Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಟ್ಯಾಟೂನಿಂದ ಬರಲಿದೆ ಎಚ್​ಐವಿ, ಕ್ಯಾನ್ಸರ್ : ಕೇಂದ್ರಕ್ಕೆ ಈ ಬಗ್ಗೆ ಪತ್ರ , ಕಾನೂನು ಜಾರಿಗೆ ಚಿಂತನೆ ; ಗುಂಡೂರಾವ್

 

ಬೆಂಗಳೂರು: ಇಡ್ಲಿ ಬೇಯಿಸಲು ಉಪಯೋಗಿಸುವ ಪ್ಲಾಸ್ಟಿಕ್ ಹಾಳೆ ಬಳಕೆ ಆರೋಗ್ಯಕ್ಕೆ ಹಾನಿಕರ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಪರೀಕ್ಷೆಯಿಂದ ದೃಢಪಟ್ಟ ಟ್ಯಾಟೂನಿಂದ ಎಚ್​ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಶುಕ್ರವಾರ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಇಲಾಖೆಯ ಆಯುಕ್ತ ಶ್ರೀನಿವಾಸ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವರು, ಇತ್ತೀಚಿಗೆ ಚರ್ಮ ಕ್ಯಾನ್ಸರ್, ಹೆಚ್​ಐವಿ ಹಾಗೂ ಚರ್ಮ ರೋಗ, ಹೆಪಟೈಟಿಸ್ ಬಿ, ಹೆಪಟೈಟಿಸ್ ಸಿಯಂತಹ ಮಾರಣಾಂತಿಕ ರೋಗಗಳು ಜನರಲ್ಲಿ ಹೆಚ್ಚಾಗುತ್ತಿವೆ. ಇವುಗಳಿಗೆ ಟ್ಯಾಟೂ ಹಾಕಿಸುವುದು ಕೂಡ ಒಂದು ಕಾರಣ ಎಂಬುದು ಆರೋಗ್ಯ ಇಲಾಖೆ ನಡೆಸಿರುವ ತಪಾಸಣೆಯಿಂದ ತಿಳಿದುಬಂದಿದೆ. ಟ್ಯಾಟೂವನ್ನು ಹಾಕುವಾಗ ಬಳಸುವ ಬಣ್ಣದಲ್ಲಿ ಅಪಾಯಕಾರಿ ಮೆಟಲ್ ಬಳಕೆಯಾಗುತ್ತಿರುವುದು ಕಂಡುಬಂದಿದೆ. ಇದು ಸಹ ಮನುಷ್ಯನ ದೇಹಕ್ಕೆ ಅಪಾಯಕಾರಿಯಾಗಿದೆ ಎಂದು ತಿಳಿಸಿದರು.

ಟ್ಯಾಟೂನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಸಾಧ್ಯತೆ ಬಗ್ಗೆ ಕೇಂದ್ರ ಸರ್ಕಾರಕ್ಕೆ ನಿಯಮ ರೂಪಿಸಲು ಅವಕಾಶ ಇದೆ. ಟ್ಯಾಟೂ ಇಂಕ್ ಅನ್ನು ಕಾಂತಿ ವರ್ಧಕಗಳ ಅಡಿಯಲ್ಲಿ ತರಲು ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ನಂತರ ಟ್ಯಾಟೂ ಪಾರ್ಲರ್ ಗಳನ್ನು ನಿಯಂತ್ರಿಸಲು ಕಾನೂನು ರೂಪಿಸಲಾಗುವುದು ಎಂದು ಸಚಿವ ದಿನೇಶ ಗುಂಡೂರಾವ್‌ ತಿಳಿಸಿದರು.
ಜನವರಿಯಿಂದ ಒಟ್ಟು 3608 ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 26 ಮಾದರಿಗಳು ಅಸುರಕ್ಷಿತವಾಗಿವೆ ಎಂಬುದು ತಿಳಿದುಬಂದಿದೆ. 28 ಕಳಪೆಯಾಗಿವೆ. ಇದೇ ಜನವರಿಯಲ್ಲಿ 681 ರಷ್ಟು ಇಡ್ಲಿ ಸ್ಯಾಂಪಲ್ಸ್ ಪಡೆಯಲಾಗಿದೆ. ಇಡ್ಲಿ ಮಾಡುವಾಗ ಪ್ಲಾಸ್ಟಿಕ್ ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಘಟನೆ ಸಂಬಂಧ 52 ಆಹಾರ ಉತ್ಪಾದಕರಿಗೆ ನೋಟಿಸ್ ನೀಡಲಾಗಿದೆ. ಪ್ಲಾಸ್ಟಿಕ್ ಬಳಕೆ ಮಾಡದಂತೆ ಈಗಾಗಲೇ ನಾವು ಎಚ್ಚರಿಕೆ ನೀಡಿದ್ದೇವೆ ಎಂದು ಅವರು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ