Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಿಸಿಸಿ ಬ್ಯಾಂಕ್ ಚುನಾವಣೆಗೆ ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಹೆಸರು ಅಂತಿಮ



ಖಾನಾಪುರ : ಡಿಸಿಸಿ ಬ್ಯಾಂಕ್ ಚುನಾವಣೆಗೆ ಖಾನಾಪುರ ತಾಲೂಕಿನಿಂದ ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಅವರ ಹೆಸರು ಅಂತಿಮಗೊಂಡಿದೆ.

ಈ ಬಗ್ಗೆ ಗುರುವಾರ ಖಾನಾಪುರ ಶಾಂತಿನಿಕೇತನ ಶಾಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸರ್ವ ಪಕ್ಷಗಳ ಪ್ರತಿನಿಧಿಗಳಿಂದ 10 ಸದಸ್ಯರಿಂದ ರಚಿಸಲಾದ ಆಯ್ಕೆ ಸಮಿತಿಯ ಅಧ್ಯಕ್ಷ ಯಶವಂತ ಬಿರ್ಜೆ ಅವರು ಮಾಹಿತಿ ನೀಡಿದರು. ಡಿಸಿಸಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಲುವಾಗಿ ಸಮಿತಿಯನ್ನು ರಚಿಸಲಾಗಿತ್ತು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕ ವಿಠ್ಠಲ ಹಲಗೇಕರ ಮತ್ತು ಸಮಾಜಸೇವಕ ರಾಜು ಸಿದ್ದಾಣಿ ಅವರ ಹೆಸರು ಪ್ರಸ್ತಾಪವಾಗಿತ್ತು. ಆದರೆ ಆಗಸ್ಟ್ 27 ರಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಂದ ಮೂಲಕ ಚನ್ನರಾಜ ಹಟ್ಟಿಹೊಳಿ ಸ್ಪರ್ಧೆಯಿಂದ ಹಿಂದೆ ಸರಿಯುವ ಮಾಹಿತಿ ಲಭಿಸಿದೆ. ಇದೀಗ ಉಳಿದವರರು ಶಾಸಕ ವಿಠ್ಠಲ ಹಲಗೇಕರ ಮತ್ತುರಾಜು ಸಿದ್ಧಾಣಿ ಅವರ ಬಗ್ಗೆ ಚರ್ಚೆ ನಡೆದ ನಂತರ ವಿಠ್ಠಲ ಹಲಗೇಕರ ಅವರ ಹೆಸರನ್ನು ಅಂತಿಮವಾಗಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

ಚುನಾವಣೆಯಲ್ಲಿ ಒಟ್ಟು 55 ಪಿಕೆಪಿಎಸ್ ಸಹಕಾರ ಸಂಘಗಳು ಮತದಾನಕ್ಕೆ ಅರ್ಹತೆ ಪಡೆದಿವೆ. ಆದರೆ, ಬಹುಮತಕ್ಕೆ ಕನಿಷ್ಠ 28 ಸಂಘಗಳ ಬೆಂಬಲ ಅವಶ್ಯ. ಪ್ರಸ್ತುತ ನಮ್ಮ ಬಳಿ 35 ಸಂಘಗಳ ಬೆಂಬಲ ಇರುವುದರಿಂದ ನಮ್ಮ ಜಯ ನಿಶ್ಚಿತ ಎಂದು ಅವರು ತಿಳಿಸಿದರು.

ಶಾಸಕ ವಿಠ್ಠಲ ಹಲಗೇಕರ, ಗರ್ಲಗುಂಜಿ ಪಿಕೆಪಿಎಸ್ ಅಧ್ಯಕ್ಷ ರಾಜು ಸಿದ್ದಾಣಿ, ಸಮಾಜ ಸೇವಕ ಇರ್ಫಾನ್ ತಾಳಿಕೋಟಿ, ಶಿವಸೇನೆ ನಾಯಕ ಪಿ.ಕೆ. ಪಾಟೀಲ, ಪಿಕೆಪಿಎಸ್ ಅಧ್ಯಕ್ಷ ಲಕ್ಷ್ಮಣ ಕಸಬೇಕರ, ಮಹಾದೇವ ಘಾಡಿ, ಭರಮಾಣಿ ಪಾಟೀಲ, ಲೈಲಾ ಶುಗರ್ ಎಂ.ಡಿ. ಸದಾನಂದ ಪಾಟೀಲ,ಇಟಗಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ತುರಮರಿ ಮತ್ತಿತರರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ