Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾಂ ಶುಗರ್ಸ್ ರೈತ ಬಾಂಧವರಿಗೆ ಮಹತ್ವದ ಸೂಚನೆ

 

ಬೆಳಗಾವಿ :
ಬೆಳಗಾಂ ಶುಗರ್ಸ್ ಕಾರ್ಖಾನೆಯು ಕಬ್ಬು ಪೂರೈಸಿದ ರೈತ ಬಾಂಧವರ ಸಹಾಯ ಮತ್ತು ಸಹಕಾರದಿಂದಾಗಿ ಸತತ ಯಶಸ್ಸನ್ನು ಸಾಧಿಸುತ್ತಿದ್ದು, ಪ್ರಸಕ್ತ 2022-23 ರ ಹಂಗಾಮನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಕಾರ್ಖಾನೆಯ ಪ್ರಕಟಣೆ ತಿಳಿಸಿದೆ.

ಪ್ರಸ್ತುತ ಹಂಗಾಮಿನಲ್ಲಿ ಕಾರ್ಖಾನೆಯ ಸುತ್ತುಮುತ್ತಲಿನ ಸುಮಾರು 80 ಕಿ.ಮೀ. ಅಂತರದಲ್ಲಿರುವ ಕಬ್ಬು ಬೆಳೆಯುವ ಪ್ರದೇಶದಿಂದ ಉತ್ತಮ ತಳಿಯ ಕಬ್ಬನ್ನು ಪಡೆಯಲಾಗುವುದು.

ಸನ್ 2020-21 ನೇ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತ ಬಾಂಧವರಿಗೆ ಪ್ರತಿ ಟನ್ ಟನ್ನಿಗೆ ರೂ.2500/- ಗಳಷ್ಟು ಮೊದಲನೇ ಕಂತಾಗಿ ಮತ್ತು ರೂ.100/- ಗಳಷ್ಟು ಹಣವನ್ನು ಎರಡನೇ ಕಂತಾಗಿ ಈಗಾಗಲೇ ನೀಡಲಾಗಿದ್ದು, ಆಡಳಿತ ಮಂಡಳಿಯ ಸಭೆಯಲ್ಲಿ ಚರ್ಚಿಸಿದಂತೆ, ಇನ್ನೂ ರೂ.50/-ಗಳಷ್ಟು ಹಣವನ್ನು ಮೂರನೆ ಕಂತಾಗಿ ನೀಡಲು ನಿರ್ಧಲಾಸಲಾಗಿದೆ. ಇದರೊಂದಿಗೆ ಸನ್ 2020-21 ನೇ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತಬಾಂಧವರಿಗೆ ಪ್ರತಿ ಟನ್‌ ಕಬ್ಬಿಗೆ ಒಟ್ಟಾರೆಯಾಗಿ ರೂ.2650/-ಗಳಷ್ಟು ದರವನ್ನು ನೀಡಿದಂತಾಗುತ್ತದೆ.

ಸನ್ 2021-22 ನೇ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತ ಬಾಂಧವರಿಗೆ ಈಗಾಗಲೇ ರೂ.2600/-ಗಳಷ್ಟು ದರವನ್ನು ನೀಡಲಾಗಿದ್ದು, ಎರಡನೇ ಕಂತಾಗಿ ರೂ.100/-ಗಳಷ್ಟು ಹಣವನ್ನು ನೀಡಲು ನಿರ್ಧಲಾಸಲಾಗಿದೆ. ಇದರೊಂದಿಗೆ ಸನ್ 2021-22 ನೇ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತ ಬಾಂಧವರಿಗೆ ಪ್ರತಿ ಟನ್ ಕಬ್ಬಿಗೆ ಒಟ್ಟಾರೆಯಾಗಿ ರೂ.2700/ ಗಳಷ್ಟು ದರವನ್ನು ನೀಡಿದಂತಾಗುತ್ತದೆ.

ಪ್ರಸಕ್ತ ಹಂಗಾಮಿನಲ್ಲಿ ಉತ್ತಮ ಗುರಿ ಸಾಧಿಸುವ ನಿರೀಕ್ಷೆ ಹೊಂದಿದ್ದು, ಇದು ರೈತ ಬಾಂಧವರ ಸಹಾಯ ಮತ್ತು ಸಹಕಾರದಿಂದ ಮಾತ್ರ ಸಾಧ್ಯವಾಗಲಿದ್ದು, ಕಾರ್ಖಾನೆಗೆ ಕಬ್ಬು ಪೂರೈಸುವ ಸಮಸ್ತ ರೈತ ಬಾಂಧವರು ಈ ಹಿಂದೆ ಹೆಚ್ಚು ಕಬ್ಬು ಪೂರೈಸಿ ಕಾರ್ಖಾನೆಯ ಪ್ರಗತಿಗೆ ಸಹಕರಿಸಿದಂತೆ ಪ್ರಸಕ್ತ ಹಂಗಾಮಿನಲ್ಲಿಯೂ ಒಳ್ಳೆಯ ಗುಣಮಟ್ಟ, ಒಳ್ಳೆಯ ರಿಕವರಿ ಇರುವ ಕಬ್ಬನ್ನು ಕಾರ್ಖಾನೆಗೆ ಪೂರೈಸಿ ಯಶಸ್ಸಿನಲ್ಲಿ ಭಾಗಿಯಾಗುವರೆಂದು ಆಶಿಸುವುದಾಗಿ ಪ್ರಕಟಣೆ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ