Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉದ್ಧವ್‌ಗೆ ಭಾರಿ ಹಿನ್ನಡೆ ; ಶಿಂಧೆ ಬಣದ ಜೊತೆ ಶಿವಸೇನೆ(ಯುಬಿಟಿ) 6 ಸಂಸದರ ವಿಲೀನಕ್ಕೆ ಲೋಕಸಭೆ ಸ್ಪೀಕರ್ ಅನುಮೋದನೆ

ಮುಂಬೈ: ಶಿವಸೇನಾ (ಉದ್ಧವ್ ಠಾಕ್ರೆ) ಪಕ್ಷಕ್ಕೆ ಮತ್ತೊಂದು ದೊಡ್ಡ ರಾಜಕೀಯ ಹಿನ್ನಡೆಯಾಗಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಶಿವಸೇನಾ (ಯುಬಿಟಿ)ಯಿಂದ ಬಂಡಾಯವೆದ್ದು ಹೊರಬಂದ ಆರು ಲೋಕಸಭಾ ಸದಸ್ಯರು ಏಕನಾಥ ಶಿಂಧೆ ನೇತೃತ್ವದ ಶಿವಸೇನೆಯಲ್ಲಿ ವಿಲೀನಗೊಳ್ಳಲು ಅನುಮೋದನೆ ನೀಡಿದ್ದಾರೆ.

ಈ ನಿರ್ಧಾರದಿಂದ ಬಂಡಾಯ ಸಂಸದರ ಪಕ್ಷಾಂತರವು ಸಂವಿಧಾನದ ಪಕ್ಷಾಂತರ ನಿಷೇಧ ಕಾಯ್ದೆ (Anti-Defection Law) ಅಡಿಯಲ್ಲಿ ಕಾನೂನುಬದ್ಧ ಮಾನ್ಯತೆ ಪಡೆದಿದ್ದು, ಜುಲೈ 20ರಿಂದ ಆರಂಭವಾಗಲಿರುವ ಸಂಸತ್ತಿನ ಮಳೆಗಾಲದ ಅಧಿವೇಶನಕ್ಕೂ ಮುನ್ನ ಶಿಂಧೆ ಬಣದ ಬಲ ಮತ್ತಷ್ಟು ಹೆಚ್ಚಿದೆ.
ಕಳೆದ ಜೂನ್ 22ರಂದು ಶಿವಸೇನಾ (ಯುಬಿಟಿ)ಯ ಆರು ಸಂಸದರು ಉದ್ಧವ್ ಠಾಕ್ರೆ ಅವರ ಪಕ್ಷವನ್ನು ತೊರೆದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾಗಿದ್ದರು. ಇದೀಗ ಸ್ಪೀಕರ್ ನೀಡಿರುವ ಅಧಿಕೃತ ಮಾನ್ಯತೆಯಿಂದ ಲೋಕಸಭೆಯಲ್ಲಿ ಶಿಂಧೆ ಬಣದ ಸದಸ್ಯರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಶಿಂಧೆ ಬಣ ಸೇರಿರುವ ಸಂಸದರು:
ಸಂಜಯ ದೀನಾ ಪಾಟೀಲ – ಮುಂಬೈ ಉತ್ತರ-ಪೂರ್ವ, ಓಂಪ್ರಕಾಶ್ ರಾಜೇ ನಿಂಬಾಳ್ಕರ – ಧಾರಾಶಿವ್, ಸಂಜಯ ದೇಶಮುಖ್ – ಯವತ್ಮಾಳ್-ವಾಶಿಂ, ಸಂಜಯ ಜಾಧವ್ – ಪರ್ಭಾನಿ, ಭಾವುಸಾಹೇಬ್ ವಾಕ್ಚೌರೆ – ಶಿರ್ಡಿ, ನಾಗೇಶ ಪಾಟೀಲ ಅಷ್ಟೀಕರ್ – ಹಿಂಗೋಲಿ ಅವರು ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಸೇರಿದ್ದಾರೆ.
ಟಿಎಂಸಿ ಬಂಡಾಯ ಸಂಸದರಿಗೂ ಪ್ರತ್ಯೇಕ ಮಾನ್ಯತೆ
ಇದರ ಜೊತೆಗೆ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ (NCPI) ರಚಿಸಿರುವ 20 ಸಂಸದರಿಗೆ ಲೋಕಸಭೆಯಲ್ಲಿ ಪ್ರತ್ಯೇಕ ಆಸನ ವ್ಯವಸ್ಥೆಗೆ ಸ್ಪೀಕರ್ ಅನುಮೋದನೆ ನೀಡಿದ್ದಾರೆ. ಇದರಿಂದ ಆ ಗುಂಪಿಗೂ ಸದನದಲ್ಲಿ ಪ್ರತ್ಯೇಕ ಅಸ್ತಿತ್ವಕ್ಕೆ ಅಧಿಕೃತ ಮಾನ್ಯತೆ ದೊರೆತಿದೆ.

ಠಾಕ್ರೆ-ಶಿಂಧೆ ಸಂಘರ್ಷಕ್ಕೆ ಹೊಸ ತಿರುವು
2022ರಲ್ಲಿ ಶಿವಸೇನಾ ವಿಭಜನೆಯಾದ ಬಳಿಕ ಉದ್ಧವ್ ಠಾಕ್ರೆ ಮತ್ತು ಏಕನಾಥ ಶಿಂಧೆ ಬಣಗಳ ನಡುವೆ ನಾಯಕತ್ವ, ಪಕ್ಷದ ಸಂಘಟನೆ, ಚುನಾವಣಾ ಚಿಹ್ನೆ ಹಾಗೂ ಅಧಿಕಾರದ ವಿಚಾರವಾಗಿ ರಾಜಕೀಯ ಮತ್ತು ಕಾನೂನು ಹೋರಾಟ ಮುಂದುವರಿದಿದೆ. ಇದೀಗ ಆರು ಸಂಸದರ ವಿಲೀನಕ್ಕೆ ಸ್ಪೀಕರ್ ನೀಡಿರುವ ಅನುಮೋದನೆ ಶಿಂಧೆ ಬಣಕ್ಕೆ ಮತ್ತಷ್ಟು ಬಲ ತುಂಬಿದ್ದು, ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ದೊಡ್ಡ ರಾಜಕೀಯ ಹಿನ್ನಡೆಯಾಗಿ ಪರಿಣಮಿಸಿದೆ.
ಜುಲೈ 20ರಿಂದ ಆರಂಭವಾಗಲಿರುವ ಸಂಸತ್ತಿನ ಮಳೆಗಾಲದ ಅಧಿವೇಶನಕ್ಕೂ ಮುನ್ನ ಈ ಬೆಳವಣಿಗೆ ರಾಷ್ಟ್ರೀಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಎಂದು ಪರಿಗಣಿಸಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಹುಕೋಟಿ ವಂಚನೆ : ನೀಲಣ್ಣವರ, ಆಪ್ತರ ನಿವಾಸಗಳ ಮೇಲೆ ಇಡಿ ದಾಳಿSIR : ಗಣತಿ ನಮೂನೆ ಸಲ್ಲಿಸಲು 17 ರವರೆಗೆ ಅವಕಾಶಈ ನಿಗೂಢ ಬಾವಿಯಲ್ಲಿ ಮತ್ತೆ ಅಚ್ಚರಿ ; ಸಮುದ್ರದ ಅಲೆಯಂತೆ ತನ್ನಷ್ಟಕ್ಕೆ ತಾನೇ ಏರಿಳಿಯುವ ನೀರು..!ವಿಭಾಗೀಯ ಕಚೇರಿಗಳನ್ನು ಬೆಳಗಾವಿಯಲ್ಲಿ ಸ್ಥಾಪಿಸಲು ಕ್ರಮ ಕೈಕೊಂಡವರು ಅರಸುಮದುವೆ ಮನೆಯಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ; ಹೆಸರು ಬದಲಿಸಿಕೊಂಡು ನಕಲಿ ವೈದ್ಯನಾಗಿ ಬದುಕಿದ್ದ ಆರೋಪಿ 28 ವರ್ಷಗಳ ನಂತರ ಸೆರೆ…!ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆಪುತ್ರಿಯರಿಗಾಗಿ ಜೀವನ ಮುಡಿಪಾಗಿಟ್ಟಿದ್ದ ತಂದೆ ವೃದ್ಧಾಶ್ರಮದಲ್ಲಿ ನಿಧನ ; ₹5100 ಕಳುಹಿಸಿ ವಿಡಿಯೊ ಕಾಲ್‌ನಲ್ಲಿ ಕೊನೆ ವಿದಾಯ ಹೇಳಿದ ಪುತ್ರಿಯರು...!ಯುವಜನತೆ  ಪಠ್ಯ ಮತ್ತು ಪಠ್ಯೇತರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವ ರೂಪಿಸಿಕೊಳ್ಳಿ : ಕುಲಪತಿ ತ್ಯಾಗರಾಜಗುರಿ, ಶಿಸ್ತು ಮತ್ತು ಸಾಧನೆಯಿಂದ ಯಶಸ್ಸು ಸಾಧ್ಯ: ಡಾ. ಸಿದ್ದು ಹುಲ್ಲೊಳ್ಳಿ  ಲಕ್ಷ್ಮೀ ಇದ್ದರೆ DK ಸಂಪುಟಕ್ಕೆ ಶೋಭೆ:  ಹೆಬ್ಬಾಳ್ಕರ್ ಯಾಕೆ ಸಂಪುಟಕ್ಕೆ ಅತ್ಯಂತ ಅವಶ್ಯಕ ಗೊತ್ತೇ ? ಬೆಳಗಾವಿಗೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಿದ್ದ ಮಹಾನಾಯಕಿ