Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಖಂಡಿತ ಕರ್ನಾಟಕದಲ್ಲಿ ಸುವರ್ಣ ಯುಗ ಆರಂಭವಾಗಲಿದೆ - ಲಕ್ಷ್ಮೀ ಹೆಬ್ಬಾಳಕರ್

 

ಬೆಳಗಾವಿ; ಒಂದೆಡೆ ಅಗತ್ಯವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಇನ್ನೊಂದೆಡೆ ಜನಸಾಮಾನ್ಯರ ಬದುಕು ಪಾತಾಳಕ್ಕೆ ಕುಸಿಯುತ್ತಿದೆ. ಜನರ ಸಮಸ್ಯೆಯತ್ತ ಗಮನ ಹರಿಸದ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ನಡೆದ ಯುವಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಇದು ರೈತರು, ಬಡವರು, ಜನಸಾಮಾನ್ಯರು ಬದುಕುವ ಕಾಲ ಅಲ್ಲ, ಆದರೆ ಕಾಂಗ್ರೆಸ್ ಪಕ್ಷ ತಮ್ಮ ಶ್ರಮಕ್ಕೆ, ಬೆವರಿಗೆ ಬೆಲೆ ಕೊಟ್ಟೆ ಕೊಡುತ್ತೆ. ಜನರ ಆಶಿರ್ವಾದದೊಂದಿಗೆ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತೆ. ಜನರ ಕಷ್ಟವನ್ನು ಪರಿಹರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕ್ರಮಗಳನ್ನು ರೂಪಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಿಮ್ಮ ಭವಿಷ್ಯ ನಮ್ಮ ಭವಿಷ್ಯ. ಕಾಂಗ್ರೆಸ್ ಯಾವತ್ತಿದ್ದರೂ ಜನಸಾಮಾನ್ಯರ ಭವಿಷ್ಯದ ಬಗ್ಗೆ ಚಿಂತನೆ ನಡೆಸುತ್ತದೆ. ಮಹಾತ್ಮ ಗಾಂಧಿಜಿ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಈ ದೇಶಕ್ಕಾಗಿ, ಜನರಿಗಾಗಿ ಪ್ರಾಣವನ್ನೇ ಕೊಟ್ಟವರು. ಆದರೆ ಬಿಜೆಪಿಯ ಯಾರಾದರೂ ಒಬ್ಬರೇ ಒಬ್ಬರು ಈ ದೇಶಕ್ಕಾಗಿ, ಜನರಿಗಾಗಿ ಪ್ರಾಣತ್ಯಾಗ ಮಾಡಿದ ಯಾರಾದರೂ ಇದ್ದಾರಾ? ವಿಚಾರ ಮಾಡಿ. ಇಂತವರಿಂದ ಏನೂ ಸಾಧ್ಯವಿಲ್ಲ, ಯಾವ ಪ್ರಗತಿಯೂ ಸಾಧ್ಯವಿಲ್ಲ, ಅಭಿವೃದ್ಧಿಯೂ ಸಾಧ್ಯವಿಲ್ಲ. ಬಿಜೆಪಿಯವರಿಂದ ಸಾಧ್ಯ ಎನ್ನುವುದು ಏನಾದರೂ ಇದ್ದರೆ ಅದು ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತಿ ಸಮಾಜದ ಸುಂದರ ವಾತಾವರಣವನ್ನು ಕೆಡಿಸುವುದಷ್ಟೇ ಎಂದು ಕಿಡಿಕಾರಿದರು.

ಮೊನ್ನೆ ಸಿ.ಟಿ.ರವಿಯವರು ಹೇಳುತ್ತಿದ್ದರು, ವೀರಶೈವ ಲಿಂಗಾಯಿತರಿಗೆ ಅಂತಹ ಪ್ರಾಮುಖ್ಯತೆಯನ್ನು ಕೊಡುವುದು ಬೇಡ ಎಂದು. ಸಿ.ಟಿ.ರವಿ ಅಣ್ಣನವರೇ ನಿಮಗೆ ನಾಚಿಕೆಯಾಗಬೇಕು. ಅಧಿಕಾರದ ಅಮಲು ಯಾವ ಮಟ್ಟಕ್ಕೆ ಏರಿದೆ ನಿಮಗೆ… ಯಡಿಯೂರಪ್ಪನವರ ಹೆಸರು ಹೇಳಿ ಅಧಿಕಾರಕ್ಕೆ ಬಂದಂತಹ ನೀವು ಇಂದು ವೀರಶೈವ ಲಿಂಗಾಯಿತ ಸಮುದಾಯಕ್ಕೆ ಪ್ರಾಮುಖ್ಯತೆ ಕೊಡುವುದು ಬೇಡ ಎನ್ನುತ್ತಿದ್ದೀರಾ. ಇಂದು ನಿಮಗೆ ವೀರಶೈವ ಲಿಂಗಾಯಿತರು ಬೇಡವಾಗಿದ್ದಾರೆ… ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದರು.

ಬಿಜೆಪಿಯ ಒಬ್ಬರು ಹೇಳ್ತಾರೆ ಮುಂಬರುವ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಬಾಂಧವರ ಮದರಸಾಗಳನ್ನು ಮುಚ್ಚಿ ಹಾಕುತ್ತೇವೆ ಎಂದು, ಇನ್ನೊಬ್ಬರು ಹೇಳ್ತಾರೆ ವೀರಶೈವ ಲಿಂಗಾಯಿತರಿಗೆ ಪ್ರಾಮುಖ್ಯತೆ ಕೊಡಬೇಡಿ ಎಂದು, ಮತ್ತೊಬ್ಬರು ಹೇಳುತ್ತಾರೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಅಂತಾ… ಬಿಜೆಪಿಯವರು ರಾಮ ರಾಮ ಎಂದು ಬಾಯಲ್ಲಿ ಹೇಳುತ್ತಾ ರಾವಣನ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿವೆಲ್ಲರೂ ಸ್ವಾಭಿಮಾನಿಗಳು, ಬೆಲೆ ಏರಿಕೆಯಿಂದಾಗಿ ನಿವೆಲ್ಲರೂ ತತ್ತರಿಸಿದ್ದೀರಿ. ಇನ್ನು ಕೇವಲ 50 ದಿನಗಳಲ್ಲಿ ಚುನಾವಣೆ ಬರಲಿದೆ. ಚುನಾವಣೆಯಲ್ಲಿ ನೀವೆಲ್ಲರೂ ಕಾಂಗ್ರೆಸ್ ಗೆ ಮತವನ್ನು ನೀಡಿ. ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ. ಖಂಡಿತವಾಗಿಯೂ ನಾವು ಕರ್ನಾಟಕ ರಾಜ್ಯದಲ್ಲಿ ಸುವರ್ಣಯುಗವನ್ನು ಪ್ರಾರಂಭಮಾಡುತ್ತೇವೆ ಎಂದು ಭರವಸೆ ನೀಡುತ್ತೇನೆ ಎಂದು ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ