Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತವರಿಗೆ ಕೋಡು ; ಹೈಕೋರ್ಟ್ ನೂತನ ಸಿಜೆ ಹುಟ್ಟೂರು ಬೆಳಗಾವಿ ಜಿಲ್ಲೆ !

 

ಬೆಳಗಾವಿ :
ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ಪ್ರಸನ್ನ ಬಾಲಚಂದ್ರ ವಾರಲೆ ಅವರ ಹುಟ್ಟೂರು ನಿಪ್ಪಾಣಿ ಎನ್ನುವುದು
ಇದೀಗ ಇಡೀ ಬೆಳಗಾವಿ ಜಿಲ್ಲೆಗೆ ಇದೀಗ ಕೋಡು ಮೂಡಿಸಿದೆ. ನ್ಯಾಯಮೂರ್ತಿ ವಾರಾಲೆ ಅವರು ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಜೂನ್ 23,1962 ರಂದು ಜನಿಸಿದ್ದರು. ನಂತರ ಅವರು ಔರಂಗಬಾದ್ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದು 1985 ರಲ್ಲಿ ವಕೀಲಿ ವೃತ್ತಿ ಆರಂಭಿಸಿದರು.

90 ರ ದಶಕದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದ್ದರು. 2008 ರ ಜುಲೈ 18 ರಂದು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಬಾಂಬೆ ಹೈಕೋರ್ಟ್ ನ ಔರಂಗಾಬಾದ್ ಪೀಠದಲ್ಲಿ ಸಹಾಯಕ ಸರ್ಕಾರಿ ಪ್ಲೀಡರ್, ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಮತ್ತು ಕೇಂದ್ರ ಸರಕಾರದ ಹೆಚ್ಚುವರಿ ವಕೀಲರಾಗಿ ಅವರು ಸೇವೆ ಸಲ್ಲಿಸಿದ್ದರು.

ಒಟ್ಟಾರೆ ಇದೀಗ ನೂತನ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವಾರಲೆ ಅವರು ಬೆಳಗಾವಿ ಜಿಲ್ಲೆಯವರು ಎನ್ನುವುದು ಇಡೀ ಜಿಲ್ಲೆಯ ಜನತೆಗೆ ಸಂತಸದ ತಂದಿದೆ. ಬೆಳಗಾವಿಯಲ್ಲಿ ಕರ್ನಾಟಕ ಕಾನೂನು ಸಂಸ್ಥೆ ಈ ಭಾಗದಲ್ಲಿ ಮೊಟ್ಟ ಮೊದಲಿಗೆ ಅಂದರೆ 1939 ರಲ್ಲೇ ಕಾನೂನು ಕಾಲೇಜು ಆರಂಭಿಸಿತ್ತು ಎನ್ನುವುದು ಇನ್ನೊಂದು ಹೆಮ್ಮೆ. ಒಟ್ಟಾರೆ ಜಿಲ್ಲೆಗೆ ಕಾನೂನು ಕ್ಷೇತ್ರದಲ್ಲಿ ಇದೀಗ ನೂತನ ಸಿಜೆ  ಪ್ರಸನ್ನ  ಬಾಲಚಂದ್ರ ವಾರಲೆ ಮತ್ತಷ್ಟು ಕೀರ್ತಿ ತಂದಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ