Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕ ರಾಜ್ಯೋತ್ಸವ-2024:ಮಾಧ್ಯಮ ಪ್ರತಿನಿಧಿಗಳಿಗೆ ಸನ್ಮಾನ

ಬೆಳಗಾವಿ : ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವಿವಿಧ ವಿಭಾಗಗಳ 11 ಜನ ಪತ್ರಕರ್ತರಿಗೆ ಕರ್ನಾಟಕ ರಾಜ್ಯೋತ್ಸವ-2024ರ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ನವೆಂಬರ 1 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿರುವ ಕನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು.

ಸನ್ಮಾನಿತರ ವಿವರ:

ಮುದ್ರಣ ಮಾಧ್ಯಮ ವಿಭಾಗ:
ಪಿ.ಟಿ.ಐ. ಸುದ್ದಿ ಸಂಸ್ಥೆ ವರದಿಗಾರ ಸುಭಾಷ್ ಮದ್ಧುರಾವ ಕುಲಕರ್ಣಿ ಹಾಗೂ ಉದಯವಾಣಿ ದಿನಪತ್ರಿಕೆಯ ಜಿಲ್ಲಾ ಹಿರಿಯ ವರದಿಗಾರ ಭೈರೋಬಾ ಶಿವಾಜಿ ಕಾಂಬಳೆ.

ಪತ್ರಿಕಾ ಛಾಯಾಗ್ರಾಹಕರ ವಿಭಾಗ:

ಏಕನಾಥ ಅಗಸಿಮನಿ.

ವಿದ್ಯುನ್ಮಾನ ಮಾಧ್ಯಮ ವಿಭಾಗ:

ಪ್ರಜಾ ಟಿ.ವಿ. ಜಿಲ್ಲಾ ವರದಿಗಾರ ಚಂದ್ರು ಹಣಮಂತ ಶ್ರೀರಾಮುಡು ಮತ್ತು ಚಿಕ್ಕೋಡಿ ಸುವರ್ಣ ನ್ಯೂಸ್ ವರದಿಗಾರ ಮುಸ್ತಾಕ್‌ಅಹ್ಮದ್ ಸಯ್ಯದ್ ಹುಸೇನ್ ಪೀರಜಾದೆ.

ಟಿವಿ ಕ್ಯಾಮರಾಮೆನ್ ವಿಭಾಗ:

ನ್ಯೂಸ್ ಫರ್ಸ್ಟ್ ಕ್ಯಾಮೆರಾಮನ್ ರೋಹಿತ ನಾರಾಯಣ ಶಿಂಧೆ ಮತ್ತು ಇನ್ ನ್ಯೂಸ್ ಛಾಯಾಗ್ರಾಹಕ ಸುಭಾನಿ ಇಮಾಮಸಾಬ್ ಮುಲ್ಲಾ.

ಜಿಲ್ಲಾ/ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ವಿಭಾಗ:

ಸಮದರ್ಶಿ ದಿನಪತ್ರಿಕೆಯ ಸಂಪಾದಕ ಅಶ್ರಫ್ ಬಾಬಾಸಾಬ್ ಧಾರವಾಡಕರ.

ತಾಲೂಕು ವರದಿಗಾರರ ವಿಭಾಗ:

ಚನ್ನಮ್ಮನ ಕಿತ್ತೂರಿನ ಪ್ರಜಾವಾಣಿ ದಿನಪತ್ರಿಕೆಯ ತಾಲೂಕು ವರದಿಗಾರ ಪ್ರದೀಪ ಮೇಲಿನಮನಿ ಮತ್ತು ಕಾಗವಾಡ ತಾಲೂಕಿನ ಸಂಯುಕ್ತ ಕರ್ನಾಟಕ ಹಾಗೂ ಕನ್ನಡಪ್ರಭ ದಿನಪತ್ರಿಕೆಯ ತಾಲೂಕು ವರದಿಗಾರ ಸಿದ್ಧಯ್ಯ ಗಂಗಯ್ಯ ಹಿರೇಮಠ.

ಪತ್ರಿಕಾ ವಿತರಕರ ವಿಭಾಗ:

ಬೈಲಹೊಂಗಲ್ ತಾಲೂಕಿನ ನೇಗಿನಹಾಳ ಗ್ರಾಮದ ಸದೆಪ್ಪ ಫಕೀರಪ್ಪ ಗರಗದ.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿದ ಕರ್ನಾಟಕ ರಾಜ್ಯೋತ್ಸವ-2024ರ ಮಾಧ್ಯಮ ಪ್ರತಿನಿಧಿಗಳ ಸನ್ಮಾನ ಆಯ್ಕೆ ಸಮಿತಿ ಸಭೆಯಲ್ಲಿ ಏಳು ವಿಭಾಗಗಳಲ್ಲಿ ಈ 11 ಜನ ಪತ್ರಕರ್ತರುಗಳನ್ನು ಸನ್ಮಾನಿಸಲು ಸರ್ವಾನುಮತದಿಂದ ತೀರ್ಮಾನಿಸಲಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ