Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಿ.ಬಿ.ಇನಾಮದಾರ ಕಳಂಕರಹಿತ ರಾಜಕಾರಣಿಯಾಗಿದ್ದರು - ಲಕ್ಷ್ಮೀ ಹೆಬ್ಬಾಳಕರ್

 

ಬೆಂಗಳೂರು: ಬೆಳಗಾವಿ ಜಿಲ್ಲೆ ಕಂಡ ಅತ್ಯಂತ ಮುತ್ಸದ್ದಿ ರಾಜಕಾರಣಿ ಡಿ.ಬಿ.ಇನಾಮದಾರ ಕಳಂಕರಹಿತವಾಗಿ ರಾಜಕಾರಣವನ್ನು ಹೇಗೆ ಮಾಡಬಹುದೆನ್ನುವುದನ್ನು ತೋರಿಸಿ ನಮಗೆಲ್ಲರಿಗೂ ಆದರ್ಶರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಸೋಮವಾರ ಅಗಲಿದ ಗಣ್ಯರಿಗೆ ಸಂತಾಪ ಸೂಚಕ ನಿರ್ಣಯದ ಪರವಾಗಿ ಅವರು ಮಾತನಾಡುತ್ತಿದ್ದರು. ಇನಾಮದಾರ ತಮ್ಮದೇ ಶೈಲಿಯಲ್ಲಿ ರಾಜಕಾರಣ ಮಾಡಿದ್ದಾರೆ. ಜಿಲ್ಲೆಗೆ ಅನೇಕ ಯೋಜನೆಗಳನ್ನು ತರಲು ಪ್ರಯತ್ನಿಸಿ, ರಾಜಕಾರಣವನ್ನು ಕಳಂಕರಹಿತವಾಗಿ ಮಾಡಿ ಮತ್ತು ಸಾಮಾಜಿಕ ಕಳಕಳಿ ಹೊಂದಿ ನಮಗೆಲ್ಲ ರಾಜಕಾರಣವನ್ನು ಯಾವ ರೀತಿ ಮಾಡಬೇಕೆಂದು ತೋರಿಸಿ ಹೋಗಿದ್ದಾರೆ ಎಂದು ಸ್ಮರಿಸಿದರು.

6 -7 ಬಾರಿ ಶಾಸಕರಾಗಿ, ಸಚಿವರಾಗಿ, ಯಾರಿಗೂ ಕಷ್ಟ ಕೊಡದೆ, ವಿರೋಧ ಪಕ್ಷದಲ್ಲಿರಲಿ, ಆಡಳಿತ ಪಕ್ಷದಲ್ಲಿರಲಿ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಿ ರಾಜಕಾರಣ ಮಾಡಿದರು. ಮಲಪ್ರಭ ಸಕ್ಕರೆ ಕಾರ್ಖಾನೆ ಮುಚ್ಚುವ ಸಂದರ್ಭದಲ್ಲಿದ್ದಾಗ ಪುನಶ್ಚೇತನ ಮಾಡಿ ರೈತರಿಗೆ ನೆರವಾದರು. ನಮ್ಮ ಭಾಗದಲ್ಲಿ ಅವರನ್ನು ಎಲ್ಲರೂ ಧಣಿ ಎಂದು ಕರೆಯುತ್ತಿದ್ದರು. ಯಾರೂ ಹೆಸರು ಹೇಳಿ ಕರೆಯುತ್ತಿರಲಿಲ್ಲ. ಕಿತ್ತೂರು ಚನ್ನಮ್ಮ ಸೈನಿಕ ಶಾಲೆಯ ಅಧ್ಯಕ್ಷರಾಗಿ ಶಾಲೆಯನ್ನು ಮುಂದೆ ತರಲು ಸಾಕಷ್ಟು ಶ್ರಮಿಸಿದ್ದರು. ಅವರನ್ನು ಕಳೆದುಕೊಂಡು ಬೆಳಗಾವಿ ಜಿಲ್ಲೆಯ ರಾಜಕಾರಣ ಬಡವಾಗಿದೆ. ಅಂತವರು ರಾಜಕಾರಣದಲ್ಲಿ ಇರಬೇಕಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅನುಯಾಯಿಗಳಿಗೆ, ಕುಟುಂಬದ ಸದಸ್ಯರಿಗೆ ಭಗವಂತ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೆಬ್ಬಾಳಕರ್ ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ