Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಹುಲ್ ಗಾಂಧಿಯವರನ್ನು ಸ್ವಾಗತಿಸಿಕೊಂಡ ಜಗದೀಶ ಶೆಟ್ಟರ !

 

ಹುಬ್ಬಳ್ಳಿ:
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರನ್ನು ಇತ್ತೀಚಿಗಷ್ಟೇ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸ್ವಾಗತಿಸಿಕೊಂಡು ಗಮನ ಸೆಳೆದರು.
ಹುಬ್ಬಳ್ಳಿಗೆ ಆಗಮಿಸಿದ್ದ ರಾಹುಲ್ ಗಾಂಧಿ ಅವರನ್ನು ಶೆಟ್ಟರ್ ಬರಮಾಡಿಕೊಂಡು ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಗಲಿರುವ ಲಾಭಗಳ ಬಗ್ಗೆ ಮನವರಿಕೆ ಮಾಡಿದರು.

ನಾಗಪುರದಿಂದ ಯಾರೇ ಬರಲಿ :
ನಾಗಪುರದಿಂದ ಯಾರೇ ಬಂದರೂ, ನನ್ನ ವಿರುದ್ಧ ಕೆಲಸ ಮಾಡಿದರೂ ಪ್ರಯೋಜವಾಗುವುದಿಲ್ಲ. ಅವರಿಗೆ ಸ್ಥಳೀಯವಾಗಿ ಯಾವ ಜ್ಞಾನವೂ ಇರುವುದಿಲ್ಲ. ಅವರು ಇಲ್ಲಿನ ಸ್ಥಿತಿ ಅಧ್ಯಯನ ಮಾಡುವ ಹೊತ್ತಿಗೆ ಚುನಾವಣೆಯೇ ಮುಗಿದಿರುತ್ತದೆ ಎಂದು ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ ಪ್ರತಿಕ್ರಿಯೆ ನೀಡಿದರು.

ನಗರದ ವಿಮಾನ ‌ನಿಲ್ದಾಣದಲ್ಲಿ ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ನಾಗಪುರದವರು ಅಭ್ಯರ್ಥಿಯ ಮೇಲೆ ನಿಗಾ ಇಟ್ಟು ಚುನಾವಣೆ ಮಾಡುವುದಾದರೆ ಮಹಾರಾಷ್ಟ್ರದಲ್ಲಿ ನಡೆದ ಪದವೀಧರರ‌ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಯಾಕೆ ಸೋಲು ಅನುಭವಿಸಿತು? ಎಂದು ಪ್ರಶ್ನಿಸಿದರು.

ಹುಬ್ಬಳ್ಳಿ-ಧಾರವಾಡ ಕೇಂದ್ರ ಮತ ಕ್ಷೇತ್ರದ ಜನರ ಪ್ರೀತಿ-ವಿಶ್ವಾಸ ಹಾಗೂ ಕಾಂಗ್ರೆಸ್ ಪಕ್ಷದ ಶಕ್ತಿ ನನ್ನೊಂದಿಗೆ ಇರುವವರೆಗೆ ಯಾರು ಏನೂ ಮಾಡಲಾಗದು. ನನ್ನ ಮೇಲೆ ನಿಗಾ ಇಡಲು, ನಾನ್ಯಾವ ಕಾನೂನುಬಾಹಿರ ಚಲನವಲನಗಳನ್ನು ಹೊಂದಿಲ್ಲ ಎಂದರು.

ಚುನಾವಣೆಯಲ್ಲಿ ಅಭ್ಯರ್ಥಿಗಳ ಕುರಿತು ಪಾಸಿಟಿವ್ ಮತ್ತು ನೆಗೆಟಿವ್ ಅಭಿಯಾನವನ್ನು ಸಾಮಾಜಿಕ ಜಾಲತಾಣಗಳಲ್ಲಿ ನಡೆಸುವುದು ಸಾಮಾನ್ಯ. ಇಂತಹದ್ದನ್ನು ನನ್ನ ಜೀವನದಲ್ಲಿ ತುಂಬಾ ನೋಡಿದ್ದೇನೆ. ಈಗ ನನ್ನ ವಿರುದ್ಧವೂ ಮಾಡಲಾಗುತ್ತಿದೆ. ಮನೆಯಲ್ಲಿ ಕುಳಿತು ಮಾಡುವ ಈ ಕೆಲಸದಿಂದ ಯಾವ ಪರಿಣಾಮವೂ ಬೀರದು. ಜನರ ಮಧ್ಯೆ ಹೋಗಿ ಕೆಲಸ ಮಾಡಿದ್ದು ಮಾತ್ರ ಪ್ರಭಾವ ಬೀರುತ್ತದೆ ಎಂದು ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ