Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತಾನು ಓಡಿಸುತ್ತಿದ್ದ ಆಟೋದಲ್ಲೇ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು !

ಬೆಳಗಾವಿ : ತಾನು ಓಡಿಸುತ್ತಿದ್ದ ಆಟೋದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಮಂಗಳವಾರ ಈ ಘಟನೆ ಬೆಳಕಿಗೆ ಬಂದಿದೆ.



ಆತ್ಮಹತ್ಯೆ ಮಾಡಿಕೊಂಡವರನ್ನು ಮುನವಳ್ಳಿಯ ನಾಗಲಿಂಗನಗರದ ರಾಘವೇಂದ್ರ ನಾರಾಯಣ ಜಾಧವ
(28)ಮತ್ತು ರಂಜಿತಾ ಅಡಿವೆಪ್ಪ ಚೋಬಾರಿ (25) ಎಂದು ಗುರುತಿಸಲಾಗಿದೆ.

ಇವರು ಪ್ರೇಮಿಗಳು. ಹಲವು ವರ್ಷಗಳಿಂದ ಪ್ರೇಮಿಸುತ್ತಿದ್ದರು. ಆದರೆ ಇವರ ವಿವಾಹಕ್ಕೆ ಮನೆಯವರು ಒಪ್ಪಿಗೆ ನೀಡಿರಲಲ್ಲ. ಈ ನಡುವೆ ಇತ್ತೀಚಿಗೆ ರಂಜಿತಾಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥ ನಡೆದಿತ್ತು. ಇದರಿಂದ ಬೇಸರಗೊಂಡ ಇಬ್ಬರು ಆಟೋದಲ್ಲಿ ಬಂದು ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ವಿವರ :
ಯರಗಟ್ಟಿ ಸಮೀಪದಲ್ಲಿರುವ, ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಹೊರವಲಯದಲ್ಲಿ ಪ್ರೇಮಿಗಳು ಆಟೊ ರಿಕ್ಷಾದಲ್ಲಿಯೇ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಹಿರೇನಂದಿ ಗ್ರಾಮವು ಯರಗಟ್ಟಿ ತಾಲ್ಲೂಕಿನ ಸತ್ತಿಗೇರಿ ಗ್ರಾಮಕ್ಕೆ ಹೊಂದಿಕೊಂಡಿದೆ. ಮಂಗಳವಾರ ಬೆಳಿಗ್ಗೆ ಸತ್ತಿಗೇರಿ ಗ್ರಾಮಸ್ಥರಿಗೆ ವಿಷಯ ಗೊತ್ತಾಗಿದೆ. ಪ್ರೇಮಿಗಳು ಸೋಮವಾರ ರಾತ್ರಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ರಾಘವೇಂದ್ರ ಹಾಗೂ ರಂಜಿತಾ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಈಚೆಗೆ ರಂಜಿತಾ ಅವರಿಗೆ ಬೇರೊಬ್ಬ ಹುಡುಗನ ಜತೆಗೆ ವಿವಾಹ ನಿಶ್ಚಿತಾರ್ಥ ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಆಟೊದ ಮೇಲಿನ ಕಬ್ಬಿಣ ಸಲಾಖೆಗೆ ಹಗ್ಗ ಕಟ್ಟಿದ್ದು, ಇಬ್ಬರ ದೇಹಗಳೂ ಕಾಲು ಮುದುಡಿಕೊಂಡು ಕೆಳಗೆ ಇಳಿಬಿಟ್ಟಂಥ ಸ್ಥಿತಿಯಲ್ಲಿ ಪತ್ತೆಯಾಗಿವೆ.

ನಮ್ಮ ಸಹೋದರ ಪ್ರೀತಿಯ ವಿಚಾರವಾಗಿ ಮನೆಯಲ್ಲಿ ಏನೂ ಹೇಳಿಲ್ಲ. ಅವನು ಆಟೊ ಓಡಿಸುತ್ತಿದ್ದ.

ಸೋಮವಾರ ಮಧ್ಯಾಹ್ನ ಆಟೊ ತೆಗೆದುಕೊಂಡು ಕೆಲಸಕ್ಕೆ ಹೋದವನು ಮತ್ತೆ ಮನೆಗೆ ಬಂದಿರಲಿಲ್ಲ. ಮಂಗಳವಾರ ಬೆಳಿಗ್ಗೆ ಪೊಲೀಸರು ವಿಷಯ ತಿಳಿಸಿದಾಗಲೇ ಘಟನೆ ಗೊತ್ತಾಗಿದೆ. ಚಿಕ್ಕ ಆಟೊದಲ್ಲಿಯೇ ಇಬ್ಬರೂ ಹಗ್ಗದಿಂದ ನೇಣು ಹಾಕಿಕೊಂಡ ರೀತಿ ಪತ್ತೆಯಾಗಿದ್ದಾರೆ. ಇದು ಹೇಗೆ ಸಾಧ್ಯ ಎಂದು ತಿಳಿಯುತ್ತಿಲ್ಲ. ಪೊಲೀಸರು ತನಿಖೆ ಮಾಡಬೇಕು' ಎಂದು ರಾಘವೇಂದ್ರ ಅವರ ಸಹೋದರ ಸೋಮನಾಥ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ