Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಂಡಾಯ ಅಭ್ಯರ್ಥಿ ಮನವೊಲಿಸುವ ಪ್ರಯತ್ನ ನಡೆಯಲಿದೆ: ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ

 

ಬೆಳಗಾವಿ :
"ಟಿಕೆಟ್‌ ನೀರಿಕ್ಷೆಯಲ್ಲಿದ್ದ ಅಭ್ಯರ್ಥಿಗಳು ಕೈ ತಪ್ಪಿದರಿಂದ ನಿರಾಸೆಯಾಗುವುದು ಸಹಜ, ಅವರನ್ನು ಮನವೊಲಿಸುವ ಪ್ರಯತ್ನಗಳು ನಡೆಯಲಿದೆ " ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಕಾಂಗ್ರೆಸ್‌ ನಿಂದ ಗೋಕಾಕ ಕ್ಷೇತ್ರದಿಂದ ಸ್ಪರ್ಧಿಸಲು ಮಹಾಂತೇಶ ಕಡಾಡಿ ಅವರನ್ನು ಕಣಕ್ಕೆ ಇಳಿಸಲಾಗಿದೆ. ಹೈಕಮಾಂಡ್ ತೀರ್ಮಾನ ಅಂತಿಮ ತೀರ್ಮಾನ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.

ಯಾವ ಕ್ಷೇತ್ರದಕ್ಕೆ ಯಾವ ಅಭ್ಯರ್ಥಿ ಸೂಕ್ತ ಎಂದು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾವು ಕೇಳಿದ ವ್ಯಕ್ತಿಗೆ ಟಿಕೆಟ್ ಸಿಗಬೇಕೆಂಬವುದು ನಿರ್ಧಾರ ಇಲ್ಲ ಎಂದ ಅವರು, ಬಂಡಾಯದ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುಖಂಡರನ್ನು ಮನವೊಲಿಸುವ ಪ್ರಯತ್ನಗಳು ನಡೆದಿವೆ. ಟಿಕೆಟ್‌ ನೀಡಿದ ಅಭ್ಯರ್ಥಿಯ ಗೆಲುವಿಗೆ ಸಹಕರಿಸಬೇಕೆಂದು ಸೂಚನೆ ನೀಡಲಾಗಿದೆ. ಆಕಾಂಕ್ಷಿಗಳಪಟ್ಟಿ ಬಳಹ ಇದೆ ಆತ್ಮೀಯರಿಗೆ ಸಿಗಬೇಕೆಂಬುವ ನಿರ್ಧಾರ ನಮ್ಮ ಕೈಯಲಿಲ್ಲ ಅದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಹೇಳಿದರು.

ಜಿಲ್ಲಾಧ್ಯಂತ ಬಂಡಾಯ ಇಲ್ಲ, ಕೆಲವೊಂದು ಕ್ಷೇತ್ರದಲ್ಲಿ ಇದೆ. ಎಲ್ಲವನ್ನು ಸರಿ ಮಾಡಲಾಗುವುದು. ಎರಡನೇಯ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶೀಘ್ರವೇ ಮೂರನೇಯ ಪಟ್ಟಿ ಪ್ರಕಟ ಮಾಡಲಾಗುವುದು.
ನಾಲ್ಕನೆಯ ಪಟ್ಟಿ ಆದರೂ ಆಗಬಹುದು. ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ.. ಅಳೆದು ತೂಗಿ ಪ್ರಭಾವಿ ಅಭ್ಯರ್ಥಿಯನ್ನು ಅಖಾಡಕ್ಕೆ ಇಳಿಸುತ್ತಾರೆ ಎಂದ ಅವರು, ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸ್ಟಾರ್‌ ನೇ ಎಂದರು.

ಮೋದಿ ಮೇಲಿಂದ ಮೇಲೆ ರಾಜ್ಯಕ್ಕೆ ಬರುತ್ತಿದ್ದಾರೆ ಇದರಿಂದ ನಿಮ್ಮ ಪಕ್ಷಕ್ಕೆ ಹಿನ್ನಡೆಯಾಗಬಹುದಾ ಎಂದ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಬಂದರೆ ಬರಲ್ಲಿ, ಅವರ ಪಕ್ಷದ ಪ್ರಚಾರಕ್ಕೆ ಬರುತ್ತಾರೆ. ಕಾಂಗ್ರೆಸ್‌ ನಾಯಕರು ತಮ್ಮ ಕ್ಷೇತ್ರದಲ್ಲಿ ಕೆಲಸಗಳ ಆಧಾರದ ಮೇಲೆ ಗೆಲುವು ಸಾಧಿಸುತ್ತಾರೆ. ಮೋದಿ ಆಗಮನದಿಂದ ರಾಜ್ಯದಲ್ಲಿ ಯಾವುದೇ ರೀತಿ ಬದಲಾವಣೆ ಆಗಲು ಸಾಧ್ಯವಿಲ್ಲ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ