Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸದ್ಯವೇ ಕಮಲಕ್ಕೆ ಹೊಸ ಸಾರಥಿ

 

ನವದೆಹಲಿ: ಜೆ.ಪಿ. ನಡ್ಡಾ ಅವರು ಕೇಂದ್ರ ಸಚಿವ ಸಂಪುಟ ಸೇರಿರುವ ಕಾರಣ ಶೀಘ್ರದಲ್ಲೇ ಬಿಜೆಪಿ ಅಧ್ಯಕ್ಷ ಹುದ್ದೆಗೆ ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಒಬ್ಬ ಮಹಿಳೆ ಸೇರಿ 5 ಬಿಜೆಪಿ ನಾಯಕರ ಹೆಸರು, ನಡ್ಡಾ ಉತ್ತರಾಧಿಕಾರಿಯ ಪಟ್ಟಕ್ಕೆ ಕೇಳಿಬರುತ್ತಿವೆ. ವಿನೋದ ತಾವ್ಡೆ, ಸುನೀಲ್‌ ಬನ್ಸಲ್‌, ಓಂ ಮಾಥುರ್‌. ಕೆ. ಲಕ್ಷ್ಮಣ ಹಾಗೂ ಸ್ಮೃತಿ ಇರಾನಿ- ಇವು ಕೇಳಿಬರುತ್ತಿರುವ ಹೆಸರುಗಳು.

ವಿನೋದ್ ತಾವ್ಡೆ:
ವಿನೋದ್‌ ತಾವ್ಡೆ ಅವರು ಮರಾಠಾ ನಾಯಕರಾಗಿದ್ದು, ಹಾಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ. ಬಿ.ಎಲ್.ಸಂತೋಷ್ ನಂತರ ಬಿಜೆಪಿಯ ಅತ್ಯಂತ ಪ್ರಭಾವಿ ಪ್ರಧಾನ ಕಾರ್ಯದರ್ಶಿಗಳಲ್ಲಿ ಎಂಬ ಕೀರ್ತಿ ಪಕ್ಷದ ವಲಯದಲ್ಲಿ ತಾವ್ಡೆ ಅವರಿಗೆ ಇದೆ.

ಕೆ. ಲಕ್ಷ್ಮಣ:
ಕೆ. ಲಕ್ಷ್ಮಣ್ ಎಂಬುದು ಸುತ್ತುತ್ತಿರುವ ಮತ್ತೊಂದು ಹೆಸರು, ಬಿಜೆಪಿಯ ಒಬಿಸಿ ಮೋರ್ಚಾ ಮುಖ್ಯಸ್ಥ. ಆಂಧ್ರ-ತೆಲಂಗಾಣದಿಂದ ಬಂದ ಇವರು ಆಕ್ರಮಣಕಾರಿ ಹಾಗೂ ತಾಳ್ಮೆಯುತ ನಾಯಕ ಎಂದು ಹೆಸರುವಾಸಿಯಾಗಿದ್ದಾರೆ.

ಸುನೀಲ್ ಬನ್ಸಲ್‌:
ರೇಸ್‌ನಲ್ಲಿದ್ದಾರೆ ಎಂದು ನಂಬಲಾದ ಮತ್ತೊಂದು ಹೆಸರು ಸುನಿಲ್ ಬನ್ಸಲ್. ಪ್ರಸ್ತುತ, ಅವರು ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಒಡಿಶಾ ರಾಜ್ಯಗಳ ಪ್ರಧಾನ ಕಾರ್ಯದರ್ಶಿ ಮತ್ತು ಉಸ್ತುವಾರಿ. ಈ ಹಿಂದೆ ಉತ್ತರ ಪ್ರದೇಶದಲ್ಲೂ ಉತ್ತಮ ಸಂಘಟನೆ ಮಾಡಿದವರು. ಆರೆಸ್ಸೆಸ್‌ ಹಿನ್ನೆಲೆಯವರು. ಆದರೆ ಪಕ್ಷದ ಒಂದು ವರ್ಗದಿಂದ ವಿರೋಧ ಹೊಂದಿದ್ದಾರೆ.

ಓಂ ಮಾಥುರ್‌:
ರಾಜಸ್ಥಾನದ ರಾಜ್ಯಸಭಾ ಸದಸ್ಯ ಹಾಗೂ ಭೈರೋನ್ ಸಿಂಗ್ ಶೆಖಾವತ್ ಅವರ ಆಪ್ತರಾಗಿದ್ದ ಓಂ ಮಾಥುರ್ ಕೂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗುವ ಸ್ಪರ್ಧೆಯಲ್ಲಿದ್ದಾರೆ ಎಂದು ನಂಬಲಾಗಿದೆ. ಪ್ರಸ್ತುತ ಮೋದಿ ಅವರ ತವರು ಗುಜರಾತ್ ಉಸ್ತುವಾರಿ. ನಗುವಿನಲ್ಲೇ ಎಲ್ಲ ಸಮಸ್ಯೆ ಪರಿಹರಿಸಬಲ್ಲರು ಎಂದು ಮಾಥುರ್‌ ಪರ ಪಕ್ಷದಲ್ಲಿ ಮುಖಂಡರು ಮಾತಾಡಿಕೊಳ್ಳುತ್ತಾರೆ.

ಸ್ಮೃತಿ ಇರಾನಿ:
ಕೊನೆಯದಾಗಿ ಸ್ಮೃತಿ ಇರಾನಿ. ಬಿಜೆಪಿಯ ಫೈರ್ ಬ್ರಾಂಡ್‌ ನಾಯಕಿ. ಹಿಂದಿ-ಇಂಗ್ಲಿಷ್‌ ಚೆನ್ನಾಗಿ ಬಲ್ಲರು. ಪ್ರಧಾನಿ ನರೇಂದ್ರ ಮೋದಿ ಆಪ್ತೆ ಕೂಡ. ಈಗ ಗಾಂಧಿ ಕುಟುಂಬದ ಪ್ರಭಾವ ಇರುವ ಅಮೇಠಿಯಲ್ಲಿ ಅವರು ಸೋತಿರಬಹುದು. ಆದರೆ ತಮ್ಮದು ಮಹಿಳಾ ಪರ ಪಕ್ಷ ಎಂಬ ಸಂದೇಶ ನೀಡಲು ಹಾಗೂ ಗಾಂಧಿ ಕುಟುಂಬದ ಎದುರು ತಾನು ಸೋತರೂ ಎದೆಗುಂದಿಲ್ಲ ಎಂಬ ಸಂದೇಶ ನೀಡಲು ಸ್ಮೃತಿ ಅವರನ್ನು ಬಿಜೆಪಿ ಅಧ್ಯಕ್ಷೆ ಮಾಡಬಹುದು ಎನ್ನಲಾಗಿದೆ. ಇದು ಸಾಕಾರಗೊಂಡರೆ ಅವರು ಬಿಜೆಪಿಯ ಮೊದಲ ಮಹಿಳಾ ಅಧ್ಯಕ್ಷೆ ಎನ್ನಿಸಿಕೊಳ್ಳಲಿದ್ದಾರೆ.

ಅನಿರೀಕ್ಷಿತ ಘೋಷಣೆ?:
ಆದರೆ ಮೋದಿ-ಶಾ ಜೋಡಿ ಯಾವಾಗಲೂ ಅನಿರೀಕ್ಷಿತ ಘೋಷಣೆ ಮಾಡುವಲ್ಲಿ ಹೆಸರುವಾಸಿ. ಹೀಗಾಗಿ ಈ ಸಂಭಾವ್ಯರನ್ನು ಬಿಟ್ಟು ಇನ್ನೊಬ್ಬ ಸಂಘಟನಾ ಚತುರನನ್ನು ಪಕ್ಷಾಧ್ಯಕ್ಷ ಮಾಡಬಹುದು ಎಂಬ ಅನುಮಾನವೂ ಬಿಜೆಪಿ ವಲಯದಲ್ಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ