಲ್ಲಿದ್ದರು ಎಂದು ತಿಳಿದು ಬಂದಿದೆ. ಅ. 13 ರಂದು ಪತ್ನಿ ಮನೆಗೆ ಬಂದು ಜಗಳವಾಡಿದ ಸಂತೋಷ, ಮಾರಕಾಸ್ತ್ರದಿಂದ ಹೊಟ್ಟೆ, ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ಈ ವಿಷಯ ಬಹಿರಂಗವಾಗದಿರಲೆಂದು ಮನೆಗೆ ಬೀಗ ಹಾಕಿ ಹೋಗಿದ್ದ.

ಸೇವೆಗೆ ಬಾರದ ಕಾಶವ್ವ ಅವರನ್ನು ಕಾಣಲು ಸಹೋದ್ಯೋಗಿಗಳು ಹಾಗೂ ಸಂಬಂಧಿಕರು ಗುರುವಾರ ಬಂದಾಗ ಮನೆಯಿಂದ ದುರ್ನಾತ ಬಂದಿದೆ. ಅಗ ಇಡೀ ಘಟನೆ ಬೆಳಕಿಗೆ ಬಂದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿಬಹುಕೋಟಿ ರೂ.ವಂಚನೆ ಪ್ರಕರಣ: ಆರೋಪಿಯ ಬಂಧನಶಾಲಾ ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಡಿತ; ಮೂವರು ಸಾವು, ಮೂವರು ಗಂಭೀರಬೆಳಗಾವಿಗೆ ಮತ್ತೆ ಅನ್ಯಾಯ : ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಸಿದ್ಧತೆ : ಪ್ರಯಾಣದ ಅವಧಿ 16 ತಾಸುಮೇಯರ್, ಉಪ ಮೇಯರ್ ಪಾಲಿಕೆಯಲ್ಲಿ ರಾಜ್ಯದ ಪರ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ: ಅಶೋಕ ಚಂದರಗಿನಕಲಿ ಹೆಸರಿನಲ್ಲಿ 25 ಮದುವೆ ; ತಮ್ಮ ಅಳಿಯನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಶಾಸಕ : ಇಬ್ಬರ ಬಂಧನನಟಿಯ ಮೇಲೆ ಅತ್ಯಾಚಾರ ; 73 ವರ್ಷದ ಸಿನೆಮಾ ನಿರ್ದೇಶಕನ ಬಂಧನʼಪ್ರತಿಭಟನೆ ಪ್ರತಿಧ್ವನಿಸಲಿಲ್ಲ….ʼ : ಕಾಂಗ್ರೆಸ್‌ ಸಂಸದ ಶಶಿ ತರೂರ ಹೇಳಿಕೆಗೆ ಕಾಂಗ್ರೆಸ್‌ ನಾಯಕ ವೇಣುಗೋಪಾಲ ಎಚ್ಚರಿಕೆಜೈಲಿನಲ್ಲಿದ್ದ ಪ್ರಿಯಕರನ ಭೇಟಿಗೆ ಬಂದ ಅಪ್ರಾಪ್ತ ಬಾಲಕಿಯ ಜೇಬಿನಲ್ಲಿ ಸಿಕ್ಕಿತು 10 ಜೀವಂತ ಗುಂಡುಗಳು….!ಭಾರತದಲ್ಲಿ ʼಏಜ್ ವೆರಿಫಿಕೇಷನ್ʼ ಫೀಚರ್‌ ಪರೀಕ್ಷೆಗೆ ಮುಂದಾದ ವಾಟ್ಸ್ಆ್ಯಪ್‌ವಿದೇಶಿ ಉದ್ಯೋಗದ ಆಮಿಷ ; ಪೋರ್ಚುಗಲ್‌ಗೆ ಹೋದ ಭಾರತದ ಯುವತಿ ಬಿಯರ್ ಶಾಪ್‌ ಮಾಲೀಕನಿಗೆ ಮಾರಾಟ….?!