Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶೀಘ್ರದಲ್ಲೇ ನೀರಾವರಿ ಯೋಜನೆಗಳ ಅನುಷ್ಠಾನ: ಸಚಿವ ಸತೀಶ್‌ ಜಾರಕಿಹೊಳಿ

 

ಸವದತ್ತಿ: ಜಿಲ್ಲೆಯಲ್ಲಿ ಅನೇಕ ನೀರಾವರಿ ಯೋಜನೆಗಳ ಜಾರಿಗಾಗಿ ಹೋರಾಟ ನಡೆಯುತ್ತಿದ್ದು, ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಶೀಘ್ರದಲ್ಲೇ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದರು.

ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಿಂದೋಗಿ ಗ್ರಾಮದಲ್ಲಿ ಗ್ರಾಪಂನಲ್ಲಿ ಅನುಷ್ಠಾನಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಯಾವುದೇ ಒಂದು ಮತಕ್ಷೇತ್ರ ಅಥವಾ ಜಿಲ್ಲೆ ಪ್ರಗತಿ ಹೊಂದಬೇಕಾದರೆ ನೀರಾವರಿ ಅವಶ್ಯಕವಾಗಿ ಬೇಕು. ಅದರೊಂದಿಗೆ ನಾವು ಶಿಕ್ಷಣಕ್ಕಾಗಿಯೂ ಆದ್ಯತೆ ನೀಡಬೇಕು. ಮಕ್ಕಳ ಭವಿಷ್ಯ ಗುಣಮಟ್ಟದ ಶಿಕ್ಷಣದ ಮೇಲೆಯೇ ಅವಲಂಬಿತವಾಗಿರುತ್ತದೆ ಎಂದು ತಿಳಿಸಿದರು.

ಯಮಕನಮರಡಿ ಮತಕ್ಷೇತ್ರದಲ್ಲಿ ಅಪಾರ ಆಸಕ್ತಿ ವಹಿಸಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ಶಾಸಕ ವಿಶ್ವಾಸ ವೈದ್ಯ ಅವರು ಅದೇ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಪ್ರಗತಿಗೆ ಶ್ರಮಿಸಬೇಕು. ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಯ ಅನೇಕ ಅಂಗನವಾಡಿ ಕೇಂದ್ರಗಳಿಗೆ ಕಟ್ಟದ ವ್ಯವಸ್ಥೆ ಸರಿಯಾಗಿಲ್ಲ. ಹೀಗಾಗಿ ನಮ್ಮದೇ ಜಿಲ್ಲೆಯ ಸಚಿವೆಯಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಅಂಗನವಾಡಿ ಕೇಂದ್ರಗಳ ಸುಧಾರಣೆಗೆ ಮುಂದಾದರೆ ಒಳ್ಳೆಯದು ಎಂದ ಅವರು ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ಮುಂದಿನ ಎರಡು ಮೂರು ವರ್ಷಗಳಲ್ಲಿ ಜಿಲ್ಲೆಯ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದರು.

ಮುನವಳ್ಳಿಯ ಸೋಮಶೇಖರ್ ಮಠದ ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು.ಈ ಸಂದರ್ಭದಲ್ಲಿ ಶಾಸಕರಾದ ವಿಶ್ವಾಸ ವೈದ್ಯ, ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಮುಖಂಡರು ಮತ್ತು ಹಿರಿಯರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ