Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಧಾನಸಭೆ ಚುನಾವಣೆ : ಸಿಎಂ ಬೊಮ್ಮಾಯಿಗೆ ಬೆಂಬಲ ಘೋಷಿಸಿದ ಕಿಚ್ಚ ಸುದೀಪ

ಬೆಂಗಳೂರು:
ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ನಿಲ್ಲುತ್ತೇನೆ. ಅವರಿಗೆ ನನ್ನ ಬೆಂಬಲ ಇದೆ ಎಂದು ನಟ ಕಿಚ್ಚ ಸುದೀಪ್‌ ಹೇಳುವ ಮೂಲಕ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗವಾಗಿ ಬೆಂಬಲ ಘೋಷಿಸಿದ್ದಾರೆ. ನಾನು ಈಗ ಅವರನ್ನು ಬೆಂಬಲಿಸುತ್ತೇನೆ. ನಾನು ಅವರು ಹೇಳಿದಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ, ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನ ಹೋಟೆಲ್‌ ಅಶೋಕದಲ್ಲಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಇಂದು, ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸಿನಿಮಾಗೆ ಎಂಟ್ರಿ ಕೊಟ್ಟಾಗ ಯಾರೂ ಗಾಡ್ ಫಾದರ್ ಇರಲಿಲ್ಲ. ಕಷ್ಟದ ದಿನಗಳಲ್ಲಿ ಬೊಮ್ಮಾಯಿಯವರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಇಲ್ಲಿ ರಾಜಕೀಯದ ಪ್ರಶ್ನೆ ಬರುವುದಿಲ್ಲ, ಬೊಮ್ಮಾಯಿ ಅವರನ್ನು ತಮ್ಮ ಗಾಡ್ ಫಾದರ್ ಎಂದು ಹೇಳಿದ ಅವರು, ನಾನು ಅವರನ್ನು ಬೆಂಬಲಿಸುತ್ತೇನೆ ಹಾಗೂ ಅವರು ಸೂಚಿಸುವ ಎಲ್ಲರಿಗೂ ಬೆಂಬಲ ನೀಡುತ್ತೇನೆ ಎಂದು ಅವರು ಹೇಳಿದರು.
ಕಷ್ಟದ ದಿನಗಳಲ್ಲಿ ಬೆಂಬಲಕ್ಕೆ ಕೆಲವರ ಪೈಕಿ ಬಸವರಾಜ ಬೊಮ್ಮಾಯಿ‌ ಅವರು ಒಬ್ಬರು ಸುದೀಪ್‌ ಹೇಳಿದ್ದಾರೆ. ಪ್ರಚಾರಕ್ಕೆ ಎಲ್ಲ ಕಡೆ ಹೋಗಲು ಆಗಲ್ಲ. ಬೊಮ್ಮಾಯಿ ಅವರು ಇಂಥಲ್ಲಿ ಪ್ರಚೃ ಮಾಡಿ ಎಂದರೆ ಮಾಡುತ್ತೇನೆ. ಎಲ್ಲರನ್ನೂ ಮೆಚ್ವಿಸುವ ಉದ್ದೇಶವಿದ್ದರೆ ಇಲ್ಲಿ‌ ಬರುತ್ತಿರಲಿಲ್ಲ. ಬಸವರಾಜ ಬೊಮ್ಮಾಯಿ ಯಾವ ಪಕ್ಷದಲ್ಲಿ ಇದ್ದರೂ ಅವರ ಪರವಾಗಿ ನಿಲ್ಲುತ್ತಿದ್ದೆ. ನನ್ನ ಕಷ್ಟದ ದಿನಗಳಲ್ಲಿ ಯಾರಾದರೂ ನನ್ನ ಪರವಾಗಿ ನಿಂತಿದ್ದರೆ ನಾನು‌ ಅವರ ಪರವಾಗಿ‌ ನಿಲ್ಲುತ್ತಿದ್ದೆ ಎಂದು ಅವರು ತಿಳಿಸಿದರು.

ನಾನು ಚುನಾವಣೆಗೆ ನಿಲ್ಲುತ್ತಿಲ್ಲ, ಎಂದು ಸ್ಪಷ್ಟಪಡಿಸಿದ ಸುದೀಪ್‌ ಅವರು, ಬಸವರಾಜ ಬೊಮ್ಮಾಯಿ ಅವರಿಗೆ ಬೇಕಾದ ವ್ಯಕ್ತಿಗಳ ಪರವಾಗಿ ಅವರು ಹೇಳಿದರೆ ಪ್ರಚಾರ ನಡೆಸುತ್ತೇನೆ. ನಾನು ವ್ಯಕ್ತಿಗೆ ಬೆಂಬಲ ನೀಡುತ್ತಿದ್ದೇನೆಯೇ ಹೊರತು ಪಕ್ಷಕ್ಕಲ್ಲ ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಮಾಧ್ಯಮಗಳಲ್ಲಿ ಬಂದ ಸುದ್ದಿ ಸತ್ಯವಾಗಿದೆ. ಕಿಚ್ಚ ಸುದೀಪ್ ಜೊತೆಗೆ ಆತ್ಮೀಯ ಸ್ನೇಹವಿದೆ. ಅವರು ತಮ್ಮ ನಿಲುವನ್ನು ಪ್ರಕಟ ಮಾಡುತ್ತಾರೆ ಎಂದ ಸಿಎಂ ಬಸವರಾಜ ಬೊಮ್ಮಾಯಿ, ಸುದೀಪ್ ರಾಜಕಾರಣದಲ್ಲಿ ಇಲ್ಲ, ಎಲ್ಲರಿಗೂ ಬೇಕಾದವರು ಆಗಿದ್ದಾರೆ ಎಂದರು.
ಕಿಚ್ಚ ಸುದೀಪ್ ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ, ತನಗೆ ಮತ್ತು ತಾನು ಇರುವ ಪಕ್ಷವನ್ನು ಬೆಂಬಲಿಸಲು ಬಂದಿದ್ದಾರೆ. ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಸುದೀಪ್ ಹಾಗೂ ನನ್ನ ಸಂಬಂಧಕ್ಕೆ ಗೌರವ ಕೊಡಿ. ಅವರ ಬಳಿ ಮಾತುಕತೆ ನಡೆಸಿದ್ದೇನೆ. ಪಕ್ಷಕ್ಕೆ ಸೇರ್ಪಡೆ ಆಗದೇ ಇದ್ದರೂ ಪಕ್ಷಕ್ಕೆ ಪ್ರಚಾರದ ಅಗತ್ಯ ಇದೆ. ನಿಮಗಾಗಿ ಪ್ರಚಾರ ಮಾಡಲು ತಯಾರಿದ್ದೇನೆ ಅವರು ಹೇಳಿದರು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ