ಬೆಳಗಾವಿ: ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಜೂ. 13ರಂದು ಬೆಳಗಾವಿಯಲ್ಲಿ ಬೆಳಿಗ್ಗೆ 10.30ಕ್ಕೆ ಸತ್ಯಾತ್ಮತೀರ್ಥ ಶಿಕ್ಷಣ ಸಂಸ್ಥೆಯ ವತಿಯಿಂದ ಬಿ.ಕೆ.
ಮಾಡೆಲ್ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿರುವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಸ್ಥೆಯ ಧರ್ಮದರ್ಶಿ ವಿ.ಎನ್. ಪಾಟೀಲ ವಹಿಸಲಿದ್ದಾರೆ. ಬಿ.ಇ. ಸೊಸೈಟಿ ಅಧ್ಯಕ್ಷ ಅವಿನಾಶ ಪೋತದಾರ, ಎಸ್ಇಎಸ್ ಸೊಸೈಟಿ ಅಧ್ಯಕ್ಷ ವಿಲಾಸ ಜೋಶಿ, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಪದವಿ ಪೂರ್ವ
ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕಾಂಬಳೆ ಸೇರಿದಂತೆ ಸಂಸ್ಥೆಯ ಧರ್ಮದರ್ಶಿಗಳು, ಗಣ್ಯರು, ವಿದ್ಯಾರ್ಥಿಗಳು ಉಪಸ್ಥಿತರಿರಲಿದ್ದಾರೆ. ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಹಸಿರು ಸಂದೇಶ ನೀಡಲಾಗುವುದು. ಕ್ರೀಡಾ ಕ್ಷೇತ್ರದಲ್ಲಿ ಹೆಸರು ಮಾಡಿರುವ ವೆಂಕಟೇಶ ಪ್ರಸಾದ್ ಅವರ ಆಗಮನ ಕಾರ್ಯಕ್ರಮಕ್ಕೆ
ವಿಶೇಷ ಮೆರುಗು ನೀಡಲಿದೆ.