ಪಾಶ್ಚಾಪುರ : ಪಾಶ್ಚಾಪುರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗ ಮತ್ತು ಐಕ್ಯೂಎಸಿ ವಿಭಾಗದ ವತಿಯಿಂದ ಕಾರ್ಗಿಲ್ ವಿಜಯ ದಿವಸ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸ್ಥಳೀಯರು ಮತ್ತು ಮಾಜಿ ಸೈನಿಕ ಯಲ್ಲಪ್ಪ ಪಾತ್ರೂಟ ಅವರು ಸೈನ್ಯದಲ್ಲಿ ತಾವು 27 ವರ್ಷಗಳ ಕಾಲ ಸಲ್ಲಿಸಿದ ಸೇವೆಯ ಅನುಭವವನ್ನು ಹಂಚಿಕೊಂಡರು. ಜೊತೆಗೆ ಸೇವೆಯ ಮಹತ್ವ, ಶಿಕ್ಷಣ ಮತ್ತು ಶಿಕ್ಷಕರ ಮಹತ್ವವನ್ನು ವಿವರಿಸಿದರು.
ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಶೋಕ ಮದಬಾವಿ ಕಾರ್ಗಿಲ್ ವಿಜಯ ದಿವಸ ಆಚರಣೆಯ ಹಿನ್ನೆಲೆ ಮತ್ತು ಕಾರ್ಗಿಲ್ ಯುದ್ಧದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.
ಪ್ರಾಚಾರ್ಯ ಡಾ.ಶ್ರೀಧರ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಐಕ್ಯೂ ಎಸಿ ಕೋಆರ್ಡಿನೇಟರ್ ಕಲ್ಪನಾ ಪೈನಗೋನಿ, ದೈಹಿಕ ಶಿಕ್ಷಣ ನಿರ್ದೇಶಕ ಎ.ಎ.ನದಾಫ, ಪ್ರಾಧ್ಯಾಪಕ ಡಾ.ಚಂದ್ರು ತಳವಾರ, ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ರವಿ ಮೆಟಿಗೇರಿ,ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಿಎ ತೃತೀಯ ವರ್ಷದ ವಿದ್ಯಾರ್ಥಿನಿ ಪ್ರಭಾವತಿ ಕರೋಲಿ ಪ್ರಾರ್ಥಿಸಿದರು.
ಬಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿ ಸಾವಿತ್ರಿ ಕೊಣ್ಣೂರು ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಮಾನಸ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿ ಲಲಿತಾ ಮೆಟಕರಿ ನಿರೂಪಿಸಿದರು. ಬಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿ ನಮೃತಾ ಕೊಂತಿ ವಂದಿಸಿದರು.