Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸುಪ್ರಸಿದ್ಧ ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ : ಈ ಸಲ ಸಂಗ್ರಹವಾದ ಕಾಣಿಕೆ ಎಷ್ಟು ?

ಬೆಳಗಾವಿ : ದಕ್ಷಿಣ ಭಾರತದ ಅತ್ಯಂತ ಸುಪ್ರಸಿದ್ಧ ಹಾಗೂ ಅತ್ಯಂತ ಜಾಗೃತ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಸವದತ್ತಿಯ ಯಲ್ಲಮ್ಮ ದೇವಸ್ಥಾನದ ಹುಂಡಿಗಳ ಎಣಿಕೆ ಕಾರ್ಯ ಗುರುವಾರ ಮುಕ್ತಾಯಗೊಂಡಿದೆ. ಈ ಸಲ ರೂ. 1.04 ಕೋಟಿ ಕಾಣಿಕೆ ಸಂಗ್ರಹವಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ಅವರು,
ರೂ.5.22 ಲಕ್ಷ ಮೌಲ್ಯದ 53 ಗ್ರಾಂ ಚಿನ್ನಾಭರಣ, ರೂ.1.27 ಲಕ್ಷ ಮೌಲ್ಯದ 1,276 ಗ್ರಾಂ ಬೆಳ್ಳಿ ಸಾಮಗ್ರಿ, ರು.98.23 ಲಕ್ಷ ನಗದು ಸೇರಿದೆ ಎಂದು ತಿಳಿಸಿದರು.

ಯಲ್ಲಮ್ಮನ ಸನ್ನಿಧಿಗೆ ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ತಮ್ಮ ಇಷ್ಟಾರ್ಥಗಳು ಈಡೇರಿಸುವ ನಿಟ್ಟಿನಲ್ಲಿ ದೇವಸ್ಥಾನದ ಹುಂಡಿಯಲ್ಲಿ, ನಗದು ಮಾತ್ರವಲ್ಲದೆ ಚಿನ್ನಾಭರಣ, ಬೆಳ್ಳಿ ಆಭರಣ ಹಾಕಿ ಭಕ್ತಿ ಸಮರ್ಪಿಸುತ್ತಾರೆ.

ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಕಾರ್ಯಧರ್ಶಿ, ದೇವಸ್ಥಾನ ಅಧಿಕಾರಿಗಳು, ಧಾರ್ಮಿಕ ದತ್ತಿ ಇಲಾಖೆಯ ಸಿಬ್ಬಂದಿ, ಸವದತ್ತಿಯ ತಹಶೀಲ್ದಾರ, ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿ ಹುಂಡಿಗಳನ್ನು ಒಡೆಯಲಾಯಿತು.

ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿ ಬಾಳೇಶ ಅಬ್ಬಾಯಿ, ಎಂ.ಪಿ. ದ್ಯಾಮನಗೌಡ್ರ, ಅಲ್ಲಮಪ್ರಭು ಪ್ರಭುನವರ, ಆ‌ರ್.ಎಚ್‌. ಸವದತ್ತಿ, ಎನ್.ಎಂ. ಮುದಿಗೌಡರ, ಕೆನರಾ ಬ್ಯಾಂಕ್ ಮ್ಯಾನೇಜ‌ರ್ ಚಾನಾಕ್ಷೀ, ಮಾಂತೇಶ ಕೋಡಳ್ಳಿ, ಪ್ರಭು ಹಂಜಗಿ, ಶಿವಾನಂದ ನೇಸರಗಿ, ಅನಿಲ ತೇರದಾಳ, ಜಗದೀಶ ರೇವಣ್ಣವರ, ಎಎಸ್‌ಐ ಬಿ.ಆರ್. ಸಣ್ಣಮಾಳಗೆ, ಆನಂದ ಗೊರವನಕೊಳ್ಳ, ಡಿ.ಡಿ. ನಾಗನಗೌಡರ್ ಹಾಗೂ ದೇವಸ್ಥಾನದ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ