Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಗುರುವಾರದಿಂದ ಮೂರು ದಿನ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಆ. 8 ರವರೆಗೆ ಕರಾವಳಿಯಲ್ಲಿ ಗಂಟೆಗೆ 45 ರಿಂದ 65 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಈ ಅವಧಿಯಲ್ಲಿ ಮೀನುಗಾರರು ಎಚ್ಚರವಹಿಸಬೇಕು ಎಂದು ಸೂಚಿಸಲಾಗಿದೆ.

ಕರಾವಳಿಯ ಮೂರೂ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಗುರುವಾರ ಮತ್ತು ಶುಕ್ರವಾರ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಯ ಒಂದೆರಡು ಕಡೆ ಇದೇ 8ರವರೆಗೆ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಇದೇ 11ರವರೆಗೆ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ, ಬಾಗಲಕೋಟೆ ಮತ್ತು ವಿಜಯಪುರದಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಕ್ಷ್ಮೀ ಇದ್ದರೆ ಶೋಭೆ:  ಹೆಬ್ಬಾಳ್ಕರ್ ಯಾಕೆ ಸಂಪುಟಕ್ಕೆ ಅತ್ಯಂತ ಅವಶ್ಯಕ ಗೊತ್ತೇ ? ಬೆಳಗಾವಿಗೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಿದ್ದ ಮಹಾನಾಯಕಿಬಸ್‌ನಲ್ಲೇ ಮಹಿಳೆಗೆ ಹೃದಯಾಘಾತ ; ನೇರ ಆಸ್ಪತ್ರೆಗೆ ಬಸ್‌ ಚಲಾಯಿಸಿಕೊಂಡು ಬಂದು ಸಮಯಪ್ರಜ್ಞೆ ಮೆರೆದ ಚಾಲಕಭೀಕರ ಕೊಲೆ ; 2 ತಿಂಗಳ ಸಂಚು… ಶಿಕ್ಷಕಿಗೆ 27 ಬಾರಿ ಚಾಕುವಿನಿಂದ ಇರಿದು ಕೊಂದ ಆರೋಪಿವಿಶ್ವಾಸಾರ್ಹ ಸಾಕ್ಷ್ಯಗಳಿಲ್ಲದೆ 22 ವರ್ಷ ಜೈಲು; ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆನೂತನ ಸಚಿವರಿಗೆ ಕೊಠಡಿಗಳ ಹಂಚಿಕೆಅಂಬೋಲಿ ಫಾಲ್ಸ್ ನಲ್ಲಿ ದುರಂತ: 400 ಅಡಿ ಪ್ರಪಾತಕ್ಕೆ ಬಿದ್ದು ದುರ್ಮರಣರಾಜ್ಯದ 7 ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆ ಸಾಧ್ಯತೆವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ ರಾಜೀನಾಮೆಹರ್ ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಭೆ - ಬಿಜೆಪಿಯಿಂದ ವಿವಿಧ ಕಾರ್ಯಕ್ರಮ ಆಯೋಜನೆ