Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕನ್ನಡ ರಂಗಭೂಮಿಯನ್ನು ಜೀವಂತವಾಗಿಡಬೇಕು : ಕಾರಂಜಿಮಠ ಶ್ರೀ

 

ಕನ್ನಡ ಭವನದಲ್ಲಿ ಸಿರಿ ಪುರಂದರ ನಾಟಕ ಪ್ರದರ್ಶನ

ಬೆಳಗಾವಿ :
ಕನ್ನಡ ರಂಗಭೂಮಿಗೆ ಭವ್ಯವಾದ ಇತಿಹಾಸವಿದೆ. ಅದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗದೆ ಜೀವನ ವಿವಿಧ ಆಯಾಮಗಳನ್ನು ಕಟ್ಟಿಕೊಡುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಬೆಳಗಾವಿ ಕಾರಂಜಿಮಠದ ಪೂಜ್ಯ ಗುರುಸಿದ್ಧ ಮಹಾಸ್ವಾಮಿಗಳು ನುಡಿದರು. ಅವರು ಬೆಳಗಾವಿಯ ಕನ್ನಡ ಸಾಂಸ್ಕೃತಿಕ ಭವನದ ಕ್ಷೇಮಾಭಿವೃದ್ಧಿ ಸಂಘವು ನೆಹರು ನಗರದಲ್ಲಿರುವ ಕನ್ನಡ ಸಾಂಸ್ಕೃತಿಕ ಭವನದಲ್ಲಿ ಪ್ರಪ್ರಥಮವಾಗಿ ಪ್ರದರ್ಶನಗೊಂಡ ‘ಸಿರಿ ಪುರಂದರ’ ಕನ್ನಡ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಆಶೀರ್ವದಿಸಿದರು.
ಇಂದು ಜನಮಾನಸದಿಂದ ದೂರಸರಿಯುತ್ತಿರುವ ರಂಗಭೂಮಿಯನ್ನು ಮತ್ತೊಮ್ಮೆ ಜೀವಂತಗೊಳಿಸುವ ಕಾರ್ಯನಡೆಯಬೇಕಾಗಿದೆ. ಒಂದು ಕಾಲದಲ್ಲಿ ರಂಗಭೂಮಿ ಕಲಾವಿದರು ಊರೂರು ಸುತ್ತಾಡಿ ಅದ್ಭುತವಾದ ನಾಟಕವನ್ನು ನೀಡುತ್ತಿದ್ದರು. ಇಂದು ಕಲಾವಿದರು ಸಹೃದಯರು ಒಂದೇ ಸೂರಿನಡಿ ಇದನ್ನು ಸವಿಯಲು ಸುಸಜ್ಜಿತವಾದ ರಂಗಮAದಿರಗಳು ಸಿದ್ಧವಿದ್ದರೂ ಅದನ್ನು ಸವಿಯುವ ಹೃದಯವಂತರ ಕೊರತೆ ಎದ್ದು ಕಾಣುತ್ತಿದೆ. ಕನ್ನಡ ರಂಗಭೂಮಿಯನ್ನು ಜೀವಂತ ಇಡುವುದು ಎಲ್ಲರ ಕರ್ತವ್ಯವಾಗಿದೆ. ಕನ್ನಡ ಸಾಂಸ್ಕೃತಿಕ ಭವನದ ರೂವಾರಿಗಳಾದ ಡಾ.ಪ್ರಭಾಕರ ಕೋರೆಯವರು ಅತ್ಯಂತ ಕಾಳಜಿಯಿಂದ ರಂಗಮAದಿರವನ್ನು ರೂಪಿಸಿದ್ದಾರೆ. ಇಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಎಲ್ಲರೂ ಪ್ರೋತ್ಸಾಹವನ್ನು ನೀಡಬೇಕೆಂದು ಕರೆನೀಡಿದರು.
ಸಿರಿ ಪುರಂದರ ಈ ನಾಟಕವನ್ನು ಕಲಬುರಗಿಯ ರಂಗಾಯಣ ತಂಡದವರು ಪ್ರಸ್ತುತ ಪಡಿಸಿದರು. ಶ್ರೀರಂಗರ ರಚನೆಯ ಈ ನಾಟಕದ ನಿರ್ದೇಶನ ಮಹಾದೇವ ಹಡಪದ ಹಾಗೂ ಸಂಗೀತ ರಾಮಚಂದ್ರ ಹಡಪದ ಅವರದಾಗಿತ್ತು.
ಸಾಹಿತಿಗಳಾದ ಡಾ.ಬಸವರಾಜ ಜಗಜಂಪಿ, ಬಿ.ಎಸ್.ಗವಿಮಠ, ಏಣಗಿ ಸುಭಾಷ, ಯ.ರು.ಪಾಟೀಲ, ಶಿವನಗೌಡ ಪಾಟೀಲ, ಸುಧೀರ ಕುಲಕರ್ಣಿ, ಡಾ.ಮಹೇಶ ಗುರನಗೌಡರ ಮೊದಲಾದವರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ