Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿಪ್ಪರಗಿ ಬ್ಯಾರೇಜ್ ನೀರು ಬಳಕೆ: ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ ನೇತೃತ್ವದಲ್ಲಿ ಸಭೆ

 

ಬೆಳಗಾವಿ :
ಹಿಪ್ಪರಗಿ ಬ್ಯಾರೇಜಿನಲ್ಲಿ (ಕೃಷ್ಣಾ ನದಿ) ಸಂಗ್ರಹಿತ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆ ಮಾಡುವ ಹಾಗೂ ನಿರ್ವಹಣೆ ಕುರಿತು ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ ಅವರ ಅಧ್ಯಕ್ಷತೆಯಲ್ಲಿ ಸಂಬಂಧಿತ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.

ಪ್ರಸ್ತುತ ಹಿಪ್ಪರಗಿ ಬ್ಯಾರೇಜಿನಲ್ಲಿನ ಸಂಗ್ರಹಿತವಾದ ನೀರಿನ ಪ್ರಮಾಣ 5.80 ಟಿ.ಎಂ.ಸಿ ಇದ್ದು, ಡೇಡ್ ಸಂಗ್ರಹಣೆ ಹಾಗೂ ಭಾಷ್ಪಿ ಭವನ ಹಿಡಿದು ಬ್ಯಾರೇಜಿನಲ್ಲಿ ಉಪಯುಕ್ತ ನೀರಿನ ಪ್ರಮಾಣ ಕೇವಲ 5.00 ಟಿಎಂಸಿ ಇರುತ್ತದೆ ಎಂದು ಅಥಣಿಯ ಕ.ನೀ.ನಿ.ನಿ ಅಧೀಕ್ಷಕ ಅಭಿಯಂತರರು ಸಭೆಯಲ್ಲಿ ತಿಳಿಸಿದರು.

ಉಪಯುಕ್ತ ನೀರು ಕುಡಿಯುವ ಉದ್ದೇಶಕ್ಕಾಗಿ ಫೆಬ್ರುವರಿ 2024 ವರೆಗೆ ಅಂದರೆ 100 ದಿವಸಗಳವರೆಗೆ ಮಾತ್ರ ಸಾಕಾಗುತ್ತದೆ. 2024 ರ ಮಾರ್ಚ್ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬನವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದರು.

ಈ ಹಿನ್ನಲೆಯಲ್ಲಿ ಹಿಪ್ಪರಗಿ ಬ್ಯಾರೇಜಿನ ನದಿ ಪಾತ್ರದಲ್ಲಿನ ರೈತರ ಪಂಪ್ ಸೆಟ್ ಗಳ ವಿದ್ಯುತ್ ನಿಲುಗಡೆಯನ್ನು ವಾರಕ್ಕೆ 2 ದಿನ ಮಾಡುವ ಸಂದರ್ಭ ಉಂಟಾಗಬಹುದು ಎಂದು ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ಆದ್ದರಿಂದ ಸದರಿ ವಿಷಯದ ಕುರಿತು ವಿವರವಾದ ಮಾಹಿತಿಯೊಂದಿಗೆ ಮತ್ತೊಮ್ಮೆ ಸಭೆ ನಡೆಸಿ, ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ ಅವರು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ