Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಪ್ರಾಪ್ತೆಯನ್ನು ಅಪಹರಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರ ಯತ್ನ

ಬೆಳಗಾವಿ : ಬಾಲಕಿಗೆ ಮದುವೆಯಾಗುವ ವಯಸ್ಸು ಆಗದೇ ಇದ್ದರೂ ಆಕೆಯನ್ನು ಅಪಹರಿಸಿ ಮದುವೆ ಮಾಡಿಕೊಳ್ಳುವ ಯತ್ನ ವಿಫಲವಾಗಿದೆ.

ಅಥಣಿ ಮೂಲದ ಅಪ್ರಾಪ್ತೆಯನ್ನು ಅಪಹರಿಸಿ ಮತಾಂತರಕ್ಕೆ ಯತ್ನ ನಡೆಸಿದ್ದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯನ್ನು ಅಥಣಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಸದ್ಯ ಆರೋಪಿಯನ್ನು ಬಂಧಿಸಿ ಅಪ್ರಾಪ್ತೆಯನ್ನು ರಕ್ಷಿಸಲಾಗಿದೆ. ಶಾಹಿಲ್ ಬಂಧಿತ ಆರೋಪಿ. ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಅಪ್ರಾಪ್ತೆಯನ್ನು ತನ್ನ ಸಂಬಂಧಿಕರ ಹುಡುಗಿಯ ಮೂಲಕವಾಗಿ ಆರೋಪಿ ಶಾಹಿಲ್ ಪರಿಚಯಿಸಿಕೊಂಡಿದ್ದ. ಮುಂದೊಂದು ದಿನ ಇಡೀ ದೇಶ ಮುಸ್ಲಿಂ ರಾಷ್ಟ್ರವಾಗಲಿದೆ. ನೀನು ಇಸ್ಲಾಂ ಧರ್ಮಕ್ಕೆ ಮತಾಂತರವಾದರೆ ಮದುವೆಯಾಗಿ ಚೆನ್ನಾಗಿ ನೋಡಿಕೊಳ್ಳುವುದಾಗಿ ಮೈಂಡ್ ವಾಶ್ ಮಾಡಿದ್ದ. ಸಂಬಂಧಿಕರ ಹುಡುಗಿ ಮೂಲಕವೂ ಅಪ್ರಾಪ್ತೆಗೆ ಮೈಂಡ್ ವಾಶ್ ಮಾಡಿದ್ದ.

ವಾರದ ಹಿಂದೆ ಅಥಣಿಯಿಂದ ಅಪ್ರಾಪ್ತೆಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದಿದ್ದ. ಜನವರಿ 18 ಕ್ಕೆ ಅಪ್ರಾಪ್ತೆಗೆ 18 ವರ್ಷ ತುಂಬುವುದರಲ್ಲಿತ್ತು. ಬಳಿಕ ಆಕೆಯನ್ನು ಮದುವೆಯಾಗುವ ಯೋಚನೆ ಮಾಡಿದ್ದ ಎನ್ನಲಾಗಿದೆ. ಮಗಳು ಮನೆಗೆ ಬಾರದಿರುವುದು ಕಂಡು ಗಾಬರಿಯಾದ ಪೋಷಕರು ಅಥಣಿ ಠಾಣೆಯಲ್ಲಿ ದೂರು ನೀಡಿದ್ದರು. ಮೊಬೈಲ್ ಫೋನ್ ಗೆ ಶಾಹಿಲ್ ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಕಳುಹಿಸಿದ್ದ ಮೆಸೇಜ್ ಗಳು ಪತ್ತೆಯಾಗಿದ್ದವು.

ಪ್ರಕರಣ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿ ಬಂಧನಕ್ಕೆ ಎರಡು ವಿಶೇಷ ತಂಡ ರಚಿಸಿದ್ದರು. ಆರೋಪಿ ಅಪ್ರಾಪ್ತೆಯನ್ನು ಬೆಂಗಳೂರಿಗೆ ಕರೆದೊಯ್ದಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಬೆಂಗಳೂರಿಗೆ ಆಗಮಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾಹಿಲ್ ಕಪಿಮುಷ್ಟಿಯಲ್ಲಿದ್ದ ಅಪ್ರಾಪ್ತೆಯನ್ನು ಪೊಲೀಸರು ರಕ್ಷಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ