Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶೇಗುಣಸಿ ವಿರಕ್ತಮಠದ ಜಾತ್ರಾ ಮಹೋತ್ಸವ

 

ಅಥಣಿ : ಸುಕ್ಷೇತ್ರ ಶೇಗುಣಸಿ ವಿರಕ್ತ ಮಠದ ಪೂಜ್ಯಶ್ರೀ ಲಿಂ. ಮುರುಘೇಂದ್ರ ಮಹಾಸ್ವಾಮಿಗಳ‌ ಜಾತ್ರಾ ಮಹೋತ್ಸವ ಹಾಗೂ ಪ್ರಭುಲಿಂಗ ಲೀಲೆ ಪ್ರವಚನ ಕಾರ್ಯಕ್ರಮವು ಮಂಗಳೋತ್ಸವ ಕಾರ್ಯಕ್ರಮ ಗುರುವಾರ ಏಪ್ರಿಲ್ 20. ರಂದು ನೆರವೇರಲಿದೆ.

ಏ.20 ರಂದು ಮುಂಜಾನೆ 7 ಗಂಟೆಗೆ ಇಷ್ಡಲಿಂಗ ದೀಕ್ಷಾ, ರುದ್ರಾಕ್ಷಿಧಾರಣೆ ಸಮಾರಂಭ ಹಾಗೂ ಸಕಲ ವಾದ್ಯಗಳೊಂದಿಗೆ ಮಹೋತ್ಸವವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜರುಗುವುದು. ಸಾಯಂಕಾಲ 5 ಗಂಟೆಗೆ ಮಹಾರಥೋತ್ಸವ ಹಾಗೂ ಸಂಜೆ 7 ಗಂಟೆಗೆ ಶಿವಾನುಭವ ಚಿಂತನಗೋಷ್ಠಿ ಜರುಗಲಿದೆ.

ಚಿಂತನಗೋಷ್ಠಿಯಲ್ಲಿ ಗದುಗಿನ ಜಗದ್ಗುರು ತೋಂಟದ ಸಿದ್ದರಾಮ ಶ್ರೀ. ನಾಗನೂರು ಡಾ. ಅಲ್ಲಮಪ್ರಭು ಶ್ರೀ, ಹಂದಿಗುಂದ ಶಿವಾನಂದ ಶ್ರೀ, ಹಲ್ಯಾಳ ಗುರುಸಿದ್ದ ಶ್ರೀಗಳ ಉಪಸ್ಥಿತಿಯಲ್ಲಿ ಶೇಗುಣಸಿ ವಿರಕ್ತ ಮಠದ ಪೀಠಾಧಿಪತಿ ಡಾ. ಮಹಾಂತ ಸ್ವಾಮಿಗಳವರ ಸಮ್ಮುಖದಲ್ಲಿ ನೆರವೇರುವುದು. 15 ದಿನಗಳ ಪರ್ಯಂತರವಾಗಿ ಜರುಗಿದ ಶ್ರೀ ಪ್ರಭುಲಿಂಗ ಲೀಲೆ ಪ್ರವಚನ ಕಾರ್ಯಕ್ರಮ ಮುಕ್ತಾಯದ ಜೊತೆ ಮಹಾಪ್ರಸಾದ ನೆರವೇರಲಿದೆ.

ಕೃಷ್ಣಾ ನದಿ ತಟದಲ್ಲಿರುವ ಶೇಗುಣಸಿ ವಿರಕ್ತ ಮಠ ಭವ್ಯ ಪರಂಪರೆ ಹೊಂದಿದೆ. ಶ್ರೀಮಠದ 10 ನೇ ಪೀಠಾಧಿಪತಿಗಳಾಗಿದ್ದ ಪೂಜ್ಯಶ್ರೀ ಲಿಂ. ಮುರುಘೇಂದ್ರ ಮಹಾಸ್ವಾಮಿಗಳು ತ್ರಿಕಾಲ ಜ್ಞಾನಿಗಳಾಗಿದ್ದರು. ಪೂಜ್ಯರು ನಂಬಿದ ಭಕ್ತರ ನೋವ ನಿವಾರಿಸಿ ನಿರಂಜನ ಯೋಗಿಗಳಾಗಿದ್ದರು. ಕರ್ನಾಟಕ ಮತ್ತು ಮಹಾರಾಷ್ಟ್ರ ಭಾಗಗಳಲ್ಲಿ ಅಪಾರ ಭಕ್ತರನ್ನು ಹೊಂದಿದ್ದರು.

ನಾಗನೂರು ರುದ್ರಾಕ್ಷಿಮಠದ ಮಹಾಪ್ರಸಾದಿ ಪೂಜ್ಯ ಶ್ರೀ ಶಿವಬಸವ ಮಹಾಸ್ವಾಮಿಜಿ ಸ್ಥಾಪಿಸಿದ್ದ ಶ್ರೀ ಕುಮಾರೇಶ್ವರ ಉಚಿತ ಪ್ರಸಾದ ನಿಲಯದ ಬೆಳವಣಿಗೆಗೆ ಸಹಾಯ, ಸಹಕಾರ ನೀಡಿದವರು. ಶಿಕ್ಷಣ ಪ್ರೇಮಿಗಳಾದ ಶ್ರೀಗಳು ಗ್ರಾಮೀಣ ಭಾಗದ ಬಡಮಕ್ಕಳ ಕಲ್ಯಾಣಕ್ಕಾಗಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿಬೆಳೆಸಿದವರು. ಬೆಳಗಾವಿ ನಗರದಲ್ಲಿಯೂ ಶ್ರೀಮಠ ಹಾಗು ವಿದ್ಯಾರ್ಥಿ ನಿಲಯ ಸ್ಥಾಪಿಸಿದವರು. ಪೂಜ್ಯರ ಮಾರ್ಗದರ್ಶನದಂತೆ ಶ್ರೀಮಠದ ಜಾತ್ರಾಮಹೋತ್ಸವವು ಗುರುವಾರ ಜರುಗುತ್ತಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ