Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕ ಬಂದ್: ಬುಧವಾರ ಬೆಳಗಾವಿಗೆ ವಾಟಾಳ್ ನಾಗರಾಜ್ 

ಬೆಳಗಾವಿ : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಆದೇಶದ

ವಿರುದ್ಧ ಪ್ರತಿಭಟಿಸಲು ಆ. 13 ರಂದು ಕರ್ನಾಟಕ ಬಂದ್ ಕರೆ ಕೊಟ್ಟಿರುವ ರಾಜ್ಯ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಬುಧವಾರ ಆ.5 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ.
       
ಬುಧವಾರ ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಕನ್ನಡ ಸಂಘಟನೆಗಳ,ವಿವಿಧ ಸಮುದಾಯಗಳ,ರಿಕ್ಷಾ ಚಾಲಕರ ಸಂಘಟನೆಗಳ,ರಸ್ತೆ ಸಾರಿಗೆ ಸಂಸ್ಥೆಯ ಕನ್ನಡ ಕ್ರಿಯಾ ಸಮಿತಿಯ,ರೈತ ಸಂಘಟನೆಗಳ ನಾಯಕರೊಂದಿಗೆ ವಾಟಾಳ್ ನಾಗರಾಜ್ ಮತ್ತು ಇತರ ನಾಯಕರು ಚರ್ಚೆ ನಡೆಸಲಿದ್ದಾರೆ.
     
ಕಾವೇರಿ ವಿಷಯದ ಜೊತೆಗೆ ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ  ಪರವಾದ ಗೊತ್ತುವಳಿ ಅಂಗೀಕರಿಸಬೇಕೆಂಬ
ವಿಷಯವನ್ನು ಸಹ ಒಕ್ಕೂಟವು ಸೇರಿಸಿದೆಯೆಂದು
ಬೆಂಗಳೂರಿನಲ್ಲಿ ಕಳೆದ ಶುಕ್ರವಾರ ನಡೆದ ಸಭೆಯಲ್ಲಿ
ಉಪಸ್ಥಿತರಿದ್ದ ಕನ್ನಡ ಸೇನೆಯ ಬೆಳಗಾವಿ ಜಿಲ್ಲಾಧ್ಯಕ್ಷ
ರಾಜು ಕೋಲಾ ಅವರು ಸಭೆಯಲ್ಲಿ ತಿಳಿಸಿದರು.
      
ಬೆಳಗಾವಿ ಪಾಲಿಕೆಯ ವಿಷಯವನ್ನು ವಾಟಾಳ್ ನಾಗರಾಜ್ ಅವರು ಕಳೆದ ಶುಕ್ರವಾರ ನಗರಾಭಿವೃದ್ಧಿ ಖಾತೆ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದಾರೆ.ತಾವು ಮುಖ್ಯಮಂತ್ರಿಗಳ ಗಮನಕ್ಕೆ ಈ ವಿಷಯವನ್ನು ತಂದಿರುವುದಾಗಿ ಸಚಿವರು ವಾಟಾಳ್
ನಾಗರಾಜ್ ಅವರಿಗೆ ತಿಳಿಸಿದರೆಂದು ಕೋಲಾ ಅವರು
ಸಭೆಯಲ್ಲಿ ವಿವರಿಸಿದರು.
     
ಕರ್ನಾಟಕ ಬಂದ್ ಆಚರಣೆ ಸಂಬಂಧ ಸಭೆಯಲ್ಲಿ ಚರ್ಚೆ ನಡೆದು ಆ. 10 ವರೆಗೆ ಪರಿಸ್ಥಿತಿಯನ್ನು ನೋಡಿಕೊಂಡು,ವಿವಿಧ ಸಂಘಟನೆಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲು ಸಭೆಯು
ತೀರ್ಮಾನಿಸಿತು.
      
ಹಿರಿಯ ಕನ್ನಡ ಹೋರಾಟಗಾರ ಅಶೋಕ
ಚಂದರಗಿ,ಗಡಿನಾಡು ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷ
ಬಲರಾಮ ಮಾಸೇನಟ್ಟಿ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕ ಬಂದ್: ಬುಧವಾರ ಬೆಳಗಾವಿಗೆ ವಾಟಾಳ್ ನಾಗರಾಜ್ ಭತ್ತದ ಗದ್ದೆಗೆ ಬಂದ ಬೃಹತ್‌ ಮೊಸಳೆಯನ್ನು ಹೆಗಲ ಮೇಲೆ ಹೊತ್ತು ಪೊಲೀಸ್ ಠಾಣೆಗೆ ತಂದ ರೈತ….!ಕಾವೇರಿ : ಬಂದ್ ಕೈಬಿಡಲು ಎಲ್ಲಾ ಸಂಘಟನೆಗಳ ಮುಖಂಡರಿಗೆ ಸಿಎಂ ಮನವಿಬಹುತೇಕ ಇವರೇ ನೂತನ ಸಚಿವರಾಗುವ ಸಾಧ್ಯತೆ ?ಡಾ.ಪ್ರಭಾಕರ ಕೋರೆಯವರ ಹುಟ್ಟುಹಬ್ಬ ಪ್ರಯುಕ್ತ ನಂದನ ಅನಾಥಾಶ್ರಮದ ಅನಾಥ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಅಧಿಸೂಚನೆ: ಆಕ್ಷೇಪಣೆ ಸಲ್ಲಿಸಲು ಮನವಿಡಾ.ಪ್ರಭಾಕರ ಕೋರೆಯವರಿಗೆ ಹೆಚ್ಚಿನ ಸ್ಥಾನಮಾನ ದೊರೆಯಲಿ: ಶ್ರೀ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗುಡ್ಡ ಕುಸಿತ ; 3 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವುಸಂಗೊಳ್ಳಿ ರಾಯಣ್ಣ ಘಟಕ ಕಾಲೇಜಿನಲ್ಲಿ ಪ್ರೇಮಚಂದ್ ಜಯಂತಿಇದು ನನ್ನ ಮೊದಲ ಮತ್ತು ಕೊನೆಯ ತಪ್ಪು’ : ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ್ದ 15 ವರ್ಷದ ಬಾಲಕಿಯ ಕ್ಷಮೆಯಾಚನೆ