Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾನು ಸಂಗೊಳ್ಳಿ ರಾಯಣ್ಣ-ಕಿತ್ತೂರು ಚನ್ನಮ್ಮನ ಅಭಿಮಾನಿ: ಸಿಎಂ ಸಿದ್ದರಾಮಯ್ಯ

ಕಿತ್ತೂರು: ದೇಶ ಅಂದರೆ, ದೇಶದೊಳಗಿರುವ ಜನ. ಯಾವುದೇ ಧರ್ಮದವರಿರಲಿ, ಜಾತಿಯವರಿರಲಿ ಅವರನ್ನು ಪ್ರೀತಿಬೇಕು ಎನ್ನುವುದನ್ನು ಚನ್ನಮ್ಮ-ರಾಯಣ್ಣ ಕಲಿಸಿಕೊಟ್ಟಿದ್ದಾರೆ. ಇದನ್ನು ನಾವು-ನೀವೆಲ್ಲಾ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

200ನೇ ವರ್ಷದ ಚನ್ನಮ್ಮನ ಕಿತ್ತೂರು ಉತ್ಸವವನ್ನು ವರ್ಣರಂಜಿತ ವೇದಿಕೆಯಲ್ಲಿ ಉದ್ಘಾಟಿಸಿದರು.

ಕಿತ್ತೂರು ರಾಣಿ ಚನ್ನಮ್ಮನ ಉತ್ಸವವನ್ನು ಸರ್ಕಾರ ಆಚರಿಸಬೇಕು ಎಂದು ಮೊದಲ ಬಾರಿಗೆ ಆದೇಶಿಸಿದ್ದು ನಮ್ಮ ಸರ್ಕಾರ. ಇವತ್ತಿನ‌ ಪೀಳಿಗೆಗೆ ಚನ್ನಮ್ಮನ ಇತಿಹಾಸ ಗೊತ್ತಾಗಬೇಕು ಎನ್ನುವ ಕಾರಣದಿಂದ ನಾವು ಈ ನಿರ್ಧಾರ ಮಾಡಿದೆವು. ಇತಿಹಾಸ ಗೊತ್ತಿಲ್ಲದವರು ಇತಿಹಾಸ ನಿರ್ಮಿಸಲಾಗದು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿದರು.

ನಾನು ಸಂಗೊಳ್ಳಿ ರಾಯಣ್ಣ-ಕಿತ್ತೂರು ಚನ್ನಮ್ಮನ ಅಭಿಮಾನಿ.
ರಾಣಿ ಚನ್ನಮ್ಮ, ರಾಣಿ ಅಬ್ಬಕ್ಕ, ಸಂಗೊಳ್ಳಿ ರಾಯಣ್ಣ, ಝಾನ್ಸಿ ರಾಣಿ ಮುಂತಾದವರ ಹೋರಾಟ ಮತ್ತು ಆಶಯಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಬ್ರಿಟೀಷರಿಗೆ ಸಿಂಹ ಸ್ವಪ್ನವಾಗಿದ್ದ ಹೋರಾಟಗಾರರಿಂದ ದೇಶದ ಜನರನ್ನು ಪ್ರೀತಿಸುವುದನ್ನು ನಾವು ಕಲಿಯಬೇಕು. ದೇಶ ಅಂದರೆ ದೇಶದ ಜನ. ಯಾವುದೇ ಧರ್ಮದವರಿರಲಿ, ಯಾವುದೇ ಜಾತಿಯವರಿರಲಿ ಎಲ್ಲರೂ ನಮ್ಮ ದೇಶದ ಜನ. ದೇಶದ ಜನರನ್ನು ಪ್ರೀತಿಸುವುದೇ ನಿಜವಾದ, ಸರಿಯಾದ ದೇಶಪ್ರೇಮ ಎಂದರು.

ಬಸವಣ್ಣನವರೂ ಇದನ್ನೇ ಹೇಳಿದ್ದರು. ಜಾತಿ, ಧರ್ಮದ ತಾರತಮ್ಯ ಇಲ್ಲದಂತೆ ಮನುಷ್ಯ ಪ್ರೀತಿಯನ್ನು ಸಾರಿದವರು ಬಸವಣ್ಣ. ಹೀಗಾಗಿ ನಮ್ಮ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿತು ಎಂದರು.

ಜಾತಿ, ಧರ್ಮದ ಅಸಮಾನತೆ ಸಮಾಜದಲ್ಲಿ ಇರುವಷ್ಟೂ ದಿನ ಸಾಮಾಜಿಕ ನ್ಯಾಯ ಬರಲು ಸಾಧ್ಯವಿಲ್ಲ. ಇದು ಸಾಧ್ಯವಾಗಬೇಕಾದರೆ ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಎಲ್ಲಾ ಜಾತಿ, ಧರ್ಮ, ಎಲ್ಕಾ ವರ್ಗದವರಿಗೂ ಸಿಗಬೇಕು ಎಂದರು.

ದೇಶದ ಜನರನ್ನು ಪ್ರೀತಿಸಿ, ದೇಶದ ಜನರ ಸ್ವಾತಂತ್ರ್ಯ ರಕ್ಷಣೆಗಾಗಿ ರಾಣಿ ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರಾಣತ್ಯಾಗ ಮಾಡಿದ್ದಾರೆ. ಇದು ಅತ್ಯುನ್ನತವಾದ ತ್ಯಾಗ. ಇದನ್ನು ನಾವು, ನೀವು, ಇವತ್ತಿನ‌ ಪೀಳಿಗೆ ಪಾಲಿಸಬೇಕು ಎಂದರು.

ಮಡಿವಾಳ ರಾಜ ಯೋಗೀಂದ್ರ ಸ್ವಾಮೀಜಿ ಕಲ್ಮಠ, ನಿಚ್ಚಣಿಕೆಯ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಹಾಸ್ವಾಮಿಗಳು, ಕೂಡಲ ಸಂಗಮದ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಬಾಬಾಸಾಹೇಬ ಪಾಟೀಲ ಅವರು ವಹಿಸಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಮುಖ್ಯ ಸಚೇತಕ ಅಶೋಕ ಮ.ಪಟ್ಟಣ, ಶಾಸಕರಾದ ಮಹಾಂತೇಶ ಕೌಜಲಗಿ, ಪ್ರಕಾಶ ಹುಕ್ಕೇರಿ, ಭರಮಗೌಡ ಕಾಗೆ, ವಿಶ್ವಾಸ್ ವೈದ್ಯ, ಆಸಿಫ್ ಸೇಠ್, ಬುಡಾ ಅಧ್ಯಕ್ಷ ಲಕ್ಷ್ಮಣ್ ರಾವ್ ಚಿಂಗಳೆ , ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ