Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇನ್ಮುಂದೆ ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧ

ನವದೆಹಲಿ: ಔಷಧಗಳ ಗುಣಮಟ್ಟ ಮತ್ತು ರೋಗಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಕೆಮ್ಮಿನ ಸಿರಪ್ ಸೇರಿದಂತೆ ಎಲ್ಲ ಬಗೆಯ ಸಿರಪ್‌ಗಳ ಮಾರಾಟಕ್ಕೆ ಸಂಬಂಧಿಸಿದ ನಿಯಮಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ತಿದ್ದುಪಡಿ ಮಾಡಿದೆ.

ವೈದ್ಯರ ಶಿಫಾರಸು ಇಲ್ಲದೆಯೇ ಈ ಸಿರಪ್‌ಗಳ ಮಾರಾಟವನ್ನು ನಿಷೇಧಿಸುವುದು ಸೇರಿದಂತೆ ಹಲವು ಅಂಶಗಳನ್ನು ತಿದ್ದುಪಡಿ ಒಳಗೊಂಡಿದೆ. ಈ ಮೂಲಕ ಔಷಧಗಳ ಮಾರಾಟಕ್ಕೆ ಸಂಬಂಧಿಸಿದ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಚಿವಾಲಯವು ಈ ತಿದ್ದುಪಡಿ ಕುರಿತಂತೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಕರಡು ಅಧಿಸೂಚನೆ ಹೊರಡಿಸಿ, ಎಲ್ಲ ಭಾಗೀದಾರರಿಂದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಹ್ವಾನಿಸಿತ್ತು. ಈಗ, ಈ ಕುರಿತು ಗೆಜೆಟ್‌ನಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ.

ಈ ಮೊದಲಿನ ನಿಯಮಗಳ ಪ್ರಕಾರ, 'ಒಂದು ಸಾವಿರಕ್ಕೂ ಕಡಿಮೆ ಜನಸಂಖ್ಯೆ ಇರುವ ಗ್ರಾಮಗಳಲ್ಲಿನ ಚಿಲ್ಲರೆ ವರ್ತಕರು ಕೆಮ್ಮಿನ ಸಿರಪ್‌ಗಳನ್ನು ಮಾರಾಟ ಮಾಡಬಹುದಿತ್ತು. ಷೆಡ್ಯೂಲ್ ಕೆ(ಕೆಮ್ಮಿನ ಸಿರಪ್ ಸೇರಿ ಕೆಲ ನಿರ್ದಿಷ್ಟ ಔಷಧಗಳ ಮಾರಾಟಕ್ಕೆ ಸಂಬಂಧಿಸಿದ್ದು)
ವ್ಯಾಪ್ತಿಯ ಔಷಧಗಳ ಮಾರಾಟಕ್ಕೆ ಸಂಬಂಧಿಸಿ ನಿಯಮಗಳು ಈ ವರ್ತಕರಿಗೆ ಅನ್ವಯವಾಗುತ್ತಿರಲಿಲ್ಲ. ತಿದ್ದುಪಡಿಯಿಂದಾಗಿ, ಈಗ ಈ ವರ್ತಕರು ಕೆಮ್ಮಿನ ಸಿರಪ್‌ಗಳನ್ನು ಮಾರಾಟ ಮಾಡುವಂತಿಲ್ಲ' ಎಂದು ಸಚಿವಾಲಯ ತಿಳಿಸಿದೆ.

ಸಿರಪ್‌ಗಳ ಗುಣಮಟ್ಟ, ಮಾರಾಟ ನಿಯಮಗಳ ಪಾಲನೆ ಕುರಿತು ಮೇಲ್ವಿಚಾರಣೆ, ಅವುಗಳ ಉತ್ಪಾದಕರಿಂದ ಹಿಡಿದು ಮಾರಾಟಗಾರರ ವರೆಗೆ ಎಲ್ಲ ಹಂತದ ಕಣ್ಣಾವಲು ವ್ಯವಸ್ಥೆಯನ್ನು ಈ ತಿದ್ದುಪಡಿಯು ಬಲಪಡಿಸಲಿದೆ ಎಂದು ಮೂಲಗಳು ಹೇಳಿವೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮಜಿಮ್ ಖಾನಾ ಕ್ಲಬ್‌ನಲ್ಲಿ ನಡೆದ ಫೈರಿಂಗ್ ಪ್ರಕರಣದ ಆರೋಪಿ ಬಂಧನ