Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಶ್ವ ಗಣಿತಶಾಸ್ತ್ರಕ್ಕೆ ಭಾರತದ ಕೊಡುಗೆ ಅಪಾರ: ಡಾ. ಎಸ್.ಎಸ್. ತೇರದಾಳ

 

ಬೆಳಗಾವಿ :
ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಗಣಿತ ವಿಭಾಗದಿಂದ ರಾಷ್ಟ್ರೀಯ ಗಣಿತ ದಿನವನ್ನು ಆಚರಿಸಲಾಯಿತು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್. ಎಸ್. ತೇರದಾಳ ಅವರು ಗಣಿತತಜ್ಞ ಶ್ರೀನಿವಾಸ ರಾಮಾನುಜನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಭಾರತದಲ್ಲಿ ಪ್ರಾಚೀನ ಕಾಲದಿಂದಲೂ ಗಣಿತಶಾಸ್ತ್ರಕ್ಕೆ ವಿಶೇಷವಾದ ಮನ್ನಣೆಯಿತ್ತು. ಅವರಲ್ಲಿ ಆರ್ಯಭಟ, ಬ್ರಹ್ಮಗುಪ್ತ, ವರಹಮೀರರು ಅನನ್ಯವಾದ ಕೊಡುಗೆಗಳನ್ನು ನೀಡಿದ್ದಾರೆ. ಜಗತ್ತಿನ ಶ್ರೇಷ್ಠ ಗಣಿತತಜ್ಞರಲ್ಲಿ ಶ್ರೀನಿವಾಸ ರಾಮಾನುಜನ್ ಅವರು ಮೊದಲ ಸಾಲಿನಲ್ಲಿ ನಿಲ್ಲುತ್ತಾರೆ. ಗಣಿತ ಶಾಸ್ತ್ರಕ್ಕೆ ಅವರ ಕೊಡುಗೆ ಅಪಾರವಾದದ್ದು. ಅವರು ತಮ್ಮ ಬೌದ್ಧಿಕ ಸಂಪತ್ತಿನ ಮೂಲಕ ಜಗತ್ತಿನ ಗಣಿತಲೋಕದಲ್ಲಿ ಭಾರತದ ಸ್ಥಾನವನ್ನು ಅಜರಾಮರವಾಗಿ ಉಳಿಸಿದರು. ವಿದ್ಯಾರ್ಥಿಗಳಿಗೆ ಶ್ರೀನಿವಾಸ ರಾಮಾನುಜನ್ ಅವರ ವ್ಯಕ್ತಿತ್ವ ಸದಾ ಮಾದರಿಯಾಗಿರುವುದು ಎಂದರು.

ಗಣಿತ ವಿಭಾಗದ ಮುಖ್ಯಸ್ಥ ಆದಿನಾಥ ಉಪಾಧ್ಯೆ ಮಾತನಾಡಿ, ಶ್ರೀನಿವಾಸ ರಾಮಾನುಜನ್ ಅವರು ಚಿಕ್ಕ ವಯಸ್ಸಿನಲ್ಲೇ ಗಣಿತದ ಬಗೆಗೆ ವಿಶೇಷ ಆಸಕ್ತಿಯುಳ್ಳವರಾಗಿದ್ದರು. ಚಿಹ್ನೆ ಮತ್ತು ಭಿನ್ನರಾಶಿಗಳು, ಅನಂತ ಸರಣಿ, ಸಂಖ್ಯೆ ಸಿದ್ಧಾಂತ, ಗಣಿತ ವಿಶ್ಲೇಷಣೆಗೆ ಸಂಬಂಧಿಸಿದ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ಇವರ ಜನ್ಮದಿನವನ್ನು ರಾಷ್ಟ್ರೀಯ ಗಣಿತ ದಿನವನ್ನಾಗಿ ಆಚರಿಸುತ್ತಿರುವುದು ತುಂಬಾ ಅರ್ಥಪೂರ್ಣವಾಗಿದೆ ಎಂದರು.
ಉಪನ್ಯಾಸಕಿ ಗೌರಮ್ಮ ಇಂಗಳಗಿ ನಿರೂಪಿಸಿದರು. ಡಾ. ಲಲಿತಾ ಲಮಾಣಿ ವಂದಿಸಿದರು. ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ