Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಬಳಿ ಲಕ್ಷಾಂತರ ರೂ. ಮೌಲ್ಯದ ಮದ್ಯ ವಶ

 

ಬೆಳಗಾವಿ :
ಬೆಳಗಾವಿ ತಾಲೂಕಿನಲ್ಲಿ ಶನಿವಾರ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ಅಬಕಾರಿ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
ಜಪ್ತುಪಡಿಸಿಕೊಂಡ ಇವುಗಳಲ್ಲಿ ವಾಹನದ ಮೌಲ್ಯ ರೂ: 5,00,000/- ಹಾಗೂ ಮುದ್ದೇಮಾಲು ಹಾಗೂ ಆರೋಪಿತರ ಎರಡು ಮೊಬೈಲುಗಳು ಸೇರಿ ಒಟ್ಟು ಮೌಲ್ಯ ರೂ. 3,50,000/- ಹೀಗೆ ಒಟ್ಟು 9,50,000/- ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಘಟನೆ ವಿವರ :
ದಿನಾಂಕ:02-12-2023 ರಂದು ಬೆಳಗ್ಗೆ 9-00 ಗಂಟೆಯ ಸುಮಾರಿಗೆ ಖಚಿತ ಮಾಹಿತಿ ಮೇರೆಗೆ ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದಿಂದ ಕವಳೆವಾಡಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಅಬಕಾರಿ ಉಪ ಅಧೀಕ್ಷಕರು, ಬೆಳಗಾವಿ ಉಪ ವಿಭಾಗ ಅವರ ಸಿಬ್ಬಂದಿ, ಅಬಕಾರಿ ನಿರೀಕ್ಷಕರು, ಬೆಳಗಾವಿ ವಲಯ ನಂ-2 ಹಾಗೂ ಅವರ ಸಿಬ್ಬಂದಿ ಜನರು ಸೇರಿಕೊಂಡು ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದಿಂದ ಕವಳೆವಾಡಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ರಸ್ತೆಗಾವಲು ಹಾಗೂ ವಾಹನ ತಪಾಸಣೆ ಮಾಡುತ್ತಿರುವಾಗ ಒಂದು ಬಿಳಿ ಬಣ್ಣದ ಅಶೋಕ ಲೆಲ್ಯಾಂಡ್ ಕಂಪನಿಯ ನಾಲ್ಕು ಚಕ್ರ ಗೂಡ್ಸ್ ವಾಹನ ಸಂಖ್ಯೆ ಕೆಎ-22 ಸಿ- 9398 ವಾಹನವನ್ನು ತಪಾಸಣೆ ಮಾಡಿದಾಗ ವಾಹನದ ಹಿಂದುಗಡೆ ಪಾರ್ಟಿಷನ್ ಮಾಡಿ ಬಚ್ಚಿಟ್ಟು 09 ವಿವಿಧ ನಮೂನೆಯ ಗೋವಾ ರಾಜ್ಯದಲ್ಲಿ ಮಾರಾಟಕ್ಕೆ ಎಂದು ನಮೂದಿರುವ 760 ಬಾಟಲಿಗಳಲ್ಲಿ ಒಟ್ಟು 239.400.ಲೀ ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿರುವಾಗ ಪತ್ತೆಯಾಗಿರುತ್ತದೆ.

ಆರೋಪಿತರಾದ ನಾಗೇಶ ನಾರಾಯಣ ಪಾಟೀಲ ವಯಸ್ಸು: 34 ವರ್ಷ ಉದ್ಯೋಗ: ಡ್ರೈವರ್ ಸಾ: ಮ.ನಂ:387 ಶಿವಾಜಿ ಗಲ್ಲ, ಬಹದ್ದೂರವಾಡಿ ತಾ/ಜಿ:ಬೆಳಗಾವಿ, ಸಾಹಿಲ್ ಲಕ್ಷ್ಮಣ ಪಾಟೀಲ ವಯಸ್ಸು: 19 ವರ್ಷ. ಬ್ರಹ್ಮಲಿಂಗಗಲ್ಲಿ, ಬಹದ್ದೂರವಾಡಿ ತಾ/ಜಿ:ಬೆಳಗಾವಿ ಇವರನ್ನು ಸ್ಥಳದಲ್ಲಿಯೇ ಬಂಧಿಸಲಾಗಿದೆ.

ಬಿಳಿ ಬಣ್ಣದ ಅಶೋಕ ಲೆಲ್ಯಾಂಡ್ ಕಂಪನಿಯ ನಾಲ್ಕು ಚಕ್ರ ಗೂಡ್ಸ್ ವಾಹನ ಸಂಖ್ಯೆ ಕೆಎ-22 ಸಿ-9398 ವಾಹನದ ಮಾಲೀಕನನ್ನು ಪತ್ತೆ ಹಚ್ಚಿ ಬಂಧಿಸಬೇಕಾಗಿದೆ. ಪ್ರಕರಣದ ಮುಂದಿನ ಕ್ರಮಕ್ಕಾಗಿ ವಾಹನ ಹಾಗೂ ಮುದ್ದೆಮಾಲನ್ನು ಪಂಚನಾಮೆ ಪ್ರಕಾರ ಜಪ್ತು ಮಾಡಿಕೊಂಡು ಸರ್ಕಾರದ ವಶಕ್ಕೆ ತೆಗೆದುಕೊಳ್ಳಲಾಯಿತು.

ದಾಳಿಯನ್ನು ಡಾ:ವೈ ಮಂಜುನಾಥ ಅಬಕಾರಿ ಅವರ ಆಯುಕ್ತರು ಕೇಂದ್ರ ಸ್ಥಾನ ಬೆಳಗಾವಿ, ಫಿರೋಜಖಾನ ಕಿಲ್ಲೇದಾರ ಅಬಕಾರಿ ಜಂಟಿ ಆಯುಕ್ತರು, ಬೆಳಗಾವಿ ವಿಭಾಗ, ಬೆಳಗಾವಿ, ವನಜಾಕ್ಷಿ ಎಂ. ಅಬಕಾರಿ ಉಪ ಆಯುಕ್ತರು, ಬೆಳಗಾವಿ (ದಕ್ಷಿಣ) ಜಿಲ್ಲೆ, ಬೆಳಗಾವಿ, ವಿಜಯಕುಮಾರ ಹಿರೇಮಠ, ಅಬಕಾರಿ ಅಧೀಕ್ಷಕರು, ಅಬಕಾರಿ ಉಪ ಆಯುಕ್ತರ ಕಚೇರಿ, ಬೆಳಗಾವಿ (ದಕ್ಷಿಣ) ಜಿಲ್ಲೆ ಇವರ ಮಾರ್ಗದರ್ಶನದಲ್ಲಿ ರವಿ ಮುರಗೋಡ ಅಬಕಾರಿ ಉಪ ಅಧೀಕ್ಷಕರು ಬೆಳಗಾವಿ ಉಪ ವಿಭಾಗ, ಬೆಳಗಾವಿ ಇವರು ಪ್ರಕರಣವನ್ನು ದಾಖಲಿಸಿಕೊಂಡಿರುತ್ತಾರೆ. ದಾಳಿಯಲ್ಲಿ ಮಂಜುನಾಥ ಗಲಗಲಿ, ಅಬಕಾರಿ ನಿರೀಕ್ಷಕರು, ಉಪ ವಿಭಾಗ, ಬೆಳಗಾವಿ, ಸುನೀಲ ಪಾಟೀಲ, ಅಬಕಾರಿ ಪೇದೆ. ಮಹಾದೇವಪ್ಪ ಕಟಗೆನ್ನವರ, ಅಬಕಾರಿ ಪೇದೆ ಹಾಗೂ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ