Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲೋಕಸಭೆ ಅಧಿವೇಶನ: ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಎಚ್‌.ಡಿ. ಕುಮಾರಸ್ವಾಮಿ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಕರ್ನಾಟಕದ ಎಚ್.ಡಿ. ಕುಮಾರಸ್ವಾಮಿ ಅವರು ಲೋಕಸಭೆಯ ಸದಸ್ಯರಾಗಿ ದೇವರ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, '18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಗೌರವಾನ್ವಿತ ಹಂಗಾಮಿ ಸಭಾಧ್ಯಕ್ಷರಾದ ಭರ್ತೃಹರಿ ಮಹತಾಬ್ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಪ್ರಮಾಣ ಸ್ವೀಕರಿಸಿದೆ. ಇದು ನನ್ನ ಬದುಕಿನ ಅವಿಸ್ಮರಣೀಯ, ಹೆಮ್ಮೆಯ ಕ್ಷಣ. ಭಾರತದ ಪ್ರಜಾಪ್ರಭುತ್ವ ದೇಗುಲದಲ್ಲಿ ಈ ಧನ್ಯತೆಯ ಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭೆ ಕ್ಷೇತ್ರದ ಎಲ್ಲಾ ತಂದೆ ತಾಯಂದಿರು, ಅಣ್ಣ ತಮ್ಮಂದಿರು, ಅಕ್ಕ ತಂಗಿಯರು ಹಾಗೂ ಸಮಸ್ತ ಕನ್ನಡಿಗರಿಗೆ ಅನಂತ ಧನ್ಯವಾದಗಳನ್ನು ಅರ್ಪಣೆ ಮಾಡುತ್ತೇನೆ' ಎಂದು ಬರೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ 2 ಲಕ್ಷ ಮತಗಳ ಅಂತರದಿಂದ ಗೆದ್ದು ಸಂಸತ್ತು ಪ್ರವೇಶಿಸಿದ್ದ ಅವರು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಅಧಿಕಾರವಹಿಸಿಕೊಂಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆಇನ್ಫೋಸಿಸ್‌ಗೆ ನೂತನ ಸಾರಥಿ: ಸಲೀಲ್ ಪಾರೇಖ್ ಸ್ಥಾನಕ್ಕೆ ಆಶಿಶ್ ಕುಮಾರ ದಾಸ್ ಸಿಇಒ ಆಗಿ ನೇಮಕಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರ