Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉಸಿರುಗಟ್ಟಿಸಿ ಪತ್ನಿಯ ಕೊಂದ ಪತಿರಾಯ

ಬೆಳಗಾವಿ: ತವರು ಮನೆಗೆ ಹೊರಟ ಪತ್ನಿಯನ್ನು ತಡೆದುದಕ್ಕೆ ನಡೆದ ಜಗಳ ವಿಕೋಪಕ್ಕೆ ಹೋಗಿ ಹಗ್ಗದಿಂದ ಕುತ್ತಿಗೆ ಬಿಗಿದು ಪತ್ನಿಯನ್ನೇ ಪತಿರಾಯನೊಬ್ಬಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.
ನೇಗಿನಾಳದ ಫಕ್ಕಿರಪ್ಪ ಗಿಲಕ್ಕನವರ ಪತ್ನಿ ರಾಜೇಶ್ವರಿ ಗಿಲಕ್ಕನವರ (21) ಕೊಲೆಯಾದ ದುರ್ದೈವಿ. ಆರೋಪಿಯಾಗಿರುವ ಆಕೆಯ ಗಂಡ ಕೃಷಿಕ ನೇಗಿನಾಳದ ಫಕ್ಕಿರಪ್ಪ ಬಸಪ್ಪ ಗಿಲಕ್ಕನವರ (28) ಎಂಬವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜೇಶ್ವರಿ ಮತ್ತು ಫಕ್ಕಿರಪ್ಪರಿಗೆ ಮೂರು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರೂ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ದಿನವೂ ಜಗಳ ನಡೆಯುತ್ತಿತ್ತು. ಮಂಗಳವಾರ ಮೃತ ಮಹಿಳೆಯ ತನ್ನ ತಮ್ಮನ ಕೈಗೆ ಗಾಯವಾಗಿದ್ದರಿಂದ ತವರು ಮನೆಗೆ ಹೋಗುವುದಾಗಿ ತಿಳಿಸಿದ್ದಾಳೆ. ಆಗ ಗಂಡ ಜಮೀನಿನಲ್ಲಿ ಕೆಲಸ ಇದೆ, ಈಗ ಹೋಗಬೇಡ ಎಂದು ಹೇಳಿದ್ದ. ಇದರಿಂದ ಇಬ್ಬರ ನಡುವೆ ಜಗಳ ವಿಕೋಪಕ್ಕೆ ಹೋಗಿ ಕೋಪಗೊಂಡ ಆರೋಪಿ, ಹೆಂಡತಿಯನ್ನು ಕೊಲೆ ಮಾಡುವ ಉದ್ದೇಶದಿಂದ ಹಗ್ಗ ತೆಗೆದುಕೊಂಡು ಬಂದು ಮಲಗಿದ್ದ ರಾಜೇಶ್ವರಿಯ ಕೊರಳಿಗೆ ಅದನ್ನು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.
ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿವೈಎಸ್ಪಿ ಬೈಲಹೊಂಗಲ, ಸಿಪಿಐ ಕಿತ್ತೂರ ಹಾಗೂ ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ