Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮೊದಲ ಸ್ಥಾನ

 

ನವದೆಹಲಿ:
ಜನರಿಗೆ ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ವರದಿಯೊಂದು ಹೇಳಿದೆ.

ಇಂಡಿಯಾ ಜಸ್ಟೀಸ್‌ 2022ರ ವರದಿಯ ಪ್ರಕಾರ ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದು, ಮೊದಲ ಐದು ಸ್ಥಾನಗಳಲ್ಲಿ ದಕ್ಷಿಣದ ರಾಜ್ಯಗಳು ಇವೆ.

ಒಂದು ಕೋಟಿಗೂ ಅಧಿಕ ಜನಸಂಖ್ಯೆ ಇರುವ ದೊಡ್ಡ ಹಾಗೂ ಮಧ್ಯಮ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನ ಪಡೆದಿದ್ದು, ತಮಿಳುನಾಡು, ತೆಲಂಗಾಣ, ಗುಜರಾತ್‌ ಹಾಗೂ ರಾಜಸ್ಥಾನ ಅನಂತರದ ಸ್ಥಾನದಲ್ಲಿವೆ.

1 ಕೋಟಿಗಿಂತ ಕಡಿಮೆ ಜನಸಂಖ್ಯೆ ಇರುವ ರಾಜ್ಯಗಳ ಪೈಕಿ ಸಿಕ್ಕಿಂ ಮೊದಲ ಸ್ಥಾನದಲ್ಲಿದ್ದು, ಅರುಣಾಚಲ ಪ್ರದೇಶ ಹಾಗೂ ತ್ರಿಪುರ ಬಳಿಕ ಸ್ಥಾನ ಪಡೆದುಕೊಂಡಿವೆ.

ಮಂಗಳವಾರ ಈ ವರದಿ ಬಿಡುಗಡೆಯಾಗಿದ್ದು, ದೆಹಲಿ ಹಾಗೂ ಛತ್ತೀಸಗಡ ಹೊರತುಪಡಿಸಿ ಯಾವ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶವೂ ಕೂಡ ತನ್ನ ವಾರ್ಷಿಕ ಖರ್ಚಿನ ಶೇ 1ಕ್ಕಿಂತಹೆಚ್ಚು ನ್ಯಾಯಾಂಗಕ್ಕೆ ಖರ್ಚು ಮಾಡುತ್ತಿಲ್ಲ. ಈ ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ 30 ರಷ್ಟು ನ್ಯಾಯಾಧೀಶ ಹುದ್ದೆಗಳು ಖಾಲಿ ಇದೆ ಎನ್ನುವುದು ಗಮನಾರ್ಹ.

ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಈ ಸಮೀಕ್ಷೆ ನಡೆಸಲಾಗಿದ್ದು, ನ್ಯಾಯಾಂಗದಲ್ಲಿ ಖಾಲಿ ಹುದ್ದೆಗಳು, ಬಜೆಟ್‌ನಲ್ಲಿ ಹಣ ಮೀಸಲಿಡುವುದು, ಮೂಲಸೌಕರ್ಯ, ಮಾನವ ಸಂಪನ್ಮೂಲ, ಕಾನೂನು ನೆರವು, ಕಾರಾಗೃಹಗಳ ಸ್ಥಿತಿ, ಪೊಲೀಸ್ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಗಳ ಕಾರ್ಯನಿರ್ವಹಣೆ ಮುಂತಾದ ಮಾನದಂಡಗಳನ್ನು ಇಟ್ಟುಕೊಂಡು ಈ ವರದಿ ತಯಾರಿಸಲಾಗಿದೆ.

ವರದಿಯ ಪ್ರಕಾರ ಸದ್ಯ ‍ಪ್ರತಿ ಹತ್ತು ಲಕ್ಷ ಮಂದಿಗೆ 19 ಮಂದಿ ನ್ಯಾಯಾಧೀಶರಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ