Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಸವಣ್ಣನವರ ಸಮಾನತೆಯ ಕನಸು ನನಸು ಮಾಡಬೇಕಿದೆ - ಲಕ್ಷ್ಮೀ ಹೆಬ್ಬಾಳಕರ್

 

ಬೆಳಗಾವಿ:
ಸೂಕ್ಷ್ಮ ಮನಸ್ಸಿನವಳಾಗಿರುವ ಮಹಿಳೆ ಕಠಿಣ ಕವಚ ಧರಿಸಿಕೊಂಡು ಮಹಿಳಾ ಸಮಾಜ ಸೃಷ್ಟಿ ಮಾಡಬೇಕಾದ ಅವಶ್ಯಕತೆ ಇದೆ. ಅಂದಾಗ ಮಾತ್ರ ಬಸವಣ್ಣನವರ ಸಮಾನತೆಯ ಕನಸು ನನಸಾಗಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಳಗಾವಿ ನಗರದ ಲಾರ್ಡ್ಸ್ ಇಕೋ ಇನ್ ಹೋಟೆಲ್ ನಲ್ಲಿ ಶನಿವಾರ ಕರ್ನಾಟಕ ಲೇಖಕಿಯರ ಸಂಘದ ಬೆಳಗಾವಿ ಶಾಖೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿ ಎರಡು ಪುಸ್ತಕಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ದೈಹಿಕವಾಗಿ ಅಲ್ಲದಿದ್ದರೂ ಮಾನಸಿಕವಾಗಿ ಮಹಿಳೆ ಪುರುಷರಿಗಿಂತ ಗಟ್ಟಿಯಾಗಿದ್ದಾಳೆ. ಯಾವ ಕ್ಷೇತ್ರ ತೆಗೆದುಕೊಂಡರು ಪುರುಷರಿಗಿಂತ ಹಿಂದೆ ಉಳಿದಿಲ್ಲ. ಆದರೆ ಹೆಣ್ಣನ್ನು ಸಮಾಜ ಗುರುತಿಸುವುದರಲ್ಲಿ ಹಿಂದೆಬಿದ್ದಿದೆ. ಸಹನೆಗೆ ಮತ್ತೊಂದು ಹೆಸರಾಗಿರುವ ಹೆಣ್ಣು ಸ್ವಾಭಿಮಾನದ ಜೀವನವನ್ನು ಬಯಸುತ್ತಾಳೆ. ಆದರೆ ಇಂದಿನ ಕಾಲದಲ್ಲಿ ನಾವೂ ನಿಮ್ಮಷ್ಟೆ ಸಮರ್ಥರಿದ್ದೇವೆ ಎಂದು ಸಾರುವ ಅಗತ್ಯತೆ ಇದೆ ಎಂದು ಹೆಬ್ಬಾಳಕರ್ ಹೇಳಿದರು.
ಹುಟ್ಟಿದ ಪ್ರತಿಯೊಬ್ಬ ಮನುಷ್ಯನೂ ಸಾಹಿತಿಯೇ. ಹಿಂದಿನ ಕಾಲದಲ್ಲಿ ಅನಕ್ಷರಸ್ಥ ಮಹಿಳೆಯರು ತಾವೇ ಜಾನಪದ ಹಾಡುಗಳನ್ನು ರಚಿಸಿ, ಅಡುಗೆ ಮಾಡುವಾಗ, ರಾಗಿ ಬೀಸುವಾಗ, ಹೊಲಗಳಲ್ಲಿ ಕೆಲಸ ಮಾಡುವಾಗ, ತೊಟ್ಟಿಲು ತೂಗುವಾಗ ಹಾಡುತ್ತಿದ್ದರು. ಆಗ ಭಾವನೆಗಳನ್ನು ಹೊರಗೆಡವಲು ಇಂದಿನಂತೆ ಬೇರೆ ಮಾರ್ಗಗಳಿರಲಿಲ್ಲ. ಈಗ ಲೇಖಕಿಯರ ಸಂಘ ಆರ್ಥಿಕವಾಗಿ ಶಕ್ತಿ ಇಲ್ಲದವರ ಬರಹಗಳನ್ನು ಪ್ರಕಟಿಸಲು ನೆರವಾಗಬೇಕು. ಇನ್ನೊಬ್ಬರನ್ನು ನೋಡಿ ಮತ್ಸರ ಪಡದೆ ಬೆನ್ನು ತಟ್ಟುವ ಕೆಲಸ ಮಾಡಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ವಿನಂತಿಸಿದರು.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಎಚ್.ಎಲ್ ಪುಷ್ಪ, ಬೆಳಗಾವಿ ಶಾಖೆಯ ಅಧ್ಯಕ್ಷರಾದ ಡಾ. ಕೆ. ಆರ್ ಸಿದ್ದಗಂಗಮ್ಮ, ಪಾರ್ವತಿ ಪಿಟಗಿ, ಹಮೀದಾ ಬೇಗಂ, ಡಾ. ನೀತಾ ರಾವ್, ನದೀಮ್ ಸನದಿ, ಸಾಹಿತಿ ಡಾ. ಸರಜೂ ಕಾಟ್ಕರ್, ಜ್ಯೋತಿ ಬದಾಮಿ, ಡಾ. ನಿರ್ಮಲಾ ಬಟ್ಟಲ, ಡಾ. ನೀತಾರಾವ್, ರಾಜನಂದಾ ಗಾರ್ಗಿ ಮೊದಲಾದವರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ