Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿದ ಜಿಪಂ. ಸಿಇಒ ರಾಹುಲ್ ಶಿಂಧೆ

Advertisement
ಬೆಳಗಾವಿ : ಸವದತ್ತಿ ತಾಲೂಕಿನ ನವೀಲು ತೀರ್ಥ ಜಲಾಶಯದಿಂದ ರಾಮದುರ್ಗ ತಾಲೂಕಿನ ಅವರಾದಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿ (WTP) ನೀರು ಶುದ್ಧೀಕರಣ ಘಟಕ ನಿರ್ಮಾಣ ಮಾಡುವ ಕಾಮಗಾರಿ ಸ್ಥಳಕ್ಕೆ ಹಾಗೂ ಜಾಕ್ ವೇಲ್ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಜಿಪಂ. ಸಿಇಒ ರಾಹುಲ್ ಶಿಂಧೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.

ರಾಮದುರ್ಗ ತಾಲೂಕಿನ ಅವರಾದಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನೀರು ಶುದ್ದೀಕರಣ ಘಟಕ ಮತ್ತು ಜಾಕವೇಲ್ ನಿರ್ಮಾಣ ಕಾಮಗಾರಿಯನ್ನು ಉತ್ತಮ ಗುಣಮಟ್ಟದಿಂದ ನಿರ್ವಹಿಸಬೇಕು ಹಾಗೂ ನಿಗದಿತ ಸಮಯದಲ್ಲಿ ಕಾಮಗಾರಿಯನ್ನು ಮುಕ್ತಾಯಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸವದತ್ತಿ ಪಟ್ಟಣದಲ್ಲಿರುವ ತಾಲೂಕಾ ಮಟ್ಟದ ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯಕ್ಕೆ ಭೇಟಿ ನೀಡಿ ಪ್ರಯೋಗಾಲಯನ್ನು ಪರಿಶೀಲಿಸಿ ಕಡ್ಡಾಯವಾಗಿ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಕಾಲ ಕಾಲಕ್ಕೆ ಮಾಡಿ ಜನರಿಗೆ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡುವಂತೆ ಜಿಪಂ ಸಿ.ಇ.ಒ ಸೂಚನೆ ನೀಡಿದರು.

ಮುಂದುವರೆದು ಬೈಲಹೊಂಗಲ ತಾಲ್ಲೂಕಿನ ಉಡಿಕೇರಿ ಗ್ರಾಪಂ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕೊಠಡಿಗಳಿಗೆ ಭೇಟಿ ನೀಡಿ ಶುಚಿತ್ವ ಹಾಗೂ ರೋಗಿಗಳ ಜೊತೆ ಮಾತನಾಡಿದರು. ಆರೋಗ್ಯ ಇಲಾಖೆಯ ಸಿಬ್ಬಂದಿಯವರಿಗೆ ಆರೋಗ್ಯ ಕೇಂದ್ರ ಒಳಗಡೆ ಹಾಗೂ ಹೊರಗಡೆ ಶುಚಿತ್ವವನ್ನು ಕಾಪಾಡಬೇಕು ಎಂದು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಸವದತ್ತಿ ಹಾಗೂ ಬೈಲಹೊಂಗಲ ತಾಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಯಶವಂತಕುಮಾರ, ಸುಭಾಷ ಸಂಪಗಾವಿ, ಗ್ರಾ.ಕು.ನೀ & ನೈರ್ಮಲ್ಯ ಇಲಾಖೆ ಇಇ ಶಶಿಕಾಂತ ನಾಯಕ ಸಹಾಯಕ ನಿರ್ದೇಶಕರು (ಗ್ರಾ.ಉ) ಆರ್ ಬಿ ರಕ್ಕಸಗಿ, ಆರ್.ಡಬ್ಲ್ಯೂಎಸ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಬಿ ವಿ ಅಯ್ಯನಗೌಡರ, ಕಿರಣ ಗೋರ್ಪಡೆ, ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಇನ್ನಿತರರು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ