Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾ ಕುಂಭಮೇಳ ಮುಕ್ತಾಯಕ್ಕೆ 4 ದಿನ ಬಾಕಿ: ತ್ರಿವೇಣಿ ಸಂಗಮದಲ್ಲಿ 60 ಕೋಟಿ ಭಕ್ತರಿಂದ ಪವಿತ್ರ ಸ್ನಾನ

ಪ್ರಯಾಗ್ ರಾಜ್ : ಪ್ರಯಾಗ್ ರಾಜ್ ನ ಮಹಾ ಕುಂಭಮೇಳದಲ್ಲಿ ಇದುವರೆಗೆ 60 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಶನಿವಾರ ತಿಳಿಸಿದೆ.

ಪ್ರಯಾಗ್ ರಾಜ್ ನ ಮಹಾ ಕುಂಭಮೇಳದಲ್ಲಿ ಇದುವರೆಗೆ 60 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಶನಿವಾರ ತಿಳಿಸಿದೆ.

ಜನವರಿ 13 ರಂದು ಪ್ರಾರಂಭವಾದ ಕುಂಭಮೇಳಕ್ಕೆ ಫೆಬ್ರವರಿ 26 ರಂದು ಮಹಾ ಶಿವರಾತ್ರಿಯಂದು ತೆರೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಪ್ರಯಾಗರಾಜ್ ಗೆ ಭಕ್ತರ ದಂಡೇ ಹರಿದು ಬರುತ್ತಿದೆ.

ಭಾರತದ 110 ಕೋಟಿ ಸನಾತನ ಅನುಯಾಯಿಗಳಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಪವಿತ್ರ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ ಮತ್ತು ಫೆಬ್ರವರಿ 26 ರಂದು ನಡೆಯುವ ಅಂತಿಮ 'ಅಮೃತ ಸ್ನಾನ'ದ ವೇಳೆಗೆ ಈ ಸಂಖ್ಯೆ 65 ಕೋಟಿಯನ್ನು ಮೀರುವ ನಿರೀಕ್ಷೆಯಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಈ ಮಹಾ ಕುಂಭವು ಯಾವುದೇ ಧಾರ್ಮಿಕ, ಸಾಂಸ್ಕೃತಿಕ ಅಥವಾ ಸಾಮಾಜಿಕ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಜನರ ಭಾಗವಹಿಸುವಿಕೆಯನ್ನು ದಾಖಲಿಸಿದೆ ಎಂದು ಉತ್ತರ ಪ್ರದೇಶ ಹೇಳಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ