Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಿಗ್ಗಾವಿಗೆ ಉತ್ತರಾಧಿಕಾರಿಯಾಗ್ತಾರಾ ? ಬೊಮ್ಮಾಯಿ ಪುತ್ರನ ಪರಿಚಯ ಹೀಗಿದೆ ನೋಡಿ..!

ದೆಹಲಿ : ಲೋಕಸಭಾ ಚುನಾವಣೆ ವೇಳೆ ಹಾವೇರಿ ಮತಕ್ಷೇತ್ರದಿಂದ ಆರಂಭದಲ್ಲಿ ಸ್ಪರ್ಧೆಗೆ ಬಸವರಾಜ ಬೊಮ್ಮಾಯಿ ಹಿಂದೇಟು ಹಾಕಿದ್ದರು. ಈ ಸಲ ಸಹ ಶಿಗ್ಗಾವಿ ಮತಕ್ಷೇತ್ರದ ಉಪಚುನಾವಣೆಯಲ್ಲೂ ನನ್ನ ಮಗನಿಗೆ ಟಿಕೆಟ್ ಬೇಡ ಎಂದಿದ್ದರು. ಆದರೆ, ಬಿಜೆಪಿ ವರಿಷ್ಠರು ಬೊಮ್ಮಾಯಿ ಅವರ ಮನವಿಗೆ ಓಗೊಡದೆ ಮತ್ತೆ ಅವರ ಮೇಲೆ ವಿಶ್ವಾಸವಿಟ್ಟು ಟಿಕೆಟ್ ನೀಡಿದ್ದಾರೆ.

ಹಾವೇರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರು ತಮ್ಮ ಶಿಷ್ಯ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಲು ಮನವೊಲಿಸಿ ಯಶಸ್ವಿಯಾಗಿದ್ದರು. ಹಾವೇರಿಯಲ್ಲಿ ತಮ್ಮ ಮಗ ಕಾಂತೇಶ್ ಅವರಿಗೆ ಟಿಕೆಟ್ ನೀಡುವಂತೆ ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ ಪರಿಪರಿಯಾಗಿ ಮನವಿ ಮಾಡಿಕೊಂಡಿದ್ದರು. ಕೊನೆಗೆ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದರಿಂದ ಬೇಸತ್ತು ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ ಬಂಡಾಯವೆದ್ದು ಸ್ಪರ್ಧೆ ನಡೆಸಿದ್ದರು. ಆದರೆ, ಬಸವರಾಜ ಬೊಮ್ಮಾಯಿ ಹಾವೇರಿ ಲೋಕಸಭಾ ಮತಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರಿಂದ ಅವರು ವಿಧಾನಸಭೆಗೆ ಆಯ್ಕೆಯಾದ ಶಿಗ್ಗಾವಿ ಮತಕ್ಷೇತ್ರ ತೆರವಾಗಿದೆ. ಹೀಗಾಗಿ ಈಗ ತಮ್ಮ ಕುಟುಂಬದ ಸದಸ್ಯರಿಗೆ ಟಿಕೆಟ್ ಬೇಡ ಎಂದು ಬಸವರಾಜ ಬೊಮ್ಮಾಯಿ ಮತ್ತೆ ಬಿಜೆಪಿ ನಾಯಕರ ಮೊರೆ ಹೋಗಿದ್ದರು. ಆದರೆ, ಬಿಜೆಪಿ ನಾಯಕರು ಈ ಬಾರಿಯೂ ಅವರ ಮಾತನ್ನು ಗಣನೆಗೆ ತೆಗೆದುಕೊಳ್ಳದೆ ಮತ್ತೆ ವಿಶ್ವಾಸ ಇಟ್ಟು ಅವರ ಮಗನಿಗೆ ಟಿಕೆಟ್ ನೀಡಿದ್ದಾರೆ. ಬಸವರಾಜ ಬೊಮ್ಮಾಯಿ ಮಗ ಭರತ ಬಸವರಾಜ ಬೊಮ್ಮಾಯಿ ಸಿಂಗಾಪುರ ವಿಶ್ವವಿದ್ಯಾಲಯದಿಂದ ಎಂಬಿಎ ಪದವೀಧರರಾಗಿದ್ದಾರೆ. ಇನ್ನೂ ತರುಣರಾಗಿದ್ದು ಕೇವಲ 35 ವರ್ಷ ವಯಸ್ಸಿನವರಾಗಿದ್ದಾರೆ. ದಶಕಗಳಿಂದ ತಮ್ಮ ತಂದೆ ಆಳಿದ್ದ ಶಿಗ್ಗಾವಿ ಮತಕ್ಷೇತ್ರದಲ್ಲಿ ಉತ್ತರಾಧಿಕಾರಿಯಾಗಲು ಈಗ ಬಿಜೆಪಿ ಭರತ್ ಅವರಿಗೆ ಅವಕಾಶ ಮಾಡಿಕೊಟ್ಟಿದೆ. ಇದನ್ನು ಯಾವ ರೀತಿಯಲ್ಲಿ ಜಯಿಸುತ್ತಾರೆ ಕಾದು ನೋಡಬೇಕಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ