ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮುಂಗಾರು ಪೂರ್ವ ಮಳೆಯಾಗಲಿದೆ, ಜೋರಾದ ಗಾಳಿ ಬೀಸಲಿದೆ ಹಾಗೂ ಕೆಲವಡೆ ಆಲಿಕಲ್ಲು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳ ಕೆಲವಡೆ ಜೋರಾಗಿ ಮಳೆಯಾಗಬಹುದು ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ ಮಳೆಯಾಗಬಹುದು ಎಂದು ಹೇಳಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಮಳೆಯಾಗಬಹುದು, ಕೆಲವೆಡೆ ಆಲಿಕಲ್ಲಿ ಮಳೆಯಾಗಬಹುದು ಎಂದು ತಿಳಿಸಲಾಗಿದೆ. ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಗುಡುಗು-ಮಿಂಚಿನೊಂದಿಗೆ ಮಳೆ ಹಾಗೂ ಕೆಲವಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಜೋರಾಗಿ ಮಳೆಯಾಗಬಹುದು, ಕೆಲವೆಡೆ ಆಲಿಕಲ್ಲು ಮಳೆಯ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಜೋರಾದ ಗಾಳಿ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
