Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಗತ್ತಿನ ಅದ್ಭುತ ಶಿಲ್ಪಿ, ಅಮರ ಶಿಲ್ಪಿ ಜಕಣಾಚಾರಿ: ಪ್ರೇಮಾ ಹಾವನೂರ

 

ಬೆಳಗಾವಿ :
ಜಗತ್ತಿನ ಅದ್ಭುತ ಶಿಲ್ಪಗಳಾದ ಅಮರ ಶಿಲ್ಪಿ ಜಕಣಾಚಾರಿ ಅವರು ಬೇಲೂರು ಮತ್ತು ಹಳೆಬೀಡು ಸೇರಿದಂತೆ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ ಎಂದು ಉಪನ್ಯಾಸಕಿ ಪ್ರೇಮಾ ಹಾವನೂರ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ರವಿವಾರ (ಜ.1) ನಡೆದ ಅಮರ ಶಿಲ್ಪಿ ಜಕಣಚಾರಿ ಜಯಂತಿಯಲ್ಲಿ ಉಪನ್ಯಾಸ ನೀಡಿದರು.

ಅಮರಶಿಲ್ಪಿ ಜಕಣಾಚಾರಿ ಅತ್ಯಂತ ಶ್ರೇಷ್ಠ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿಯಾಗಿದ್ದಾರೆ. ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ ಎಂದು ತಿಳಿಸಿದರು.

ಅಮರ ಶಿಲ್ಪಿ ಜಕಣಾಚಾರಿ ಪ್ರಾಮಾಣಿಕತೆ:

ಶಿಲ್ಪಿ ಜಕಣಾಚಾರಿ ಮಗನಾದ ಡಂಕಣಾಚಾರಿ ಆತನ ತಂದೆಯನ್ನು ಹುಡುಕುವುದಕ್ಕಾಗಿ ತಾನೇ ಒಬ್ಬ ಪ್ರಖ್ಯಾತ ಶಿಲ್ಪಿಯಾಗಿ ಬೆಳೆದನು. ಬೇಲೂರಿನಲ್ಲಿ ಅವನು ಶಿಲ್ಪಿಯ ಕೆಲಸಕ್ಕಾಗಿ ನೇಮಿಸಲ್ಪಟ್ಟು, ಮಹಾನ್ ಶಿಲ್ಪಿ ಜಕಣಾಚಾರಿ ನಿರ್ಮಿಸಿದ ಒಂದು ಶಿಲ್ಪದಲ್ಲಿ ಒಂದು ಲೋಪವನ್ನು ತೋರಿಸಿಕೊಟ್ಟನು.

ಇದರಿಂದ ಕೋಪಗೊಂಡ ಜಕಣಾಚಾರಿಗಳು ಅವರು ಕೆತ್ತಿದ ಶಿಲ್ಪದಲ್ಲಿ ದೋಷವಿದ್ದರೆ, ತನ್ನ ಬಲಗೈಯನ್ನು ಕತ್ತರಿಸಿಕೊಳ್ಳುವುದಾಗಿ ಪ್ರಮಾಣ ಮಾಡಿದರು. ಬಳಿಕ ಆ ಶಿಲ್ಪವನ್ನು ಪರೀಕ್ಷಿಸಿದ ನಂತರ, ದೋಷವಿರುವುದು ನಿಜವೆಂದು ಗೊತ್ತಾಗಿ ಜಕಣಾಚಾರಿ ತಮ್ಮ ವಾಗ್ದಾನದಂತೆ ತಮ್ಮ ಬಲಗೈಯನ್ನು ಕತ್ತರಿಸಿಕೊಂಡರು.

ಕೊನೆಯಲ್ಲಿ, ಆ ಇಬ್ಬರು ಶಿಲ್ಪಿಗಳು ಅವರಿಬ್ಬರೂ ತಂದೆ,
ಮಗ ಎಂಬ ಸಂಬಂಧವನ್ನು ತಿಳಿದುಕೊಂಡರು ಎಂದು ಅಮರ ಶಿಲ್ಪಿ ಜಕಣಾಚಾರಿ ಅವರ ಜೀವನ ಚರಿತ್ರೆಯನ್ನು ಪ್ರೇಮಾ ಹಾವನೂರ ಅವರು ಉಪನ್ಯಾಸದಲ್ಲಿ ತಿಳಿಸಿದರು.

ಡಕಣಾಚಾರಿ ಶಿಲ್ಪಕಲೆ ಮಾಹಿತಿ:

ಮಾಡುವ ಕೆಲಸದ ಬಗ್ಗೆ ತಿಳಿವಳಿಕೆ, ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆ ಇದ್ದಲ್ಲಿ ಯಶಸ್ಸು ಲಭಿಸುತ್ತದೆ. ನಮ್ಮೊಳಗಿನ ಕಲೆಯನ್ನು ನಾವು ಗುರುತಿಸಿದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸುತ್ತದೆ ಎಂದು ಶಿಲ್ಪಿ ಜಕಣಾಚಾರಿ ತೋರಿಸಿಕೊಟ್ಟಿದ್ದಾರೆ

ಜಕಣಾಚಾರಿ ಅವರು ತಮ್ಮ ಇಡೀ ಜೀವನವನ್ನು ಶಿಲ್ಪ ಕಲೆಯ ಕೆತ್ತನೆಯಲ್ಲಿ ತೊಡಗಿಸಿಕೊಂಡಿದ್ದರು. ಜಕಣಾಚಾರಿ ಅವರ ಮಗ ಡಕಣಾಚಾರಿ ಅವರು ಕೂಡ, ಕಪ್ಪೆಚನ್ನಿಗರಾಯ ದೇವಸ್ಥಾನವನ್ನು ಅದ್ಭುತ ಕಲಾಕೃತಿಯಿಂದ ನಿರ್ಮಿಸಿದ್ದಾರೆ ಎಂದು ಉಪನ್ಯಾಸಕಿ ಪ್ರೇಮಾ ಹಾವನೂರ ಮಾಹಿತಿ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸಮಾಜದ ಮುಖಂಡರಾದ ಅಶೋಕ ಮುದ್ನಾಳ, ಸಿ.ವೈ. ಪತ್ತಾರ, ಯುವ ಮುಖಂಡರಾದ ಮಲ್ಲಿಕಾರ್ಜುನ ಪತ್ತಾರ, ವೈಶಾಲಿ ಸುತ್ತಾರ, ಜನಾರ್ದನ ಬಡಿಗೇರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕ ವಿದ್ಯಾವತಿ ಭಜಂತ್ರಿ, ಉಪಸ್ಥಿತರಿದ್ದರು. ಸಂಗೀತ ಕಾರ್ಯಕ್ರಮ ಸುರೇಶ ಚಂದರಗಿ ಅವರು ಪ್ರಸ್ತುತ, ಪಡಿಸಿದರು. ಸುನೀತಾ ದೇಸಾಯಿ ನಿರೂಪಿಸಿ, ವಂದಿಸಿದರು.

ಮೆರವಣಿಗೆ ಕಾರ್ಯಕ್ರಮ:

ಇದಕ್ಕೂ ಮುಂಚೆ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ನಗರದ ಕೋಟೆ ಕೆರೆಯಿಂದ ಕುಮಾರ ಗಂಧರ್ವ ಕಲಾ ಮಂದಿರದವರೆಗೆ ಮೆರವಣಿಗೆ ನಡೆಯಿತು.

ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಅನಿಲ ಬೆನಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸಮಾಜದ ಮುಖಂಡರಾದ ಅಶೋಕ ಮುದ್ನಾಳ, ಸಿ.ವೈ. ಪತ್ತಾರ, ಯುವ ಮುಖಂಡರಾದ ಮಲ್ಲಿಕಾರ್ಜುನ ಪತ್ತಾರ, ವೈಶಾಲಿ ಸುತ್ತಾರ, ಜನಾರ್ದನ ಬಡಿಗೇರ ಹಾಜರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ