Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಮನವೊಲಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ಹೈಕಮಾಂಡ್ ತೀರ್ಮಾನವನ್ನು ಅವರಿಗೆ ಮನವರಿಕೆ ಮಾಡಿಕೊಟ್ಟು, ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರುವುದಾಗಿ ಅವರು ಹೇಳಿದ್ದಾರೆ.

ಬಿಟಿಎಂ ಲೇಔಟ್ ಶಾಸಕರಾದ ರಾಮಲಿಂಗಾರೆಡ್ಡಿ ಅವರು ತಾವು ಬಯಸಿದ್ದ ‘ಬೆಂಗಳೂರು ನಗರಾಭಿವೃದ್ಧಿ’ ಖಾತೆಯನ್ನು ನೀಡದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಹೊಸದಾಗಿ ರಚನೆಯಾಗಿದ್ದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಅವರಿಗೆ ಪ್ರಸ್ತುತ ‘ಬೃಹತ್ ಮತ್ತು ಮಧ್ಯಮ ನೀರಾವರಿ’ ಖಾತೆಯನ್ನು ಹಂಚಿಕೆ ಮಾಡಲಾಗಿದೆ.

ಭರವಸೆ ನೀಡಿದ್ದ ಸಿಎಂ ಶಿವಕುಮಾರ
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು, ಈ ಹಿಂದೆ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ತಾವು ಭರವಸೆ ನೀಡಿದ್ದನ್ನು ಒಪ್ಪಿಕೊಂಡಿದ್ದಾರೆ. ಆದರೆ, ಖಾತೆ ಹಂಚಿಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
“ನಾನು ಅಧಿಕಾರಕ್ಕೆ ಬಂದಾಗ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಈ ಹಿಂದೆ ಹೇಳಿದ್ದು ನಿಜ. ಹಾಗೆಯೇ ಅವರನ್ನು ಮನವೊಲಿಸಿ ಅವರು ಸಾರಿಗೆ ಖಾತೆ ಒಪ್ಪುವಂತೆ ಮಾಡಿದ್ದೆ. ಆದರೆ, ಈಗ ಹೈಕಮಾಂಡ್ ಈ ನಿರ್ಧಾರವನ್ನು ತಗೆದುಕೊಂಡಿದೆ,” ಎಂದು ಶಿವಕುಮಾರ ವಿವರಿಸಿದರು.
ರಾಮಲಿಂಗಾರೆಡ್ಡಿ ಅವರು ಅಸಮಾಧಾನಗೊಂಡಿದ್ದಾರೆ ಮತ್ತು ತಮ್ಮ ಕರೆಗಳಿಗೆ ಸಿಗುತ್ತಿಲ್ಲ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, “ರೆಡ್ಡಿಯವರು ತಮ್ಮ ಮಕ್ಕಳ ಮನೆಗೆ ಹೋಗಿದ್ದು, ಈಗ ಹಿಂತಿರುಗುತ್ತಿದ್ದಾರೆ. ನಾನು ಖುದ್ದಾಗಿ ಹೋಗಿ ಅವರನ್ನು ಭೇಟಿಯಾಗುತ್ತೇನೆ. ಅವರು ನಮ್ಮ ಅತ್ಯಂತ ಹಿರಿಯ ನಾಯಕರು, ಎಂದು ಹೇಳಿದರು.

ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಕೃಷ್ಣ ಬೈರೇಗೌಡ ಅವರಿಗೆ ನೀಡಿರುವ ಕುರಿತು ಮಾತನಾಡಿದ ಶಿವಕುಮಾರ, “ಕೃಷ್ಣ ಬೈರೇಗೌಡರು ಈ ಇಲಾಖೆಯನ್ನು ಕೇಳಿದ್ದರು, ಹಾಗಾಗಿ ಪಕ್ಷದ ಹೈಕಮಾಂಡ್ ಈ ನಿರ್ಧಾರ ಮಾಡಿದೆ. ನಾನು ಕೂಡ ಈ ಖಾತೆಗೆ ವಿನಂತಿಸಿದ್ದೆ. ಆದರೆ ಪಕ್ಷ ಮತ್ತು ಹೈಕಮಾಂಡ್ ನಿರ್ಧಾರ ಕೈಗೊಂಡ ಮೇಲೆ ನಾನು ಅದನ್ನು ಗೌರವಿಸಬೇಕಾಯಿತು. ನಡೆದ ವಿಷಯದ ಬಗ್ಗೆ ಈಗ ನಾನು ಅವರೊಂದಿಗೆ (ರಾಮಲಿಂಗಾರೆಡ್ಡಿ) ಮಾತನಾಡಬೇಕಿದೆ,” ಎಂದು ಹೇಳಿದರು.
ಖಾತೆ ಬದಲಾವಣೆಯ ಸಾಧ್ಯತೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಈ ವಿಷಯದಲ್ಲಿ ಪಕ್ಷದ ವರಿಷ್ಠರು ಮಾತ್ರ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ. “ಯಾವುದೇ ಬದಲಾವಣೆ ಇದ್ದರೂ ನಮ್ಮ ಪಕ್ಷದ ಹೈಕಮಾಂಡ್ ಮಾತ್ರ ಮಾತನಾಡಬಹುದು, ನಾನು ಏನೂ ಮಾಡಲು ಸಾಧ್ಯವಿಲ್ಲ,” ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಮುನಿಯಪ್ಪ ಅಸಮಾಧಾನ ಶಮನ
ಮತ್ತೊಬ್ಬ ಹಿರಿಯ ನಾಯಕರಾದ ಕೆ.ಎಚ್. ಮುನಿಯಪ್ಪ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ನೀಡಿರುವುದಕ್ಕೆ ಅವರು ಅಸಮಾಧಾನ ಹೊರಹಾಕಿದ್ದರು ಎನ್ನಲಾದ ವಿಷಯದ ಕುರಿತು ಮಾತನಾಡಿದ ಶಿವಕುಮಾರ, ಪಕ್ಷದ ನಾಯಕತ್ವದೊಂದಿಗೆ ಮಾತುಕತೆ ನಡೆಸಿದ ಬಳಿಕ ಈ ಸಮಸ್ಯೆ ಬಗೆಹರಿದಿದೆ ಎಂದರು.
“ಮುನಿಯಪ್ಪ ಅವರು ಒಪ್ಪಿಕೊಂಡಿದ್ದಾರೆ. ಅವರೊಂದಿಗೆ ರಾಹುಲ್ ಗಾಂಧಿ ಹಾಗೂ ನಾನು ಕೂಡ ಮಾತನಾಡಿದ್ದೇನೆ. ‘ನೀವು ಯಾವುದೇ ಖಾತೆ ನೀಡಿದರೂ ನಾವು ಸ್ವೀಕರಿಸುತ್ತೇವೆ ಮತ್ತು ಪಕ್ಷಕ್ಕಾಗಿ ಕೆಲಸ ಮಾಡುತ್ತೇವೆ’ ಎಂದು ಅವರು ಹೇಳಿದ್ದಾರೆ,” ಎಂದು ಡಿ.ಕೆ. ಶಿವಕುಮಾರ ತಿಳಿಸಿದರು.
ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಕೆ.ಎಚ್. ಮುನಿಯಪ್ಪ, ತಮಗೆ ಸಮಾಜ ಕಲ್ಯಾಣ, ಕೃಷಿ ಮತ್ತು ನೀರಾವರಿ ಇಲಾಖೆಗಳ ಮೇಲೆ ಆಸಕ್ತಿ ಇತ್ತು ಎಂದು ಬಹಿರಂಗಪಡಿಸಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ