Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಗ್ರಾಮೀಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮುಂದೆ ಇತರರು ಗೌಣ !

ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಹಾಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯಮಟ್ಟದ ನಾಯಕಿಯಾಗಿದ್ದಾರೆ. ಇಡೀ ರಾಜ್ಯಾದ್ಯಂತ ಅವರನ್ನು ಆರಾಧಿಸುವ ಬಹುದೊಡ್ಡ ಅಭಿಮಾನಿಗಳ ಪಡೆಯೇ ನಿರ್ಮಾಣವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಸದ್ಯ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಬಲ ಮಹಿಳಾ ನಾಯಕಿಯಾಗಿ ಹೊರಹೊಮ್ಮಿದ್ದಾರೆ. ರಾಜ್ಯಾದ್ಯಂತ ಅವರು ಚಿರಪರಿಚಿತರಾಗಿದ್ದು ವಿಧಾನಸಭಾ ಚುನಾವಣೆ ಕಾಲಕ್ಕೆ ರಾಜ್ಯಾದ್ಯಂತ ಪ್ರಚಾರ ಕೈಗೊಳ್ಳಬೇಕಾಗಿರುವುದು ಅವರ ಅಪಾರ ಜನಪ್ರಿಯತೆಗೆ ಸಾಕ್ಷಿ ಎನ್ನಬಹುದು.

ಜನಜೀವಾಳ ಸರ್ಚ್ ಲೈಟ್ ಬೆಳಗಾವಿ : ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್ ಅಲೆ ಕಾಣಿಸಿಕೊಂಡಿದೆ. ಕಾಂಗ್ರೆಸ್ ಹಾಲಿ ಶಾಸಕ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಮ್ಮೆ ವಿಜಯಿಯಾಗುವ ಎಲ್ಲಾ ಸೂಚನೆಗಳು ಸದ್ಯದ ವಾತಾವರಣದಲ್ಲಿ ಕಂಡುಬಂದಿದೆ. ಹಲವಾರು ಖಾಸಗಿ ವಾಹಿನಿಗಳು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರಾದ್ಯಂತ ಜನತೆಯ ಹಾಗೂ ಮನೆಮನೆಯ ಸಮೀಕ್ಷೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಎಲ್ಲರೂ ವಿಶೇಷವಾಗಿ ಹಾಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪರವಾಗಿ ಜೈಕಾರ ಹಾಕಿರುವುದು ಮತ್ತೊಮ್ಮೆ ಅವರೇ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕರಾಗುವ ಸೂಚನೆಯನ್ನು ರವಾನಿಸಿದೆ.

ಕಳೆದ ಐದು ವರ್ಷಗಳಿಂದ ಬೆಳಗಾವಿ ಗ್ರಾಮೀಣ ಮತಕ್ಷೇತ್ರವನ್ನು ಕಾಂಗ್ರೆಸ್ ಪಕ್ಷದಿಂದ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುತ್ತಿದ್ದಾರೆ. ಅವರ ಅಬ್ಬರದ ಮುಂದೆ ಪ್ರತಿ ಸ್ಪರ್ಧಿಗಳು ನೆಲಕಚ್ಚಿದ್ದು ಈ ಬಾರಿಯೂ ಅವರಿಗೆ ತಕ್ಕ ಪ್ರತಿಸ್ಪರ್ಧಿ ಯಾರು ಇಲ್ಲ ಎಂಬ ವಾತಾವರಣ ಸದ್ಯದ ವಾಸ್ತವ ನೋಟ.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದೆ. ಆದರೆ, ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಮತ ಕ್ಷೇತ್ರಕ್ಕೆ ಹೇರಳ ಪ್ರಮಾಣದಲ್ಲಿ ಅಭಿವೃದ್ಧಿಯ ನಾಗಾಲೋಟವನ್ನು ಹರಿಸಿದ್ದಾರೆ. ಯಥೇಚ್ಛ ಪ್ರಮಾಣದಲ್ಲಿ ಅನುದಾನ ತಂದು ಕ್ಷೇತ್ರವನ್ನು ಹಿಂದುಳಿದ ಮತಕ್ಷೇತ್ರ ಎಂಬ ಹಣೆಪಟ್ಟಿಯಿಂದ ಬಿಡುಗಡೆಗೊಳಿಸಿರುವುದು ಕ್ಷೇತ್ರದಲ್ಲಿ ಅವರ ಪರವಾಗಿ ಬಿರುಗಾಳಿಯಂಥ ಅಲೆಗಳು ಏಳಲು ಕಾರಣವಾಗಿದೆ.

ಒಟ್ಟಾರೆ, ರಾಜ್ಯದಲ್ಲಿ ದಿನ ದಿನಕ್ಕೆ ವಿಧಾನಸಭೆಯ ಚುನಾವಣೆ ಕಾವೇರುತ್ತಿದೆ. ಆದರೆ, ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಮಾತ್ರ ಲಕ್ಷ್ಮೀ ಹೆಬ್ಬಾಳಕಾರ ಹೆಸರು ಬಿಟ್ಟರೆ ಇತರರು ಗೌಣ ಎಂಬ ಸನ್ನಿವೇಶ ಇದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ