Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸುಪ್ರೀಂಕೋರ್ಟ್‌ ನಿಯಮದಂತೆ ಡಾಲ್ಬಿಗೆ ಪರವಾನಿಗೆ..!

ಸುಪ್ರೀಂಕೋರ್ಟ್‌ ನಿಯಮದಂತೆ ಡಾಲ್ಬಿಗೆ ಪರವಾನಿಗೆ..!

ಕಡೋಲಿ ಗ್ರಾಮಕ್ಕೆ ಖುದ್ದು ಭೇಟಿ ನೀಡಿ ಡಿಸಿಪಿ ಗಡಾದಿ ಹೇಳಿದ್ದೇನು....?

ಬೆಳಗಾವಿ: ನಿನ್ನೆ (ಬುಧವಾರ) ತಾಲೂಕಿನ ಕಡೋಲಿ ಗ್ರಾಮದಲ್ಲಿ ದಸರಾ ಹಬ್ಬ ಆಚರಣೆಯ ಪ್ರಯುಕ್ತ ಶಾಂತತಾ ಸಭೆಯನ್ನು ಡಿಸಿಪಿ ರವೀಂದ್ರ ಗಡಾದಿ (ಕಾ & ಸು) ಹಾಗೂ ಕಾಕತಿ ಪಿಐ ಗುರುನಾಥ ಐ ಎಸ್ ನೇತೃತ್ವದಲ್ಲಿ ನಡೆಸಲಾಯಿತು.

ಕಳೆದ ವರ್ಷ ಕಾಕತಿ ಪೊಲೀಸರು ಮೊಟ್ಟಮೊದಲ ಬಾರಿಗೆ ಕಡೋಲಿ ಗ್ರಾಮದಲ್ಲಿ ದಸರಾ ನಿಮಿತ್ತ ನಡೆಸಲಾಗುವ ಅಡಂಬರ ಡಾಲ್ಬಿ ಹಾಗೂ ಡಿಜೆ ಮೆರವಣಿಗೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದ್ದರು. ಈ ಮೆರವಣಿಗೆಯಲ್ಲಿ ಪ್ರತಿ ವರ್ಷ ಯುವಕರ ಮಧ್ಯೆ ಮಾರಾಮಾರಿ, ಗುಂಪು ಗಲಭೆ, ಚಾಕು ಇರಿತ ಸೇರಿದಂತೆ ಹಲವು ಅಹಿತಕರ ಘಟನೆಗಳು ನಡೆಯುತ್ತಿದ್ದವು. ಆದರಿಂದ ಇದನ್ನು ಸೂಕ್ಷ್ಮವಾಗಿ ಅರಿತಿದ್ದ ಕಾಕತಿ ಪಿಐ ಗುರುನಾಥ ಅವರು ಸಂಪೂರ್ಣವಾಗಿ ಬಂದ ಮಾಡಿಸಿದ್ದರು. ಇದರಿಂದ ಕೆರಳಿ ಕಂಗಾಲಾಗಿದ್ದ ಅಲ್ಲಿನ ಯುವಕರು ಹಬ್ಬಕ್ಕೆ ಶುಭಾಶಯ ಕೋರಿ ಅಂಟಿಸಿದ್ದ ಶಾಸಕ ಹಾಗೂ ಮುಖಂಡರ ಬ್ಯಾನರಗಳನ್ನು ಹರಿದು ಆಕ್ರೋಶ ಹೊರಹಾಕಿದ್ದರು.

ಆದರೆ ಬರುವ ವರ್ಷ (2023) ಜಿಪಂ-ತಾಪಂ ಹಾಗೂ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಇರುವದರಿಂದ ಈ ಬಾರಿ ಕಡೋಲಿಯಲ್ಲಿ ಡಾಲ್ಬಿ ಮೆರವಣಿಗೆ ಶತಾಯ ಗತಾಯವಾಗಿ ನಡೆಸಬೇಕಾದ ಪರಿಸ್ಥಿತಿ ಬಂದಿದೆ. ಅದಕ್ಕಾಗಿ ಅಲ್ಲಿನ ಮುಖಂಡರು ಪೊಲೀಸ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಅನುಮತಿಗಾಗಿ ಮನವಿ ಮಾಡಿದ್ದರು.

ಇದರ ಬೆನ್ನಲೆ ಡಿಸಿಪಿ ಗಡಾದಿ ಖುದ್ದು ಕಡೋಲಿ ಗ್ರಾಮಕ್ಕೆ ಆಗಮಿಸಿ ಸಭೆ ನಡೆಸಿದರು. ಮುಖಂಡರ, ಯುವಕರ ಮಾತುಗಳನ್ನು ಆಲಿಸಿ ಸುಪ್ರೀಂ ಕೋರ್ಟ್ ನಿಯಮಾವಳಿ ಪ್ರಕಾರ ಮಾತ್ರ ಡಾಲ್ಬಿ ಹಚ್ಚುವಂತೆ ತಿಳಿಸಿದರು. ಈ ವೇಳೆ ಗುಂಪು ಗಲಭೆ, ಮಾರಾಮಾರಿಯಲ್ಲಿ ಭಾಗಿಯಾದವರ ವಿರುದ್ಧ ಹಾಗೂ ಆಯೋಜಕರ ವಿರುದ್ಧ ಮುಲಾಜೀಲ್ಲದೆ ಕಾನೂನು ಕ್ರಮ ಜರುಗಿಸುವುದಾಗಿ ಮುನ್ನೆಚ್ಚರಿಕೆ ನೀಡಿ ಶಾಂತಿಯಿಂದ ಹಬ್ಬವನ್ನು ಆಚರಿಸಲು ಸೂಚಿಸಿದರು.

ಈ ಸಂದರ್ಭದಲ್ಲಿ ಕಾಕತಿ ಪಿಎಸ್ಐ ಮಂಜುನಾಥ ಹುಲಕುಂದ, ಶಾಸಕರ ಆಪ್ತ ಸಹಾಯಕ ಮಲಗೌಡ ಪಾಟೀಲ, ಗ್ರಾ ಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಗ್ರಾಮಸ್ಥರು ಹಾಗೂ ಯುವಕರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ